ಹಳೆ ವೈಷಮ್ಯ :ಜೈಲಿನಿಂದ ಹೊರ ಬಂದ ವ್ಯಕ್ತಿಯ ಕೊಚ್ಚಿ ಭೀಕರ ಕೊಲೆ
Team Udayavani, Nov 3, 2021, 6:59 PM IST
ಕುಣಿಗಲ್ : ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನು ಮೇಲೆ ಬಿಡುಗಡೆಯಾಗಿ ಬಂದಿದ್ದ ಆರೋಪಿಯನ್ನು ಮಾರಕಾಸ್ತಾçಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಕೀಲಾರ ಗ್ರಾಮದಲ್ಲಿ ನಡೆದಿದೆ.
ಕಿಲಾರ ಗ್ರಾಮದ ನಿಂಗೇಗೌಡ (45) ಕೊಲೆಯಾದ ವ್ಯಕ್ತಿ.
ಘಟನೆ ವಿವರ
ಕಳೆದ ಗ್ರಾ.ಪಂ ಚುನಾವಣೆ ಸಂದರ್ಭದಲ್ಲಿ ರಾಜಕೀಯ ದ್ವೇಶ ಹಿನ್ನಲೆಯಲ್ಲಿ ಕೀಲಾರ ಗ್ರಾಮದ ರೌಡಿಶೀಟರ್ ವಿನಯ್ ಎಂಬುವವನ್ನು ನಿಂಗೇಗೌಡ, ಶಶಿಕಲಾ, ಪ್ರಕಾಶ್ ಸೇರಿದಂತೆ ಐವರು ಸೇರಿಕೊಂಡು ಕೊಲೆ ಮಾಡಿದ್ದರು, ಈ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ನಿಂಗೇಗೌಡ ಸೇರಿದಂತೆ ಐದು ಮಂದಿ ಜೈಲು ಸೇರಿದ್ದರು.
ಮೊನ್ನೆಯಷ್ಟೇ ನಿಂಗೇಗೌಡ ಜಾಮೀನನ ಮೇಲೆ ಬಿಡುಗಡೆಯಾಗಿ ಬಂದಿದ್ದ.
ಕಳೆದ ರಾತ್ರಿ ಗ್ರಾಮಕ್ಕೆ ಹೊಂದಿಕೊಂಡಿರುವ ಬೇಲಿ ಪೊದೆ ಬಳಿ ನಿಂಗೇಗೌಡ ಹೋಗುತ್ತಿರಬೇಕಾದರೆ ದುಷ್ಕರ್ಮಿಗಳು ಆತನ ತಲೆ ಹಿಂಬಾಗಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಎಸ್ಪಿ ಉದೇಶ್, ಡಿವೈಎಸ್ಪಿ ಜಿ.ಆರ್.ರಮೇಶ್, ಸಿಪಿಐ ಗುರುಪ್ರಸಾದ್, ಪಿಎಸ್ಐ ಚೇತನ್ ಬೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ