ಮೀನುಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಪ್ರಯತ್ನ : ಸಚಿವ ಎಸ್‌. ಅಂಗಾರ ಭರವಸೆ


Team Udayavani, Feb 10, 2021, 5:30 AM IST

ಮೀನುಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಪ್ರಯತ್ನ : ಸಚಿವ ಎಸ್‌. ಅಂಗಾರ ಭರವಸೆ

ಮಲ್ಪೆ: ಮೀನುಗಾರಿಕೆ ಬಂದರು ಮತ್ತು ಮೀನುಗಾರರ ಸಮಸ್ಯೆಗಳೇನು ಎಂಬ ಬಗ್ಗೆ ಸಮಗ್ರ ವಾಗಿ ಅಧ್ಯಯನ ನಡೆಸುವುದಲ್ಲದೆ ಇಲಾಖೆಯ ಅಧಿಕಾರಿಗಳು, ಮೀನುಗಾರ ಮುಖಂಡರ ಜತೆ ಚರ್ಚಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಮೀನುಗಾರಿಕೆ ಹಾಗೂ ಬಂದರು ಸಚಿವ ಎಸ್‌. ಅಂಗಾರ ಭರವಸೆ ನೀಡಿದರು.
ಅವರು ಮಂಗಳವಾರ ಮಲ್ಪೆ ಮೀನುಗಾರಿಕೆ ಬಂದರು, ಸ್ಲಿಪ್‌ವೇ ಮತ್ತು ಟೆಬ್ಮಾ ಶಿಪ್‌ ಯಾರ್ಡ್‌ ಸ್ಥಳವನ್ನು ವೀಕ್ಷಿಸಿ ಬಳಿಕ ಮೀನುಗಾರರ ಮುಖಂಡ ರೊಂದಿಗೆ ಸಮಾಲೋಚನೆ ನಡೆಸಿದರು.

ಬೇಡಿಕೆ ಈಡೇರಿಕೆಗೆ ಮನವಿ
ಮಲ್ಪೆ ಆಳಸಮುದ್ರ ಮೀನುಗಾರರ ಸಂಘದ ಅಧ್ಯಕ್ಷ ಕಿಶೋರ್‌ ಡಿ. ಸುವರ್ಣ ಮಾತನಾಡಿ, ಹೊರ ರಾಜ್ಯದಲ್ಲಿ ಮೀನುಗಾರಿಕೆ ನಡೆಸುವಾಗ ಅಲ್ಲಿನ ಮೀನುಗಾರರಿಂದ ಅಗುವ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಬೇಕು, ಮೀನುಗಾರಿಕೆ ಬೋಟ್‌ಗಳಿಗೆ ನೀಡಲಾಗುತ್ತಿರುವ ಡೀಸೆಲ್‌ ಪ್ರಮಾಣವನ್ನು 300 ಲೀ.ನಿಂದ 500 ಲೀ.ಗೆ ಹೆಚ್ಚಿಸಿ ತಿಂಗಳವಾರು ಬದಲು ವಾರ್ಷಿಕ ಕೋಟದಲ್ಲಿ ನೀಡಬೇಕು, ಡೀಸೆಲ್‌ ಸಹಾಯಧನ ಈ ಹಿಂದಿನಂತೆ ಡೆಲಿವರಿ ಪಾಯಿಂಟ್‌ನಲ್ಲಿ ಸಿಗ‌ಬೇಕು ಎಂದು ಮನವಿ ಮಾಡಿದರು.
ಮೀನು ಮಾರಾಟ ಫೇಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ ಅವರು 3ನೇ ಹಂತದ ಬಂದರಿನಲ್ಲಿ ನಿರ್ಮಿಸಿದ ಸ್ಲಿಪ್‌ವೇ ನಿರ್ವಹಣೆಯನ್ನು ಮೀನುಗಾರರ ಸಂಘಕ್ಕೆ ನೀಡಬೇಕು ಮತ್ತು ಟೆಬಾ¾ ಶಿಪ್‌ಯಾರ್ಡ್‌ ಅವಧಿ ಮುಗಿದ ಬಳಿಕ ಆ ಜಾಗವನ್ನು ಕರಾರಿನಂತೆ ಮೀನುಗಾರಿಕೆ ಬಂದರಿನ ಅಭಿವೃದ್ಧಿಗೆ ಮಾತ್ರ ನೀಡಬೇಕೆಂದು ಮನವಿ ಮಾಡಿದರು.

ಸಮ್ಮಾನ
ಮಲ್ಪೆ ಮೀನುಗಾರ ಸಂಘ ಮತ್ತು ಮೀನು ಮಾರಾಟ ಫೆಡರೇಶನಿನ ವತಿಯಿಂದ ಸಚಿವರನ್ನು ಸಮ್ಮಾನಿಸಲಾಯಿತು.
ಮೀನುಗಾರರ ಸಂಘದ ಉಪಾಧ್ಯಕ್ಷರಾದ ರಮೇಶ್‌ ಕೋಟ್ಯಾನ್‌, ವಿಟuಲ ಕರ್ಕೇರ, ನಾಗರಾಜ್‌ ಬಿ. ಕುಂದರ್‌, ಪ್ರಧಾನ ಕಾರ್ಯದರ್ಶಿ ಸುಭಾಸ್‌ ಮೆಂಡನ್‌, ಕೋಶಾಧಿಕಾರಿ ಶಿವಾನಂದ, ಮೀನುಗಾರ ಮುಖಂಡರಾದ ಸತೀಶ್‌ ಕುಂದರ್‌, ರಾಮಚಂದ್ರ ಕುಂದರ್‌, ಸಾಧು ಸಾಲ್ಯಾನ್‌, ಗೋಪಾಲ ಆರ್‌.ಕೆ., ನಾರಾಯಣ ಕರ್ಕೇರ, ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ತಿಪ್ಪೇಸ್ವಾಮಿ, ಎಂಜಿನಿಯರ್‌ ಮಂಜೇಗೌಡ, ಉಪ ನಿರ್ದೇಶಕ ಗಣೇಶ್‌ ಕೆ., ಹಿರಿಯ ಸಹಾಯಕ ನಿರ್ದೇಶಕ ಶಿವಕುಮಾರ್‌ಉಪಸ್ಥಿತರಿದ್ದರು.

ಶೀಘ್ರ ಜಾರಿಗೆ ಪ್ರಯತ್ನ
ಫೆ. 10ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಮೀನುಗಾರಿಕೆ ಇಲಾಖೆಗೆ ಮತ್ತು ಬಜೆಟ್‌ಗೆ ಸಂಬಂಧಪಟ್ಟ ಸಭೆ ಇದೆ. ಆ ಸಭೆಯಲ್ಲಿ ಡೀಸೆಲ್‌ ಸಬ್ಸಿಡಿಯನ್ನು ಈ ಹಿಂದಿನಂತೆ ಡೆಲಿವರಿ ಪಾಯಿಂಟ್‌ನಲ್ಲಿ ದೊರೆಯುವಂತೆ ಮತ್ತು ಸ್ಲಿಪ್‌ವೇ ನಿರ್ವಹಣೆಯನ್ನು ಮೀನುಗಾರ ಸಂಘಕ್ಕೆ ನೀಡುವ ಇನ್ನಿತರ ವಿಷಯಗಳನ್ನು ಅವರ ಗಮನಕ್ಕೆ ತಂದು ಇವೆರಡನ್ನು ಅದಷ್ಟು ಶೀಘ್ರದಲ್ಲಿ ಜಾರಿಗೊಳಿಸುವಂತೆ ಪ್ರಯತ್ನ ಮಾಡಲಾಗುವುದು ಎಂದು ಸಚಿವ ಎಸ್‌. ಅಂಗಾರ ಅವರು ತಿಳಿಸಿದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.