ಹೆಲಿಕಾಪ್ಟರ್ ದುರಂತ: ಸೇನಾ ಮುಖ್ಯಸ್ಥ ರಾವತ್ ಸ್ಥಿತಿ ಗಂಭೀರ;ಪತ್ನಿ ಸೇರಿ 13 ಮಂದಿ ಶವ ಪತ್ತೆ
ರಾವತ್ ಮತ್ತು ಅಧಿಕಾರಿಗಳು. ನಂತರ ಎಂಐ-17ವಿ 5 ಹೆಲಿಕಾಪ್ಟರ್ ನಲ್ಲಿ ಸೂಳೂರಿನತ್ತ ಪ್ರಯಾಣಿಸಿದ್ದರು.
Team Udayavani, Dec 8, 2021, 3:34 PM IST
ಚೆನ್ನೈ: ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ 12 ಮಂದಿ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಸೇನೆಯ ಅತ್ಯಾಧುನಿಕ MI-17 V5 ಹೆಲಿಕಾಪ್ಟರ್ ತಮಿಳುನಾಡಿನ ಕೂನುರು ಸಮೀಪ ಪತನಕ್ಕೀಡಾದ ಭೀಕರ ದುರಂತ ಬುಧವಾರ (ಡಿಸೆಂಬರ್ 08) ನಡೆದಿದೆ.
ಇದನ್ನೂ ಓದಿ:ಬಂಗಾರದ ಸರವನ್ನೇ ತಿಂದ ಆಕಳು :ಶಸ್ತ್ರ ಚಿಕಿತ್ಸೆ ಮಾಡಿ ಹೊರ ತೆಗೆದ ಪಶು ವಿಜ್ಞಾನಿ
ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಸೇರಿದಂತೆ ಮೂವರನ್ನು ರಕ್ಷಿಸಲಾಗಿದೆ. ಇನ್ನುಳಿದ ಹನ್ನೊಂದು ಮಂದಿಯ ಶವವನ್ನು ಹೊರಕ್ಕೆ ತೆಗೆಯಲಾಗಿದೆ ಎಂದು ವರದಿ ತಿಳಿಸಿದೆ. ಇಂದು ಮುಂಜಾನೆ ದೆಹಲಿಯಿಂದ ತಮಿಳುನಾಡಿಗೆ ವಿಮಾನದಲ್ಲಿ ಆಗಮಿಸಿದ್ದ ರಾವತ್ ಮತ್ತು ಅಧಿಕಾರಿಗಳು. ನಂತರ ಎಂಐ-17ವಿ 5 ಹೆಲಿಕಾಪ್ಟರ್ ನಲ್ಲಿ ಸೂಳೂರಿನತ್ತ ಪ್ರಯಾಣಿಸಿದ್ದರು.
ಆದರೆ ಹವಾಮಾನ ವೈಪರೀತ್ಯದಿಂದಾಗಿ ಎಂಐ-17ವಿ 5 ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗಲು ಕೇವಲ ಐದು ನಿಮಿಷಗಳು ಬಾಕಿ ಇರುವಾಗಲೇ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಬಿಪಿನ್ ರಾವತ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವೆಲ್ಲಿಂಗ್ಟ್ ನಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಪಿನ್ ರಾವತ್ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಮಂದಿ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಘಟನೆ ನಡೆಯಲಿ ಕಾರಣ ಎಂಬ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಭಾರತೀಯ ವಾಯುಸೇನೆ ಟ್ವೀಟ್ ಮೂಲಕ ತಿಳಿಸಿದೆ. ಹೆಲಿಕಾಪ್ಟರ್ ಮರಕ್ಕೆ ಡಿಕ್ಕಿಹೊಡೆದು ಕೆಳಕ್ಕೆ ಬಿದ್ದಿದ್ದು, ನಂತರ ಬೆಂಕಿಹೊತ್ತಿಕೊಂಡಿರುವುದಾಗಿ ವರದಿ ತಿಳಿಸಿದೆ. ಘಟನೆ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!