ಕಬ್ಬಿಣದ ರಾಡ್ ಕಳವು ಮಾಡಿದ್ದ ಆರೋಪಿಗಳ ಸೆರೆ
Team Udayavani, Jun 10, 2023, 5:24 AM IST
ಬಂಟ್ವಾಳ: ಅಮ್ಟಾಡಿ ಗ್ರಾಮ ಪಂಚಾಯತ್ನಲ್ಲಿ ನಡೆಯತ್ತಿದ್ಧ ಕಟ್ಟಡ ಕಾಮಗಾರಿಗೆಂದು ತಂದು ದಾಸ್ತಾನು ಮಾಡಲಾಗಿದ್ದ ಕಬ್ಬಿಣದ ರಾಡ್ಗಳನ್ನು ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸರಪಾಡಿ ಪೆರ್ಲ ದರ್ಖಾಸು ನಿವಾಸಿ ವಿನೋದ್ ಕುಮಾರ್, ಬೆಳ್ತಂಗಡಿ ತಾಲೂಕಿನ ಪುತ್ತಿಲ ನಿವಾಸಿ ಪುನೀತ್, ಅಲ್ಲಿಪಾದೆಯ ಪುರುಷೋತ್ತಮ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 70 ಸಾವಿರ ಮೌಲ್ಯದ 600 ಕೆ.ಜಿ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಾ. 18ರಂದು ಆರೋಪಿಗಳು ಕಳವು ಮಾಡಿದ್ದರು. ಈ ಬಗ್ಗೆ ಪಿಡಿಒ ರವಿ ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದರು.
ಶುಕ್ರವಾರ ಬೆಳಗ್ಗೆ ಎಸ್.ಐ. ರಾಮಕೃಷ್ಣ ಅವರು ಸಿಬಂದಿಯೊಂದಿಗೆ ಮೊಡಂಕಾಪುವಿನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ, ಸಂಶಯಾಸ್ಪದ ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಸಮರ್ಪಕವಾಗಿ ಉತ್ತರ ನೀಡದ ಚಾಲಕ ಸಹಿತ ವಾಹನದಲ್ಲಿದ್ದ ಮೂವರನ್ನು ವಿಚಾರ ನಡೆಸಿದಾಗ ಅಮ್ಟಾಡಿಯ ಕಳ್ಳತನ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರ್ ಇನ್ಸ್ಪೆಕ್ಟರ್ ವಿವೇಕಾನಂದ ಅವರ ನೇತೃತ್ವದದಲ್ಲಿ, ಎಸ್ಐ ರಾಮಕೃಷ್ಣ, ತಾಂತ್ರಿಕ ಸಹಾಯ ನೀಡಿದ ದಿವಾಕರ್ ಮತ್ತು ಸಂಪತ್ ಅವರ ತಂಡ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ