ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌ : 4ನೇ ಸುತ್ತಿನಲ್ಲಿ ನಡಾಲ್‌, ಬಾರ್ಟಿ, ಮೆಡ್ವೆಡೇವ್


Team Udayavani, Feb 13, 2021, 10:40 PM IST

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌ : ಬೋಪಣ್ಣ ಔಟ್, 4ನೇ ಸುತ್ತಿನಲ್ಲಿ ನಡಾಲ್‌, ಬಾರ್ಟಿ

ಮೆಲ್ಬರ್ನ್: ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌ ಪಂದ್ಯಾವಳಿಯ 7ನೇ ದಿನದಾಟದಲ್ಲಿ ರಫೆಲ್‌ ನಡಾಲ್‌, ಡ್ಯಾನಿಲ್‌ ಮೆಡ್ವೆಡೇವ್‌, ಆ್ಯಶ್ಲಿ ಬಾರ್ಟಿ ಮೊದಲಾದ ಪ್ರಮುಖ ಆಟಗಾರರು 4ನೇ ಸುತ್ತನ್ನು ಯಶಸ್ವಿಯಾಗಿ ತಲುಪಿದ್ದಾರೆ.

ರಫೆಲ್‌ ನಡಾಲ್‌ ಬ್ರಿಟನ್ನಿನ ಕ್ಯಾಮರಾನ್‌ ನೂರಿ ಅವರನ್ನು 7-5, 6-2, 7-5 ಅಂತರದಿಂದ ಮಣಿಸಿ ಇಟಲಿಯ ಫ್ಯಾಬಿಯೊ ಫೊಗಿನಿ ಅವರನ್ನು ಎದುರಿಸಲು ಸಜ್ಜಾದರು.

ರಶ್ಯದ ಡ್ಯಾನಿಲ್‌ ಮೆಡ್ವೆಡೇವ್‌ ಅವರಿಗೆ ಕೊನೆಗೂ 5 ಸೆಟ್‌ಗಳ ಹೋರಾಟದಲ್ಲಿ ಗೆಲುವು ಕೈ ಹಿಡಿದಿದೆ. ಹಿಂದಿನ ಆರೂ ಹೋರಾಟಗಳಲ್ಲಿ ಸೋತಿದ್ದ ಅವರು ಶನಿವಾರದ 3ನೇ ಸುತ್ತಿನಲ್ಲಿ ಸರ್ಬಿಯಾದ ಫಿಲಿಪ್‌ ಕ್ರಾಜಿನೋವಿಕ್‌ ವಿರುದ್ಧ 6-3, 6-3, 4-6, 3-6, 6-0 ಅಂತರದ ಮೇಲುಗೈ ಸಾಧಿಸಿದರು. ಯುಎಸ್‌ ಓಪನ್‌ ಫೈನಲಿಸ್ಟ್‌ ಆಗಿರುವ ಇವರ ಮುಂದಿನ ಎದುರಾಳಿ ಅಮೆರಿಕದ ಮೆಕೆಂಜಿ ಮೆಕ್‌ಡೊನಾಲ್ಡ್‌.

ರಶ್ಯದ ಮತ್ತೋರ್ವ ಆಟಗಾರ ಆ್ಯಂಡ್ರೆ ರುಬ್ಲೇವ್‌ ಕೂಡ 3ನೇ ಸುತ್ತು ದಾಟಿದ್ದಾರೆ. ಅವರು ಫೆಲಿಶಿಯಾನೊ ಲೋಪೆಜ್‌ ವಿರುದ್ಧ 7-5, 6-2, 6-3 ಅಂತರದ ಗೆಲುವು ಒಲಿಸಿಕೊಂಡರು. ಆದರೆ ರಶ್ಯದ ಕರೆನ್‌ ಕಶನೋವ್‌ ಪರಾಭವಗೊಂಡರು.

ಇದನ್ನೂ ಓದಿ:133 ವಾಹನಗಳ ಸರಣಿ ಅಪಘಾತ: 9 ಸಾವು, 65ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ

4ನೇ ಸುತ್ತಿಗೆ ಬಾರ್ಟಿ
ಆತಿಥೇಯ ನಾಡಿನ ಅಗ್ರಮಾನ್ಯ ಆಟಗಾರ್ತಿ ಆ್ಯಶ್ಲಿ ಬಾರ್ಟಿ ಗೆಲುವಿನ ಓಟ ಮುಂದುವರಿಸಿ 4ನೇ ಸುತ್ತು ಪ್ರವೇಶಿಸಿದರು. ಅವರು 6-2, 6-4ರಿಂದ ರಶ್ಯದ ಎಕಟೆರಿನಾ ಅಲೆಕ್ಸಾಂಡ್ರೋವಾಗೆ ಸೋಲುಣಿಸಿದರು. ಇವರ ಮುಂದಿನ ಎದುರಾಳಿ ಅಮೆರಿಕದ ಶೆಲ್ಬಿ ರೋಜರ್. ಅವರು ಅನೆಟ್‌ ಕೊಂಟವೀಟ್‌ ವಿರುದ್ಧ 6-4, 6-3 ಅಂತರದ ಜಯ ಸಾಧಿಸಿದರು. ಜೆಸ್ಸಿಕಾ ಪೆಗುಲಾ, ಎಲಿನಾ ಸ್ವಿಟೋಲಿನಾ, ಜೆನ್ನಿಫ‌ರ್‌ ಬ್ರಾಡಿ, ಡೋನಾ ವೆಕಿಕ್‌ ಕೂಡ ಮೂರನೇ ಸುತ್ತು ದಾಟಿ ಮುನ್ನಡೆದಿದ್ದಾರೆ.

ಬೋಪಣ್ಣ ಔಟ್‌; ಭಾರತದ ಆಟ ಮುಕ್ತಾಯ
ರೋಹನ್‌ ಬೋಪಣ್ಣ ಮಿಶ್ರ ಡಬಲ್ಸ್‌ ಮೊದಲ ಸುತ್ತಿನಲ್ಲೇ ಸೋಲನುಭವಿಸುವ ಮೂಲಕ ಆಸ್ಟ್ರೇಲಿಯನ್‌ ಓಪನ್‌ ಪಂದ್ಯಾವಳಿಯಲ್ಲಿ ಭಾರತದ ಸವಾಲು ಅಂತ್ಯಗೊಂಡಿತು.

ಶನಿವಾರದ ಪಂದ್ಯದಲ್ಲಿ ರೋಹನ್‌ ಬೋಪಣ್ಣ ಮತ್ತು ಚೀನದ ಯಿಂಗ್‌ ಯಿಂಗ್‌ ದುವಾನ್‌ ಜೋಡಿಯನ್ನು ಬೆಥನಿ ಮಾಟೆಕ್‌ ಸ್ಯಾಂಡ್ಸ್‌ (ಅಮೆರಿಕ)-ಜಾಮಿ ಮರ್ರೆ (ಬ್ರಿಟನ್‌) ಸೇರಿಕೊಂಡು 6-4, 6-4 ನೇರ ಸೆಟ್‌ಗಳಿಂದ ಪರಾಭವಗೊಳಿಸಿದರು.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.