
ಸಿಕ್ಕಿಂನಲ್ಲಿ ಭಾರೀ ಹಿಮಪಾತ: ಸೇನೆಯಿಂದ 400 ಪ್ರವಾಸಿಗರ ರಕ್ಷಣೆ
Team Udayavani, Mar 12, 2023, 9:50 PM IST

ಗ್ಯಾಂಗ್ಟಾಕ್: ಸಿಕ್ಕಿಂನಲ್ಲಿ ಭಾರೀ ಹಿಮಪಾತದ ನಂತರ ಸಂಕಷ್ಟಕ್ಕೆ ಸಿಲುಕಿದ್ದ ಸುಮಾರು 400 ಪ್ರವಾಸಿಗರನ್ನು ಸೇನೆ ರಕ್ಷಿಸಿದೆ ಮತ್ತು ನಂತರ ವೈದ್ಯಕೀಯ ಆರೈಕೆ ಮತ್ತು ಆಹಾರ ಸೇರಿದಂತೆ ತುರ್ತು ಸಹಾಯವನ್ನು ಒದಗಿಸಿದೆ ಎಂದು ರಕ್ಷಣಾ ಮೂಲಗಳು ಭಾನುವಾರ ತಿಳಿಸಿವೆ.
ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ಅವರು, 142 ಮಹಿಳೆಯರು ಮತ್ತು 50 ಮಕ್ಕಳು ಸೇರಿದಂತೆ ಸುಮಾರು 400 ಪ್ರವಾಸಿಗರು, ಸುಮಾರು 100 ವಾಹನಗಳಲ್ಲಿ ಪ್ರಯಾಣಿಸುತ್ತಿದ್ದರು. ಶನಿವಾರ ಮಧ್ಯಾಹ್ನ ಸಿಕ್ಕಿಂನ ನಾತು ಲಾ ಮತ್ತು ತ್ಸೋಮ್ಗೊ (ಚಾಂಗು) ಸರೋವರದಿಂದ ಹಿಂದಿರುಗುವಾಗ ಸಿಕ್ಕಿಬಿದ್ದಿದ್ದಾರೆ.
ತ್ರಿಶಕ್ತಿ ಕಾರ್ಪ್ಸ್ನ ಸೇನಾ ಯೋಧರು, ವಕ್ತಾರರು, ಪೊಲೀಸ್ ಮತ್ತು ನಾಗರಿಕ ಆಡಳಿತದ ಸಹಯೋಗದೊಂದಿಗೆ ತಕ್ಷಣವೇ “ಆಪರೇಷನ್ ಹಿಮ್ರಾಹತ್” ಕಾರ್ಯಾಚರಣೆ ನಡೆಸಿ ಪ್ರವಾಸಿಗರನ್ನು ರಕ್ಷಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Damadan Purva: ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುತ್ತೆ ಮನೆ, ಜಮೀನು, ಆಸ್ತಿ.!

Delhi: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ವಿಕಲಚೇತನ ಮುಸ್ಲಿಂ ವ್ಯಕ್ತಿಗೆ ಥಳಿತ; ಮೃತ್ಯು

ISKCON: ಗೋರಕ್ಷಣೆ ಹೆಸರಲ್ಲಿ ಇಸ್ಕಾನ್ ಗೋವುಗಳನ್ನು ಕಟುಕರಿಗೆ ಮಾರುತ್ತಿದೆ… ಮನೇಕಾ ಗಾಂಧಿ

NIA Raids: ಭಯೋತ್ಪಾದಕ ಚಟುವಟಿಕೆ… 6 ರಾಜ್ಯಗಳ 51 ಸ್ಥಳಗಳಲ್ಲಿ ಎನ್ಐಎ ದಾಳಿ