ಜಮ್ಮು-ಕಾಶ್ಮೀರ: ಉಗ್ರರ ದಾಳಿಗೆ ಸೇನಾ ಅಧಿಕಾರಿ ಸೇರಿ ಐವರು ಯೋಧರು ಹುತಾತ್ಮ
ಕಣಿವೆ ಪ್ರದೇಶದಲ್ಲಿ ನಾಗರಿಕರನ್ನು ಹತ್ಯೆಗೈದ ಘಟನೆಯಲ್ಲಿ ಶಾಮೀಲಾಗಿದ್ದ
Team Udayavani, Oct 11, 2021, 1:39 PM IST
ನವದೆಹಲಿ:ಜಮ್ಮು-ಕಾಶ್ಮೀರದ ರಜೌರಿ ಸೆಕ್ಟರ್ ನ ಪೀರ್ ಪಂಜಾಲ್ ವಲಯದ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ಕಾರ್ಯಾಚರಣೆ ವೇಳೆ ಉಗ್ರರು ನಡೆಸಿದ ಪ್ರತಿದಾಳಿಯಲ್ಲಿ ನಾಲ್ವರು ಸೈನಿಕರು ಹಾಗೂ ಸೇನಾ ಅಧಿಕಾರಿ ಸೇರಿದಂತೆ ಐವರು ಹುತಾತ್ಮರಾಗಿರುವ ಘಟನೆ ಸೋಮವಾರ (ಅಕ್ಟೋಬರ್ 11) ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಪೋಕ್ಸೋ ಅಡಿ 3 ಮಕ್ಕಳ ತಂದೆ ಅರೆಸ್ಟ್: ವಿದ್ಯಾರ್ಥಿನಿಗೆ ಬೆದರಿಸಿ, ಅಪಹರಿಸಿ ಅತ್ಯಾಚಾರ ಆರೋಪ
ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ ವೇಳೆ ನಡೆದ ಪ್ರತಿದಾಳಿಯಲ್ಲಿ ಸೈನಿಕರು ಹುತಾತ್ಮರಾದ ಘಟನೆ ಬಗ್ಗೆ ಈವರೆಗೂ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ವರದಿ ಹೇಳಿದೆ. ಇದಕ್ಕೂ ಮುನ್ನ ಅನಂತ್ ನಾಗ್ ಮತ್ತು ಬಂಡಿಪೋರಾ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದರು.
ಸಾವನ್ನಪ್ಪಿರುವ ಉಗ್ರರನ್ನು ಲಷ್ಕರ್ ಎ ತೊಯ್ಬಾದ ಜತೆ ನಂಟು ಹೊಂದಿದ್ದ ಇಮ್ತಿಯಾಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ಈತ ಕಣಿವೆ ಪ್ರದೇಶದಲ್ಲಿ ನಾಗರಿಕರನ್ನು ಹತ್ಯೆಗೈದ ಘಟನೆಯಲ್ಲಿ ಶಾಮೀಲಾಗಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.
ಅನಂತ್ ನಾಗ್ ಜಿಲ್ಲೆಯ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದ ಪರಿಣಾಮ ಯೋಧರು ಪ್ರತಿದಾಳಿ ನಡೆಸಿದಾಗ ಉಗ್ರ ಸಾವನ್ನಪ್ಪಿದ್ದ. ಆತನ ಬಳಿ ಇದ್ದ ಪಿಸ್ತೂಲ್, ಗ್ರೆನೇಡ್ ವಶಕ್ಕೆ ತೆಗೆದುಕೊಂಡಿರುವುದಾಗಿ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ
Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್
Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್. ಅಶೋಕ್
Prajwal ಪತ್ತೆಗೆ ಎಸ್ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ
HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ
Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ
Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್