ಒಮ್ಮೆ ಟ್ರೈ ಮಾಡಿ…ಸ್ವಾದಿಷ್ಟಕರವಾದ ಅವಲಕ್ಕಿ ಮಸಾಲೆ ರೊಟ್ಟಿ ಮಾಡುವ ಸರಳ ವಿಧಾನ…


ಶ್ರೀರಾಮ್ ನಾಯಕ್, Dec 9, 2022, 5:50 PM IST

masala roti web exclusive

ಅವಲಕ್ಕಿ ಮಸಾಲೆ ರೊಟ್ಟಿ ಒಮ್ಮೆ ಮಾಡಿ ತಿಂದರೆ ಸಾಕು ಮತ್ತೆ ಮತ್ತೆ ತಿನ್ನಬೇಕು ಅನಿಸುತ್ತದೆ ಅಷ್ಟು ಚೆನ್ನಾಗಿರುತ್ತದೆ ಮಾತ್ರವಲ್ಲದೇ ಆರೋಗ್ಯಕ್ಕೂ ಇದು ಒಳ್ಳೆಯ ರೆಸಿಪಿ. ಅದುವೇ ಅವಲಕ್ಕಿಯಿಂದ ಮಾಡುವ ಮಸಾಲೆ ರೊಟ್ಟಿ. ಅವಲಕ್ಕಿಯಿಂದ ನಾನಾ ಬಗೆಯ ತಿಂಡಿ ತಿನಿಸುಗಳನ್ನು ತಯಾರಿಸಬಹುದು .ಉದಾಃ ಮೊಸರು ಅವಲಕ್ಕಿ ದೋಸೆ, ಒಗ್ಗರಣೆ ಅವಲಕ್ಕಿ, ಅವಲಕ್ಕಿ ವಡೆ, ಅವಲಕ್ಕಿ ಕಿಚಿಡಿ ಹೀಗೆ ಹತ್ತು ಹಲವು.

ಅವಲಕ್ಕಿಯಲ್ಲಿ ವಿಟಮಿನ್‌ ಬಿ ಜತೆಗೆ ವಿಟಮಿನ್‌ ಎ,ಕಬ್ಬಿಣಾದಂಶ, ಕ್ಯಾಲ್ಸಿಯಂ ಇರುವುದರಿಂದ ಆರೋಗ್ಯಕ್ಕೂ ಇದು ತುಂಬಾನೇ ಒಳ್ಳೆಯದು. ಅಂದ ಹಾಗೆ ನಾವಿಲ್ಲಿ ಅವಲಕ್ಕಿ ಮಸಾಲ ರೊಟ್ಟಿ ಮಾಡುವ ವಿಧಾನವನ್ನು ತಿಳಿಸುತ್ತಿದ್ದೇವೆ. ನೀವು ಸಹ ಮನೆಯಲ್ಲೇ ಒಂದು ಸಲ ಟ್ರೈ ಮಾಡಿ ನೋಡಿ ಹೇಗಿತ್ತು ಅಂತ ಕಾಮೆಂಟ್‌ ಮೂಲಕ ತಿಳಿಸಿ..

ಹಾಗಾದರೆ ಇನ್ನೇಕೆ ತಡ ಸ್ವಾದಿಷ್ಟಕರವಾದ ಅವಲಕ್ಕಿ ಮಸಾಲೆ ರೊಟ್ಟಿ ಮಾಡುವ ವಿಧಾನವನ್ನು ತಿಳಿಯೋಣ ಬನ್ನಿ….

ಬೇಕಾಗುವ ಸಾಮಗ್ರಿಗಳು
ತೆಳು ಅವಲಕ್ಕಿ-ಅರ್ಧ ಕಪ್‌, ಅಕ್ಕಿ ಹಿಟ್ಟು-ಅರ್ಧ ಕಪ್‌, ಸಣ್ಣಗೆ ಹೆಚ್ಚಿದ ಈರುಳ್ಳಿ-1, ಜೀರಿಗೆ -ಅರ್ಧ ಚಮಚ,ತೆಂಗಿನ ತುರಿ-2 ಚಮಚ, ಖಾರದ ಪುಡಿ-1ಚಮಚ, ಧನಿಯಾ ಪುಡಿ-1ಚಮಚ, ಎಣ್ಣೆ, ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು -ಸ್ವಲ್ಪ, ಕರಿಬೇವಿನ ಎಲೆ-ಸ್ವಲ್ಪ, ಬಿಸಿ ನೀರು-ಬೆರೆಸಲು,ಉಪ್ಪು-ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ
ಮೊದಲಿಗೆ ಒಂದು ಪಾತ್ರೆಗೆ ತೆಳು ಅವಲಕ್ಕಿಯನ್ನು ಹಾಕಿ ಒಂದು ನಿಮಿಷಗಳ ಕಾಲ ನೀರಿನಲ್ಲಿ ನೆನೆಸಿಡಿ. ಬಳಿಕ ಅವಲಕ್ಕಿಯನ್ನು ನೀರಿನಿಂದ ತೆಗೆದು ಇನ್ನೊಂದು ಪಾತ್ರೆಗೆ ವರ್ಗಾಯಿಸಿ(ದಪ್ಪ ಅವಲಕ್ಕಿ ಆದರೆ 10ನಿಮಿಷ ನೀರಿನಲ್ಲಿ ನೆನೆಸಿಡಿ). ನಂತರ ಅದಕ್ಕೆ ಈರುಳ್ಳಿ,ಅಕ್ಕಿ ಹಿಟ್ಟು ,ಜೀರಿಗೆ,ತೆಂಗಿನ ತುರಿ, ಖಾರದ ಪುಡಿ, ಧನಿಯಾ ಪುಡಿ ಸೇರಿಸಿ ಅವಲಕ್ಕಿಯನ್ನು ಆದಷ್ಟು ಹಿಸುಕಿ ಚೆನ್ನಾಗಿ ಮಿಶ್ರಣ ಮಾಡಿ. ತದನಂತರ ಕೊತ್ತಂಬರಿ ಸೊಪ್ಪು, ಕರಿಬೇವಿನ ಎಲೆ , ರುಚಿಗೆ ತಕ್ಕಷ್ಟು ಉಪ್ಪು ಮತ್ತು ಬಿಸಿ ನೀರನ್ನು ಸೇರಿಸುತ್ತಾ ದಪ್ಪ ಹಿಟ್ಟನ್ನಾಗಿ ಮಾಡಿಕೊಳ್ಳಿ.ಆಮೇಲೆ ಬಟರ್‌ ಪೇಪರ್‌ ತೆಗೆದುಕೊಂಡು ಅದಕ್ಕೆ ಸ್ವಲ್ಪ ಎಣ್ಣೆ ಹಚ್ಚಿ, ಚೆಂಡಿನ ಗಾತ್ರದ ಹಿಟ್ಟನ್ನು ಅದಕ್ಕೆ ಹಾಕಿ ನಿಧಾನವಾಗಿ ಕೈಯಿಂದ ಹರಡಿ ಇಟ್ಟುಕೊಳ್ಳಿ (ಬಟರ್‌ ಪೇಪರ್‌ ಬದಲು ಬಾಳೆಎಲೆ ಬಳಸಬಹುದು).ನಂತರ ಒಂದು ಕಾವಲಿಗೆ ಎಣ್ಣೆ ಹಾಕಿ ಬಿಸಿಯಾದ ಮೇಲೆ ಮಾಡಿಟ್ಟ ರೊಟ್ಟಿ ಹಾಕಿ ಎರಡೂ ಬದಿಗಳಲ್ಲಿ ಚೆನ್ನಾಗಿ ಕಾಯಿಸಿರಿ.

ಈಗ ರುಚಿಕರವಾದಂತಹ ಅವಲಕ್ಕಿ ಮಸಾಲ ರೊಟ್ಟಿ ರೆಡಿಯಾಗಿದೆ.ಇದು ತೆಂಗಿನಕಾಯಿ ಚಟ್ನಿ ಜೊತೆ ಸವಿಯಿರಿ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.