ಪೊಲೀಸರ ಬಲೆಗೆ ಬಿದ್ದ ಎಟಿಎಂ ವಂಚಕ ! ಈತನ ಬಳಿ ಇತ್ತು 112 ಎಟಿಎಂ ಕಾರ್ಡ್


Team Udayavani, Apr 5, 2021, 9:14 PM IST

ಪೊಲೀಸರ ಬಲೆಗೆ ಬಿದ್ದ ಎಟಿಎಂ ವಂಚಕ ! ಆರೋಪಿಯ ಬಳಿ ಇತ್ತು 112 ಎಟಿಎಂ ಕಾರ್ಡ್

ಬೀದರ್ ; ಎಟಿಎಂ ಕೇಂದ್ರಗಳಲ್ಲಿ ಅಮಾಯಕ ಜನರನ್ನು ಮರಳು ಮಾಡಿ ಅವರ ಖಾತೆಯಿಂದ ಹಣ ದೋಚುತ್ತಿದ್ದ ನೆರೆಯ ಆಂದ್ರ ಪ್ರದೇಶದ ಆರೋಪಿತನನ್ನು ಸೋಮವಾರು ಸಿಇಎನ್ ಕ್ರೈಂ ಪೊಲೀಸರು ವಶಕ್ಕೆ ಪಡೆದು, ಆತನಿಂದ 1.18 ಲಕ್ಷ ರೂ. ನಗದು, ವಿವಿಧ ಬ್ಯಾಂಕಿನ 112 ಎಟಿಎಂ ಕಾರ್ಡ್ ಹಾಗೂ ಒಂದು ಬೈಕ್‌ನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಆಂದ್ರಪ್ರದೇಶದ ನರಸರಾವಪೇಟ್ ಪಟ್ಟಣದ ತುಮ್ಮಲ್ ಉದಯಕುಮಾರ ರಾಮಲಿಂಗಯ್ಯ (39) ಬಂಧಿತ ಆರೋಪಿ. ನಗರದ ಕೆಇಬಿ ಹತ್ತಿರದ ಎಸ್‌ಬಿಐ ಎಟಿಎಂ ಎದುರುಗಡೆ ಉದಯಕುಮಾರ ಅವರನ್ನು ಕ್ರೈಂ ಪೊಲೀಸ್ ಠಾಣೆಯ ನಿರೀಕ್ಷಕ ಬಸವರಾಜ ಫುಲಾರಿ ನೇತೃತ್ವದ ಸಿಬ್ಬಂದಿಗಳ ತಂಡ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದೆ. ಈ ವೇಳೆ ಬೀದರನ ಒಟ್ಟು 4 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಒಟ್ಟು 1.81,122 ರೂ. ವಂಚಿಸಿದ್ದಾನೆ ಜತೆಗೆ ತೆಲಂಗಾಣದಲ್ಲಿ ಸಹ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಬಾಯಿ ಬಿಟ್ಟಿದ್ದಾನೆ.

ಕಳೆದ ವರ್ಷಗಳಿಂದ ಜಿಲ್ಲೆಯ ಎಟಿಎಂ ಕೇಂದ್ರಗಳಲ್ಲಿ ಅಮಾಯಕರು ಹಣ ತೆಗೆಯಲು ಹೋದಾಗ ಅವರಿಗೆ ಸಹಾಯ ಮಾಡಿದಂತೆ ನಟಿಸಿ ಪಿನ್ ನಂಬರ್ ತಿಳಿದುಕೊಂಡು ಅವರ ಗಮನ ಬೇರೆಡೆಗೆ ಹರಿಸಿ ಎಟಿಎಂ ಕಾರ್ಡ್ ಬದಲಾಯಿಸುತ್ತಿದ್ದ. ನಂತರ ಸದರಿ ಎಟಿಎಂ ಕಾರ್ಡ್ ಹಾಗೂ ಪಿನ್ ನಂಬರ್ ಬಳಸಿ ಬ್ಯಾಂಕ್ ಖಾತೆಯಿಂದ ಹಣ ದೋಚಿ ವಂಚನೆ ಮಾಡುತ್ತಿದ್ದ.

ಇದನ್ನೂ ಓದಿ :ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳ : ಶಿರಡಿ ಸಾಯಿಬಾಬಾ ದೇವಸ್ಥಾನದ ಬಾಗಿಲು ಬಂದ್

ಪ್ರಕರಣವನ್ನು ಬೇಧಿಸುವಲ್ಲಿ ಪಿಎಸ್‌ಐ ಸುನೀತಾ, ಸಿಬ್ಬಂದಿಗಳಾದ ಅರುಣಕುಮಾರ, ಶಿವಕುಮಾರ, ಮಲ್ಲಿಕಾರ್ಜುನ, ಸಾದಕ್ ಅಲಿ, ರವಿ, ಹರಿಕಿಶನ್, ಭರತ, ದಶರಥ, ಸಿದ್ರಾಮೇಶ, ಪ್ರಶಾಂತ, ಸುನೀಲ ಮತ್ತು ಮಾಯಾ ಅವರು ಯಶಸ್ವಿಯಾಗಿದ್ದಾರೆ.

ಪೊಲೀಸ್ ತಂಡದ ಕರ್ತವ್ಯವನ್ನು ಮೆಚ್ಚಿರುವ ಎಸ್‌ಪಿ ನಾಗೇಶ ಡಿ.ಎಲ್ ಅವರು ಪ್ರಶಂಸನಾ ಪ್ರಮಾಣ ಪತ್ರ ನೀಡಿ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.