ಕುಂದಾಪುರ ಸೇರಿ ರಾಜ್ಯದ ಐದು ಕಡೆ ಎಆರ್ಟಿಒ ಕಚೇರಿ ಆರಂಭಿಸಲು ಪ್ರಸ್ತಾವ ಸ್ವೀಕೃತಿ : ಸವದಿ
Team Udayavani, Mar 10, 2021, 9:50 PM IST
ವಿಧಾನಸಭೆ: ಉಡುಪಿ ಜಿಲ್ಲೆಯ ಕುಂದಾಪುರ, ರಾಯಚೂರು ಜಿಲ್ಲೆಯ ಸಿಂಧನೂರು ಅಥವಾ ಲಿಂಗಸುಗೂರು, ವಿಜಯಪುರದ ಇಂಡಿ ಅಥವಾ ಸಿಂಧಗಿ, ವಿಜಯಪುರದ ಮುದ್ದೇಬಿಹಾಳ, ದಾವಣಗೆರೆಯ ಹೊನ್ನಾಳಿ ಪಟ್ಟಣದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ತೆರೆಯಲು ಪ್ರಸ್ತಾವ ಸ್ವೀಕೃತಗೊಂಡಿವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಬುಧವಾರ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ನ ಶಿವಾನಂದ ಪಾಟೀಲ್ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ತೆರೆಯುವ ಸಂಬಂಧ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆ ಆಯುಕ್ತರಿಂದ ಐದು ಪ್ರಸ್ತಾವನೆ ಸ್ವೀಕೃತಗೊಂಡಿವೆ. ಹೊಸ ಕಚೇರಿ ತೆರೆಯಲು ಕನಿಷ್ಠ 50 ಕಿ.ಮೀ. ಅಂತರವಿರಬೇಕು. ಬಸವನ ಬಾಗೇವಾಡಿಯು ಕೇವಲ 40 ಕಿ.ಮೀ. ಅಂತರದಲ್ಲಿರುವ ಕಾರಣ ಕಚೇರಿ ಆರಂಭಿಸಲಾಗದು ಎಂದು ತಿಳಿಸಿದರು.
ಇದಕ್ಕೂ ಮೊದಲು ಶಿವಾನಂದ ಪಾಟೀಲ್, ಬಸವನ ಬಾಗೇವಾಡಿ ತಾಲ್ಲೂಕು ಕೇಂದ್ರದಲ್ಲಿ ಸಹಾಯಕ ಸಾರಿಗೆ ಅಧಿಕಾರಿ ಕಚೇರಿ ಅಗತ್ಯವಿದೆ. ಮುದ್ದೇಬಿಹಾಳ ಬದಲಿಗೆ ಬಸವನ ಬಾಗೇವಾಡಿಯಲ್ಲೇ ಕಚೇರಿ ಆರಂಭಿಸುವುದು ಸೂಕ್ತವಾಗಿದೆ. ಹಾಗಾಗಿ ಮುದ್ದೇಬಿಹಾಳದಲ್ಲಿ ಕಚೇರಿ ತೆರೆಯುವ ಪ್ರಸ್ತಾವ ತಡೆ ಹಿಡಿಯಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ :ಮಾರ್ಚ್ 20 – 21ರಂದು ನಿಗದಿಯಾಗಿದ್ದ ಎಸ್ಡಿಎ ಪರೀಕ್ಷೆ ಮುಂದೂಡಿಕೆ
ಇದಕ್ಕೆ ಉತ್ತರಿಸಿದ ಲಕ್ಷ್ಮಣ ಸವದಿ, ಮುದ್ದೇಬಿಹಾಳಕ್ಕೆ ಹಂಚಿಕೆಯಾಗಿರುವ ಕಚೇರಿ ಪ್ರಸ್ತಾವ ತಡೆಹಿಡಿಯುವುದು ಸೂಕ್ತವೆನಿಸದು. ಬಸವನ ಬಾಗೇವಾಡಿಗೆ ಅಗತ್ಯವಿದ್ದರೆ ಕಚೇರಿ ಆರಂಭಿಸುವ ಬಗ್ಗೆ ಶಾಸಕರೊಂದಿಗೆ ಚರ್ಚಿಸಿ ಪರಿಶೀಲಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ