ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಪ್ರಶಸ್ತಿಗಾಗಿ ರಿಬಕಿನಾ, ಸಬಲೆಂಕಾ ಹೋರಾಟ


Team Udayavani, Jan 26, 2023, 11:51 PM IST

1-sdsad

ಮೆಲ್ಬರ್ನ್: ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌ ಸೆಮಿಫೈನಲ್‌ನಲ್ಲಿ ವಿಂಬಲ್ಡನ್‌ ಚಾಂಪಿಯನ್‌ ಕಝಕಸ್ತಾನದ ಎಲೆನಾ ರಿಬಕಿನಾ ಅವರು ವಿಕ್ಟೋರಿಯಾ ಅಜರೆಂಕಾ ಅವರನ್ನು ಎರಡು ಸೆಟ್‌ಗಳ ಕಠಿಣ ಹೋರಾಟದಲ್ಲಿ ಸೋಲಿಸಿದ್ದಾರೆ. ಅಲ್ಲಿ ಮಹಿಳಾ ಸಿಂಗಲ್ಸ್‌ನಲ್ಲಿ ಫೈನಲ್‌ ಹಂತಕ್ಕೇರಿದ್ದಾರೆ. ಅವರು ಕಳೆದ ಮೂರು ಗ್ರ್ಯಾನ್‌ಸ್ಲಾéಮ್‌ ಕೂಟಗಳಲ್ಲಿ ಎರಡನೇ ಬಾರಿ ಫೈನಲಿಗೇರಿದ ಸಾಧನೆ ಮಾಡಿದ್ದಾರೆ.

ಶನಿವಾರ ನಡೆಯುವ ಫೈನಲ್‌ ಹೋರಾಟದಲ್ಲಿ ರಿಬಕಿನಾ ಅವರು ಬೆಲಾರಸ್‌ನ ಅರ್ಯಾನಾ ಸಬಲೆಂಕಾ ಅವರ ಸವಾಲನ್ನು ಎದುರಿಸಲಿದ್ದಾರೆ. ಗುರುವಾರ ನಡೆದ ಇನ್ನೊಂದು ಸೆಮಿಫೈನಲ್‌ ಹೋರಾಟದಲ್ಲಿ ಸಬಲೆಂಕಾ ಅವರು ಶ್ರೇಯಾಂಕರಹಿತ ಆಟಗಾರ್ತಿ ಪೊಲೆಂಡಿನ ಮ್ಯಾಗಾx ಲಿನೆಟ್‌ ಅವರನ್ನು 7-6 (7-1), 6-2 ಸೆಟ್‌ಗಳಿಂದ ಸೋಲಿಸಿ ಫೈನಲಿಗೇರಿದ್ದರು.

ಅಡಿಲೇಡ್‌ ಚಾಂಪಿಯನ್‌ ಆಗಿರುವ ಸಬಲೆಂಕಾ 2023ರಲ್ಲಿ ನಡೆದ 10 ಪಂದ್ಯಗಳಲ್ಲಿ ಯಾವುದೇ ಸೆಟ್‌ ಕಳೆದುಕೊಳ್ಳದೇ ಗೆಲುವು ಸಾಧಿಸುತ್ತ ಬಂದಿದ್ದಾರೆ. ಆದರೆ ಸೆಮಿಫೈನಲ್‌ನ ಮೊದಲ ಸೆಟ್‌ನಲ್ಲಿ ಅವರು ಕಳಪೆಯಾಗಿ ಆರಂಭ ಮಾಡಿದ್ದರು. ಆದರೆ ಟೈಬ್ರೇಕರ್‌ನಲ್ಲಿ ಸೆಟ್‌ ಗೆಲ್ಲಲು ಯಶಸ್ವಿಯಾಗಿದ್ದರು.

ಅಜರೆಂಕಾಗೆ ಸೋಲು
2012 ಮತ್ತು 2013ರಲ್ಲಿ ಇಲ್ಲಿ ಪ್ರಶಸ್ತಿ ಜಯಿಸಿದ್ದ ಅಜರೆಂಕಾ ಕೂಡ ಮೊದಲ ಸೆಟ್‌ನಲ್ಲಿ ಪ್ರಬಲ ಹೋರಾಟ ಸಂಘಟಿಸಿದ್ದರು. ಆದರೆ ರಿಬಕಿನಾ ಅವರ ಅದ್ಭುತ ಆಟದೆದುರು ಅವರ ಆಟ ನಡೆಯಲಿಲ್ಲ. ಅಂತಿಮವಾಗಿ ರಿಬಕಿನಾ 7-6 (4), 6-3 ಸೆಟ್‌ಗಳಿಂದ ಜಯ ಸಾಧಿಸಿ ಪ್ರಶಸ್ತಿ ಸುತ್ತಿಗೆ ತಲುಪಿದರು. ರಿಬಕಿನಾ ಕಳೆದ ಎರಡು ವಾರಗಳಲ್ಲಿ ಅಜರೆಂಕಾ ಸಹಿತ ನಂಬರ್‌ ವನ್‌ ಐಗಾ ಸ್ವಿಯಾಟೆಕ್‌, 17ನೇ ರ್‍ಯಾಂಕಿನ ಜೆಲೆನಾ ಒಸ್ಟಾಪೆಂಕೊ ಮತ್ತು ಡೆನಿಲೆ ಕಾಲಿನ್ಸ್‌ ಅವರನ್ನು ಸೋಲಿಸಿದ್ದರು.

ಶಕ್ತಿಶಾಲಿ ಸರ್ವ್‌ಗಳಿಗೆ ಹೆಸರುವಾಸಿಯಾಗಿರುವ ರಿಬಕಿನಾ ಈ ಪಂದ್ಯದಲ್ಲೂ 9 ಏಸ್‌ಗಳನ್ನು ಸಿಡಿಸಿದ್ದರು. ಒಟ್ಟಾರೆ ಈ ಕೂಟದಲ್ಲಿ 44 ಏಸ್‌ಗಳನ್ನು ಸಿಡಿಸಿ ತನ್ನ ಪರಾಕ್ರಮವನ್ನು ಮೆರೆದಿದ್ದಾರೆ. 23ರ ಹರೆಯದ ರಿಬಕಿನಾ ಅವರು ಅಜರೆಂಕಾ ಅವರಿಗಿಂತ 10 ವರ್ಷ ಚಿಕ್ಕವರು. ಇದನ್ನು ಗಮನಿಸಿದರೆ ರಿಬಕಿನಾ ಅವರ ಭವಿಷ್ಯ ಉಜ್ವಲವಾಗಿರಬಹುದು ಎಂಬುದನ್ನು ತಿಳಿಯಬಹುದು.

ರಷ್ಯಾದಲ್ಲಿ ಜನನ
ರಷ್ಯಾದ ಮಾಸ್ಕೋದಲ್ಲಿ ಜನಿಸಿದ್ದ ರಿಬಕಿನಾ 2018ರಿಂದ ಕಝಕಸ್ತಾನವನ್ನು ಪ್ರತಿನಿಧಿಸುತ್ತಿದ್ದಾರೆ. ತಮ್ಮ ಟೆನಿಸ್‌ ಬಾಳ್ವೆಗೆ ಹಣ ನೀಡಿ ಸಹಕರಿಸುವುದಾಗಿ ಕಝಕಸ್ತಾನ ಭರವಸೆ ನೀಡಿದ್ದರಿಂದ ಅವರು ಆ ದೇಶವನ್ನು ಇದೀಗ ಪ್ರತಿನಿಧಿಸುತ್ತಿದ್ದಾರೆ.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.