ಪಂಜಾಬ್ ನಲ್ಲಿ 26ವರ್ಷ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸಾಧನೆ ಏನು?ನಮಗೆ ಅವಕಾಶ ಕೊಡಿ
ಈ ವ್ಯಕ್ತಿಗಳು ತಮ್ಮ ಜಮೀನುಗಳನ್ನು ಕೇವಲ 20-25ಲಕ್ಷಕ್ಕೆ ಮಾರಾಟ ಮಾಡುತ್ತಿದ್ದಾರೆ.
Team Udayavani, Feb 5, 2022, 4:30 PM IST
ನವದೆಹಲಿ:ಒಂದು ವೇಳೆ ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದರೆ ಸರಕಾರಿ ಉದ್ಯೋಗದಲ್ಲಿನ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವುದಾಗಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಪಂಜಾಬ್ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಂತೆಯೇ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಜನರಿಗೆ ಉಚಿತ ಭರವಸೆಗಳನ್ನು ನೀಡುವುದನ್ನೂ ಕೂಡಾ ರಾಜಕೀಯ ಪಕ್ಷಗಳು ಮುಂದುವರಿಸಿವೆ ಎಂದು ವರದಿ ತಿಳಿಸಿದೆ.
ಶುಕ್ರವಾರ (ಫೆ.05) ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿರುವ ಕೇಜ್ರಿವಾಲ್, ಯುವಕರನ್ನು ಪಂಜಾಬ್ ನಿಂದ ಬಲವಂತವಾಗಿ ವಿದೇಶಕ್ಕೆ ಕಳುಹಿಸಲಾಗುತ್ತಿದೆ. ಈ ವ್ಯಕ್ತಿಗಳು ತಮ್ಮ ಜಮೀನುಗಳನ್ನು ಕೇವಲ 20-25ಲಕ್ಷಕ್ಕೆ ಮಾರಾಟ ಮಾಡುತ್ತಿದ್ದಾರೆ. ಒಂದು ವೇಳೆ ಇದು ಮುಂದುವರಿದರೆ ಪಂಜಾಬ್ ನಲ್ಲಿ ಏನಾಗಬಹುದು? ಆ ರೀತಿ ಆಗಲು ನಾವು (ಎಎಪಿ) ಬಿಡುವುದಿಲ್ಲ. ಒಂದು ವೇಳೆ ಆಮ್ ಆದ್ಮಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದರೆ ಸರ್ಕಾರಿ ಉದ್ಯೋಗದಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಾಗಿ ತಿಳಿಸಿದ್ದಾರೆ.
ರಾಜ್ಯದ ಅಧಿಕಾರದ ಗದ್ದುಗೆ ಹಿಡಿದ ವಿರೋಧ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೇಜ್ರಿವಾಲ್, ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷ 26 ವರ್ಷ ಆಡಳಿತ ನಡೆಸಿದೆ. ಶಿರೋಮಣಿ ಅಕಾಲಿ ದಳ 19 ವರ್ಷ ಪಂಜಾಬ್ ನಲ್ಲಿ ಅಧಿಕಾರ ನಡೆಸಿತ್ತು ಎಂದು ಹೇಳಿದರು.
ಒಂದು ವೇಳೆ ನೀವು(ಮತದಾರರು) ನಮಗೆ ಮತ ಚಲಾಯಿಸಿದರೆ ಕೈಗಾರಿಕಗಳು ಮತ್ತೆ ತಲೆಎತ್ತಲಿದೆ, ಹೊಸ ಕೈಗಾರಿಕೆಗಳಿಗೆ ಅವಕಾಶವಾಗಲಿದೆ, ಹೊಸ ಶಾಲೆ, ಹೊಸ ಆಸ್ಪತ್ರೆ ನಿರ್ಮಾಣಗೊಳ್ಳಲಿದೆ. ಇದನ್ನು ನಾವು ದೆಹಲಿಯಲ್ಲಿ ಮಾಡಿದ್ದೇವೆ ಎಂದು ಕೇಜ್ರಿವಾಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ