ನಲಪಾಡ್ ಹೆಸರು ಬಹಿರಂಗವಾದ ಬಳಿಕ ಕಾಂಗ್ರೆಸ್ ಮೌನ : ಅಶ್ವಥ್ ನಾರಾಯಣ
Team Udayavani, Nov 29, 2021, 12:28 PM IST
ಬೆಂಗಳೂರು : ಮೊಹಮದ್ ನಲಪಾಡ್ ಹೆಸರು ಬಿಟ್ ಕಾಯಿನ್ ನಲ್ಲಿ ಪ್ರಸ್ತಾಪವಾದ ಬಳಿಕ ಕಾಂಗ್ರೆಸ್ ಮೌನವಾಗಿದೆ ಎಂದು ಬಿಜೆಪಿ ವಕ್ತಾರ, ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವಥ್ ನಾರಾಯಣ ಗೌಡ ಸೋಮವಾರ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಟಿ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ನ ನಾಯಕರು ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ.ಆಧಾರ ರಹಿತ ಆರೋಪ ಮಾಡಿ ಜನತೆ ಮುಂದೆ ಕಾಂಗ್ರೆಸ್ ಬೆತ್ತಲಾಗಿದೆ. ಆಧಾರಹಿತ ಆರೋಪ ಮಾಡೋದು ಸಿದ್ದರಾಮಯ್ಯ, ಡಿಕೆಶಿಗೆ ಚಾಳಿಯಾಗಿದೆ ಎಂದರು.
ಬಿಟ್ ಕಾಯಿನ್ ಹಗರದಣ ಬಗ್ಗೆ ಕಾಂಗ್ರೆಸ್ ಒಂದೇ ಒಂದು ದಾಖಲೆ ಕೊಡಲಿಲ್ಲ. ಈಗ ಪರಿಷತ್ ಚುನಾವಣೆ ಬಂದಿದೆ. ಕಾಂಗ್ರೆಸ್ ನಾಯಕರು ಮೈಮೇಲೆ ದೆವ್ವ ಬಂದ ಹಾಗೆ ಮಾತನಾಡುತ್ತಿದ್ದಾರೆ ಎಂದರು.
ಟೆಂಡರ್ ನಲ್ಲಿ 40% ಆರೋಪ ಸುಳ್ಳು
ಕಾಂಗ್ರೆಸ್ ಕಡೆಯ ಗುತ್ತಿಗೆದಾರರ ಮೂಲಕ ಪತ್ರ ಬರೆದಿರೋದಾಗಿ ವದಂತಿ ಹಬ್ಬಿಸಿದ್ದಾರೆ ಕಾಂಗ್ರೆಸ್ ನಾಯಕರು
ಪ್ರಧಾನಿಗೆ ಪತ್ರ ಬರೆಸಿದ್ದು ಕಾಂಗ್ರೆಸ್ ನವರು. ಕಾಂಗ್ರೆಸ್ ನ ಗೋವಿಂದರಾಜ್ ಮನೆಯಲ್ಲಿ ಸಿಕ್ಕ ಡೈರಿ ಬಗ್ಗೆ ಇನ್ನೂ ಸ್ಪಷ್ಟನೆ ಕೊಟ್ಟಿಲ್ಲ. ಉಗ್ರಪ್ಪ ಸಲೀಂ ಅಹಮದ್ ಅವರು ಡಿಕೆಶಿ ಅವರ ಕಮೀಷನ್ ಬಗ್ಗೆ ಮಾತಾಡಿದ್ದರಲ್ಲವೇ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ