“ದ ಕಾಶ್ಮೀರ್ ಫೈಲ್ಸ್’ ಸಿನೆಮಾ ಯು ಟ್ಯೂಬ್ ಗೆ ಹಾಕಿ ಎಲ್ಲರೂ ನೋಡಲಿ : ಕೇಜ್ರಿವಾಲ್
ಅಗ್ನಿಹೋತ್ರಿ ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೋಟಿಗಟ್ಟಲೆ ಸಂಪಾದಿಸಿದ್ದಾರೆ
Team Udayavani, Mar 25, 2022, 11:47 AM IST
ಹೊಸದಿಲ್ಲಿ: “ದ ಕಾಶ್ಮೀರ್ ಫೈಲ್ಸ್’ ಸಿನೆಮಾವನ್ನು ಯೂ ಟ್ಯೂಬ್ ಹಾಕಿದರೆ ಎಲ್ಲರೂ ನೋಡಬಹುದಲ್ಲ ಎಂದು ಹೇಳುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ದೆಹಲಿ ವಿಧಾನಸಭೆಯಲ್ಲಿ ಚಿತ್ರಕ್ಕೆ ಟ್ಯಾಕ್ಸ್ ಫ್ರೀ ಮಾಡುವ ಕುರಿತು ಮಾತನಾಡಿದ ಕೇಜ್ರಿವಾಲ್, ‘ಟ್ಯಾಕ್ಸ್ ಯಾಕೆ ಫ್ರೀ ಮಾಡಬೇಕು. ಚಿತ್ರವನ್ನು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಹೇಳಿ ಯು ಟ್ಯೂಬ್ ಗೆ ಹಾಕಿಸಿ, ಆಗ ಎಲ್ಲರೂ ನೋಡಬಹುದಲ್ಲ’ ಎಂದರು.
ಬಿಜೆಪಿ ನಾಯಕರು ಮತ್ತು ಸಂಸದರು ರಾಷ್ಟ್ರ ರಾಜಧಾನಿಯಲ್ಲಿ ಟ್ಯಾಕ್ಸ್ ಫ್ರೀ ಮಾಡಲು ಕೇಳಿಕೊಂಡ ಬೆನ್ನಲ್ಲೇ ಕೇಜ್ರಿವಾಲ್ ಈ ಹೇಳಿಕೆ ನೀಡಿದ್ದಾರೆ.
“ಈ ಸದನದೊಳಗೆ ಅವರು ಕೃಷಿ ಕಾನೂನುಗಳನ್ನು ಹೊಗಳಿದರು, ಮತ್ತು ಅವುಗಳನ್ನು ರದ್ದುಗೊಳಿಸಿದ ನಂತರ, ಅವರು ಆ ಕ್ರಮವನ್ನು ಸಹ ಹೊಗಳಿದರು. ನಂತರ ಅವರು ಮದ್ಯದ ಅಂಗಡಿಗಳ ವಿರುದ್ಧ ಪ್ರತಿಭಟಿಸಿದರು. ಈಗ ಅವರು ‘ದಿ ಕಾಶ್ಮೀರ ಫೈಲ್ಸ್’ ಅನ್ನು ತಂದಿದ್ದಾರೆ. ನನ್ನದು ಒಂದೇ ಒಂದು ವಿನಂತಿ ಇದೆ. ನೀವೆಲ್ಲರೂ ರಾಷ್ಟ್ರದ ಬಗ್ಗೆ ಯೋಚಿಸಿ” ಎಂದು ಕೇಜ್ರಿವಾಲ್ ಸದನದಲ್ಲಿ ಹೇಳಿದರು.
”ಅಗ್ನಿಹೋತ್ರಿ ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೋಟಿಗಟ್ಟಲೆ ಸಂಪಾದಿಸಿದ್ದಾರೆ ಮತ್ತು ನೀವು ಗೋಡೆಗಳ ಮೇಲೆ ಪೋಸ್ಟರ್ಗಳನ್ನು ಹಾಕುತ್ತಿದ್ದೀರಿ” ಎಂದು ಬಿಜೆಪಿಗೆ ತಿರುಗೇಟು ನೀಡಿದರು.
ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ, ಕಾಶ್ಮೀರಿ ಪಂಡಿತರ ನರಮೇಧ ಘಟನೆ ಆಧರಿಸಿದ ಜಗತ್ತಿನಾದ್ಯಂತ ಭಾರೀ ಮೆಚ್ಚುಗೆಗೆ ಪಾತ್ರವಾಗಿರುವ ಚಿತ್ರ ಈಗಾಗಲೇ 200 ಕೋಟಿ ರೂ.ಗಳಿಂತಲೂ ಅಧಿಕ ಮೊತ್ತ ಬಾಚಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ