ಇಂಟರ್ ಪೋಲ್ ಸಭೆ: ಭೂಗತ ಪಾತಕಿ ದಾವೂದ್, ಹಫೀಜ್ ಕುರಿತ ಪ್ರಶ್ನೆಗೆ ಮೌನಕ್ಕೆ ಶರಣಾದ ಪಾಕ್!
ಹಿರಿಯ ಅಧಿಕಾರಿಗಳು ಸೇರಿದಂತೆ ವಿವಿಧ ದೇಶಗಳ 195 ಇಂಟರ್ ಪೋಲ್ ಸದಸ್ಯರು ಭಾಗಿಯಾಗಿದ್ದರು.
Team Udayavani, Oct 18, 2022, 6:42 PM IST
ನವದೆಹಲಿ: ಮುಂಬೈ 26/11 ದಾಳಿ ಪ್ರಕರಣದ ಮಾಸ್ಟರ್ ಮೈಂಡ್, ಭೂಗತ ಪಾತಕಿ ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್ ನ ಗಡಿಪಾರು ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ಪಾಕಿಸ್ತಾನ ನಿರಾಕರಿಸಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಬಾತ್ ರೂಮ್ ನಲ್ಲಿ ಬಳಸುವ 100 ರೂ. ಚಪ್ಪಲಿಗೆ 8,990 ರೂ ಬೆಲೆ: ನೆಟ್ಟಿಗರಿಂದ ಟ್ರೋಲ್
ಮಂಗಳವಾರ (ಅಕ್ಟೋಬರ್ 18) ದೆಹಲಿಯಲ್ಲಿ ನಡೆದ ಇಂಟರ್ ಪೋಲ್ ನ 90ನೇ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನದ ಫೆಡರಲ್ ಇನ್ವೆಸ್ಟಿಗೇಶನ್ ಏಜೆನ್ಸಿ ಮುಖ್ಯಸ್ಥ ಮೊಹ್ಸಿನ್ ಬಟ್ ಸೇರಿದಂತೆ ಇಬ್ಬರು ಸದಸ್ಯರ ನಿಯೋಗ ಭಾಗವಹಿಸಿತ್ತು.
ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರರಾದ ದಾವೂದ್ ಇಬ್ರಾಹಿಂ ಮತ್ತು ಹಫೀಜ್ ಸಯೀದ್ ಎಲ್ಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿರುವುದಾಗಿ ವರದಿ ತಿಳಿಸಿದೆ. ಅಷ್ಟೇ ಅಲ್ಲದೇ ಈ ಸಂದರ್ಭದಲ್ಲಿ ದಾವೂದ್ ಮತ್ತು ಹಫೀಜ್ ನನ್ನು ಭಾರತಕ್ಕೆ ಹಸ್ತಾಂತರಿಸುತ್ತೀರಾ ಎಂಬ ಪ್ರಶ್ನೆಗೆ ಮೊಹ್ಸಿನ್ ಮೌನವಾಗಿದ್ದರು ಎಂದು ವರದಿ ವಿವರಿಸಿದೆ.
#WATCH | Pakistan’s director-general of the Federal Investigation Agency (FIA) Mohsin Butt, attending the Interpol conference in Delhi, refuses to answer when asked if they will handover underworld don Dawood Ibrahim & Lashkar-e-Taiba chief Hafiz Saeed to India. pic.twitter.com/GRKQWvPNA1
— ANI (@ANI) October 18, 2022
ರಾಜಧಾನಿ ದೆಹಲಿಯಲ್ಲಿ ಅಕ್ಟೋಬರ್ 18ರಿಂದ 21ರವರೆಗೆ ನಡೆಯಲಿರುವ ಇಂಟರ್ ಪೋಲ್ ನ 90ನೇ ಸಾಮಾನ್ಯ ಸಭೆಯಲ್ಲಿ ಪಾಕ್ ನ ದ್ವಿಸದಸ್ಯ ನಿಯೋಗ ಭಾಗಿಯಾಗಿತ್ತು. ಈ ಸಭೆಯಲ್ಲಿ ಸಚಿವರು, ಪೊಲೀಸ್ ಅಧಿಕಾರಿಗಳು, ಹಿರಿಯ ಅಧಿಕಾರಿಗಳು ಸೇರಿದಂತೆ ವಿವಿಧ ದೇಶಗಳ 195 ಇಂಟರ್ ಪೋಲ್ ಸದಸ್ಯರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ