ಚುನಾವಣ ಆಯೋಗದಿಂದ ವರ್ಗಾವಣೆ ನೀತಿ ಪ್ರಕಟ; ವಿಧಾನಸಭೆ ಚುನಾವಣೆ ಪ್ರಕ್ರಿಯೆ ಚುರುಕು

ಒಂದೇ ಕಡೆ ಇರುವ ಅಧಿಕಾರಿಗಳ ವರ್ಗಾವಣೆಗೆ ಸೂಚನೆ

Team Udayavani, Dec 10, 2022, 6:40 AM IST

ಚುನಾವಣ ಆಯೋಗದಿಂದ ವರ್ಗಾವಣೆ ನೀತಿ ಪ್ರಕಟ; ವಿಧಾನಸಭೆ ಚುನಾವಣೆ ಪ್ರಕ್ರಿಯೆ ಚುರುಕು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿರುವಂತೆ ಚುನಾವಣ ಪ್ರಕ್ರಿಯೆಗಳನ್ನು ಚುರುಕುಗೊಳಿಸಿರುವ ಕೇಂದ್ರ ಚುನಾವಣಾ ಆಯೋಗವು ಅಧಿಕಾರಿಗಳ ವರ್ಗಾವಣೆ ನೀತಿಯನ್ನು ಹೊರಡಿಸಿದೆ. ಸ್ವಂತ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಗೂ ಮೂರು ವರ್ಷಗಳಿಂದ ಒಂದೇ ಕಡೆ ಠಿಕಾಣಿ ಹೂಡಿರುವ ಅಧಿಕಾರಿಗಳನ್ನು ವರ್ಗಾಯಿಸುವಂತೆ ಸೂಚಿಸಿದೆ.

ಕರ್ನಾಟಕ ವಿಧಾನಸಭೆಯ ಅವಧಿ 2023ರ ಮೇ 24ರಂದು ಮುಕ್ತಾಯಗೊಳ್ಳಲಿದ್ದು, ಅದರೊಳಗೆ ಸಾರ್ವತ್ರಿಕ ಚುನಾವಣೆ ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣ ಆಯೋಗ ನೀತಿಯನ್ನು ಹೊರಡಿಸಿದ್ದು, ಈ ಸಂಬಂಧ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆಯಲಾಗಿದೆ.

ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಗೆ ಸಂಬಂಧಿಸಿದ ನೀತಿಯನ್ನು ಅನುಷ್ಠಾನಗೊಳಿಸಿರುವ ಬಗ್ಗೆ 2023ರ ಜ. 31ರೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿರುವ ಆಯೋಗ, ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ತಾಕೀತು ಮಾಡಿದೆ. ಒಂದು ವೇಳೆ ಯಾವುದೇ ಅಧಿಕಾರಿಗಳು ತವರು ಜಿಲ್ಲೆಯಲ್ಲೇ ಕರ್ತವ್ಯ ನಿರ್ವಹಿಸುತ್ತಿರುವುದು ಆಯೋಗದ ಗಮನಕ್ಕೆ ಬಂದರೆ ಅಂಥವರ ಮೇಲೆ ತತ್‌ಕ್ಷಣವೇ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.

ನೇರವಾಗಿ ಚುನಾವಣ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ವಲಯ, ಜಿಲ್ಲಾ ಮತ್ತು ಸ್ಥಳೀಯ ಹಂತದ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸ್‌ ಅಧಿಕಾರಿಗಳಿಗೆ ಈ ವರ್ಗಾವಣೆ ನೀತಿ ಅನ್ವಯವಾಗಲಿದೆ.

ಚುನಾವಣ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಥವಾ ಮತದಾರರ ಪಟ್ಟಿಯ ಪರಿಷ್ಕರಣೆ ಉಸ್ತುವಾರಿ ಹೊತ್ತಿರುವ ಅಧಿಕಾರಿಗಳ ವರ್ಗಾವಣೆಗೆ ಆದೇಶಗಳನ್ನು ಹೊರಡಿಸಿದ್ದರೆ, ಅಂತಹ ಆದೇಶಗಳನ್ನು ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡ ಬಳಿಕ ಮುಖ್ಯ ಚುನಾವಣಾಧಿಕಾರಿಯ ಸಮ್ಮತಿ ಬಳಿಕ ಕಾರ್ಯಗತಗೊಳಿಸಬೇಕು.

ವರ್ಗಾವಣೆಗೊಳಿಸುವ ವಿಶೇಷ ಸನ್ನಿವೇಶ ಎದುರಾದಾಗ ಕೇಂದ್ರ ಚುನಾವಣ ಆಯೋಗದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ವರ್ಗಾವಣೆ ನೀತಿಯಲ್ಲಿ ಏನಿದೆ?
– ಸ್ವಂತ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆ, 3 ವರ್ಷಗಳಿಂದ ಒಂದೇ ಜಿಲ್ಲೆಯಲ್ಲಿದ್ದರೆ, ಇಲ್ಲವೇ ನಾಲ್ಕು ವರ್ಷ ಪೂರೈಸಿದ್ದರೆ ಅಂತಹ ಅಧಿಕಾರಿಗಳನ್ನು 2023ರ ಮೇ 31ಕ್ಕೆ ಕೊನೆಗೊಳ್ಳುವಂತೆ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕು.

-ಅಧಿಕಾರಿಗಳನ್ನು ಅವರ ಸ್ವಂತ ಜಿಲ್ಲೆಗೆ ನಿಯೋಜಿಸಬಾರದು. ಜಿಲ್ಲಾ ಹಂತದ ಅಧಿಕಾರಿಗಳಾದ ಜಿಲ್ಲಾ ಚುನಾವಣಾಧಿಕಾರಿ (ಡಿಇಒ) ಉಪ ಡಿಇಒ, ರಿಟರ್ನಿಂಗ್‌ ಆಫೀಸರ್‌ (ಆರ್‌ಒ) ಅಸಿಸ್ಟೆಂಟ್‌ ರಿಟರ್ನಿಂಗ್‌ ಆಫಿಸರ್‌ (ಎಆರ್‌ಒ), ಚುನಾವಣ ಕೆಲಸಕ್ಕೆ ನಿಯೋಜನೆಗೊಂಡ ನೋಡಲ್‌ ಅಧಿಕಾರಿಗಳು, ಇವರಲ್ಲದೇ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್‌, ಉಪ ವಿಭಾಗ ಮ್ಯಾಜಿಸ್ಟ್ರೇಟ್‌, ಉಪವಿಭಾಗಾಧಿಕಾರಿ, ತಹಶೀಲ್ದಾರ್‌, ಬಿಡಿಒ ಸೇರಿ ತತ್ಸಮಾನ ದರ್ಜೆಯ ಚುನಾವಣ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ಈ ನೀತಿ ಅನ್ವಯವಾಗಲಿದೆ.

– ಪೊಲೀಸ್‌ ಇಲಾಖೆಯ ವಲಯ ಐಜಿ, ಡಿಐಜಿ, ರಾಜ್ಯ ಸಶಸ್ತ್ರ ಪೊಲೀಸ್‌ ಕಮಾಂಡೆಂಟ್‌, ಎಸ್‌ಎಸ್‌ಪಿ, ಎಸ್ಪಿ, ಎಎಸ್ಪಿ, ಡಿವೈಎಸ್ಪಿ, ಸಿಪಿಐ, ಪಿಎಸ್‌ಐ, ಎಸ್‌ಐ ಅಧಿಕಾರಿಗಳಿಗೂ ವರ್ಗಾವಣೆ ನೀತಿ ಅನ್ವಯವಾಗುತ್ತದೆ.

– ನೇರವಾಗಿ ಚುನಾವಣ ಕೆಲಸಕ್ಕೆ ಸಂಬಂಧ ಪಡದ ಡಾಕ್ಟರ್‌, ಎಂಜಿನಿಯರ್‌, ಪ್ರಿನ್ಸಿಪಾಲ್‌, ಶಿಕ್ಷಕರಿಗೆ ಈ ನೀತಿ ಅನ್ವಯವಾಗುವುದಿಲ್ಲ. ಆದರೆ ಈ ಅಧಿಕಾರಿಗಳ ವಿರುದ್ಧ ದೂರು, ಆರೋಪಗಳು ಕೇಳಿ ಬಂದಲ್ಲಿ ತನಿಖೆ ನಡೆಸಿ ವರ್ಗಾವಣೆಗೊಳಿಸುವುದರ ಜತೆಗೆ ಇಲಾಖಾ ವಿಚಾರಣೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಶಿಫಾರಸು ಮಾಡಬೇಕು.

– ಯಾವುದೇ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇದ್ದರೆ ಅಂಥವರನ್ನು ಚುನಾವಣ ಕರ್ತವ್ಯಕ್ಕೆ ನಿಯೋಜಿಸದಂತೆ ತಾಕೀತು ಮಾಡಲಾಗಿದೆ. ನಿವೃತ್ತಿಗೆ 6 ತಿಂಗಳು ಬಾಕಿ ಇದ್ದರೆ ಅಂತಹವರನ್ನು ಮೂರು ವರ್ಷದ ಸೇವೆಯ ಷರತ್ತಿನಿಂದ ವಿನಾಯಿತಿ ನೀಡಲಾಗಿದೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.