ಸೇನೆ ಹಿಂದೆಗೆತ ಆರಂಭ : ಸೇನಾ ವಾಪಸಾತಿ ಬಗ್ಗೆ ಸಂಸತ್ತಿನಲ್ಲಿ ಸಚಿವ ಸಿಂಗ್‌ ಘೋಷಣೆ


Team Udayavani, Feb 12, 2021, 7:10 AM IST

ಸೇನೆ ಹಿಂದೆಗೆತ ಆರಂಭ : ಸೇನಾ ವಾಪಸಾತಿ ಬಗ್ಗೆ ಸಂಸತ್ತಿನಲ್ಲಿ ಸಚಿವ ಸಿಂಗ್‌ ಘೋಷಣೆ

ಹೊಸದಿಲ್ಲಿ: ಲಡಾಖ್‌ ಗಡಿಯಿಂದ ಭಾರತ ಮತ್ತು ಚೀನ -ಎರಡೂ ದೇಶಗಳ ಸೇನೆಗಳು ಹಿಂದೆಗೆತವನ್ನು ಆರಂಭಿಸಿವೆ ಎಂದು ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಸಂಸತ್‌ನಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ. ಲಡಾಖ್‌ ಬಿಕ್ಕಟ್ಟಿನ ಕುರಿತಾಗಿ ರಾಜ್ಯಸಭೆ, ಲೋಕಸಭೆಯಲ್ಲಿ ಮಾತನಾಡಿದ ಅವರು ಈ ವಿಚಾರವನ್ನು ತಿಳಿಸಿದ್ದಾರೆ.

ಚೀನದೊಂದಿಗೆ ನಮ್ಮ ಉನ್ನತ ಮಿಲಿಟರಿ ಅಧಿಕಾರಿಗಳು ನಡೆಸಿದ ನಿರಂತರ ಮಾತುಕತೆಯ ಕಾರಣದಿಂದಾಗಿ ಉಭಯ ರಾಷ್ಟ್ರಗಳು ಪ್ಯಾಂಗಾಂಗ್‌ ಸರೋವರದ ತಟದಿಂದ ಸೇನೆ ಹಿಂದೆಗೆದುಕೊಳ್ಳಲು ಪರಸ್ಪರ ಸಮ್ಮತಿ ಸೂಚಿಸಿವೆ ಎಂದು ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಪ್ಯಾಂಗಾಂಗ್‌ನ ಉತ್ತರ ಮತ್ತು ದಕ್ಷಿಣ ದಂಡೆಯಲ್ಲಿ ಸೇನೆ ವಾಪಸಾತಿ ಕುರಿತಾಗಿ
ಭಾರತ-ಚೀನಗಳ ನಡುವೆ ಮಹತ್ವದ ಒಪ್ಪಂದವಾಗಿದೆ. ಇದರ ಭಾಗವಾಗಿ ಈಗಾಗಲೇ ವಾಪಸಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

2020ರ ಎಪ್ರಿಲ್‌ ನಿಂದ ಉತ್ತರ ಮತ್ತು ದಕ್ಷಿಣ ಪ್ಯಾಂಗಾಂಗ್‌ ತಟದಲ್ಲಿ ಭಾರತ-ಚೀನ ನಿರ್ಮಿಸಿದ್ದ ಎಲ್ಲ ರೀತಿಯ ಸೈನಿಕ ನಿರ್ಮಾಣಗಳನ್ನು ವಿಸರ್ಜಿಸಲು ಎರಡೂ ರಾಷ್ಟ್ರಗಳು ಹಂತ ಹಂತವಾಗಿ ಕ್ರಮ ಕೈಗೊಳ್ಳಲಿವೆ. ದ್ವಿಪಕ್ಷೀಯ ಒಪ್ಪಂದ ಮತ್ತು ಪ್ರೊಟೊಕಾಲ್ಗಳಿಗೆ ಸಂಪೂರ್ಣ ಬದ್ಧರಾಗಿ, ಬಿಕ್ಕಟ್ಟು ಉಲ್ಬಣಿಸಿದ ಪ್ರದೇಶಗಳಿಂದ ಸೇನೆಯನ್ನು ಹಿಂದೆಗೆದುಕೊಳ್ಳಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಫಿಂಗರ್‌ 4ರಿಂದ 8ಕ್ಕೆ
ಉತ್ತರ ದಂಡೆಯ ಫಿಂಗರ್‌ 4ರಲ್ಲಿದ್ದ ಪಿಎಲ್‌ಎ ತುಕಡಿಗಳು ಫಿಂಗರ್‌ 8ರಲ್ಲಿ ಸ್ಥಾಪನೆಗೊಳ್ಳಲಿವೆ. ಭಾರತೀಯ ಸೇನೆ ಫಿಂಗರ್‌ 3ರ ತನ್ನ ಶಾಶ್ವತ ನೆಲೆಯಾದ ಧನ್‌ಸಿಂಗ್‌ ಥಾಪಾ ಪೋಸ್ಟ್‌ನಲ್ಲಿ ಬೀಡು ಬಿಡಲಿದೆ. ಈ ಕುರಿತಾಗಿ 9ನೇ ಸುತ್ತಿನ ಮಾತುಕತೆಯಲ್ಲಿ ಒಪ್ಪಂದ ಏರ್ಪಟ್ಟಿದೆ ಎಂದು ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ಒಂದಿಂಚು ಜಾಗವನ್ನೂ ಬಿಟ್ಟುಕೊಟ್ಟಿಲ್ಲ
ಚೀನದೊಂದಿಗಿನ ಮಾತುಕತೆಯ ಸಂದರ್ಭ ಭಾರತ ಯಾವ ವಿಚಾರದಲ್ಲೂ ರಾಜಿ ಆಗಿಲ್ಲ. ತನ್ನ ಭೂಪ್ರದೇಶದ ಒಂದಿಂಚು ಜಾಗವನ್ನೂ ಭಾರತ ಯಾರಿಗೂ ಬಿಟ್ಟುಕೊಟ್ಟಿಲ್ಲ ಎಂದು ಸಿಂಗ್‌ ಸ್ಪಷ್ಪ ಪಡಿಸಿದ್ದಾರೆ. ರಾಜತಾಂತ್ರಿಕವಾಗಿ ಎರಡೂ ದೇಶಗಳ ನಡುವೆ ನಡೆಯುತ್ತಿರುವ ಮಾತುಕತೆಗಳು ಮುಂದುವರಿಯಲಿವೆ ಎಂದು ಅವರು ಹೇಳಿದ್ದಾರೆ.

“45 ಪಿಎಲ್‌ಎ ಸೈನಿಕರ ಸಾವು’
ಕಳೆದ ವರ್ಷ ಪೂರ್ವ ಲಡಾಖ್‌ನ ಗಾಲ್ವಾನ್‌ನಲ್ಲಿ ಭಾರತದ ವೀರ ಯೋಧರ ಜತೆಗೆ ನಡೆದ ಘರ್ಷಣೆಯಲ್ಲಿ ಚೀನದ 45 ಮಂದಿ ಸೈನಿಕರು ಮೃತಪಟ್ಟಿದ್ದಾರೆ ಎಂದು ರಷ್ಯಾದ ಸುದ್ದಿಸಂಸ್ಥೆ “ಟಿಎಎಸ್‌ಎಸ್‌’ ಗುರುವಾರ ವರದಿ ಮಾಡಿದೆ. ಭಾರತದ 20 ಮಂದಿ ಯೋಧರೂ ಹುತಾತ್ಮರಾಗಿದ್ದರು ಎಂಬ ಅಂಶವನ್ನು ಅದು ದೃಢಪಡಿಸಿದೆ. ಅಮೆರಿಕ ಮತ್ತು ಇತರ ರಾಷ್ಟ್ರಗಳ ಗುಪ್ತಚರ ಸಂಸ್ಥೆಗಳ ವರದಿ ಉಲ್ಲೇಖೀಸಿ ಈ ಅಂಶ ವರದಿ ಮಾಡಿರುವುದಾಗಿ ಅದು ಹೇಳಿ ಕೊಂಡಿದೆ. ಗಾಲ್ವಾನ್‌ ಘರ್ಷಣೆಯಲ್ಲಿ ತನ್ನ ಕಡೆ ಎಷ್ಟು ಯೋಧರು ಸತ್ತಿದ್ದಾರೆ ಎಂಬ ಬಗ್ಗೆ ಬೀಜಿಂಗ್‌ ದೀರ್ಘ‌ಕಾಲದಿಂದ ಮೌನ ತಳೆದಿತ್ತು.

ವಾಪಸಾತಿಯ ವೀಡಿಯೋ ಬಿಡುಗಡೆ
ಲಡಾಖ್‌ನ ಪ್ಯಾಂಗಾಂಗ್‌ ಸರೋವರ ವ್ಯಾಪ್ತಿಯ ಪ್ರದೇಶದಿಂದ ಸೇನೆಗಳು ವಾಪಸಾಗುತ್ತಿರುವ ಬಗ್ಗೆ ಭಾರತದ ರಕ್ಷಣ ಸಚಿವಾಲಯ ದೃಢ ಪಡಿಸಿದೆ. ಅದಕ್ಕೆ ಪೂರಕವಾಗಿರುವ ವೀಡಿಯೋವನ್ನೂ ಬಿಡುಗಡೆ ಮಾಡ ಲಾಗಿದೆ. ಮುಂಚೂಣಿ ನೆಲೆಗಳಿಂದ ಮೂಲ ನೆಲೆಗಳಿಗೆ ಸೇನಾ ವಾಹನಗಳು, ಸಿಬಂದಿ ವಾಪಸಾಗುತ್ತಿದ್ದಾರೆ. ಈ ಬಗ್ಗೆ ಫೆ. 8, 9ರಂದು ಚುಶೂಲ್‌ನಲ್ಲಿ ಮಾತುಕತೆ ನಡೆದಿತ್ತು. ಬರೋಬ್ಬರಿ 9 ತಿಂಗಳ ಬಿಕ್ಕಟ್ಟಿನ ಬಳಿಕ ಈ ಬೆಳವಣಿಗೆ ನಡೆದಿದೆ. ಇದು ವರೆಗೆ ಒಟ್ಟು 9 ಸುತ್ತಿನ ಮಾತುಕತೆಗಳು ನಡೆದಿವೆ.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.