Easy recipes: ಬೇಬಿ ಕಾರ್ನ್ ಮಂಚೂರಿಯನ್ ಟ್ರೈ ಮಾಡಿ ಟೇಸ್ಟ್ ನೋಡಿ…
ಇದರಲ್ಲಿ ವಿಟಮಿನ್ ಎ,ಬಿ,ಸಿ ಮತ್ತು ಇ ನಂತಹ ಪೋಷಕಾಂಶ ಲಭ್ಯ
ಶ್ರೀರಾಮ್ ನಾಯಕ್, Oct 7, 2022, 5:35 PM IST
ವಿವಿಧ ರೀತಿಯ ಹಣ್ಣುಗಳು ಮತ್ತು ತರಕಾರಿಗಳು ಆರೋಗ್ಯಕ್ಕೆ ತುಂಬಾ ಉತ್ತಮ ಅದರಲ್ಲಿ ಬೇಬಿ ಕಾರ್ನ್ ಕೂಡ ಒಂದು. ಬೇಬಿ ಕಾರ್ನ್ ನಲ್ಲಿ ಏನೆಲ್ಲಾ ಇದೆ ಎನ್ನುವುದಕ್ಕಿಂತ ಏನಿಲ್ಲ ಎಂದು ಕೇಳುವುದು ಹೆಚ್ಚು ಸರಿ. ಇದರಲ್ಲಿ ವಿಟಮಿನ್ ಎ,ಬಿ,ಸಿ ಮತ್ತು ಇ ನಂತಹ ಪೋಷಕಾಂಶ ಇರುವುದರಿಂದ ಇದನ್ನು ನಿಮ್ಮ ಅಡುಗೆಯಲ್ಲಿ ಬಳಸಿದರೆ ಅದರಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು.
ಬೇಬಿ ಕಾರ್ನ್ ನಿಂದ ಏನು ತಯಾರಿಸಿದರೂ ರುಚಿಯೇ ಅದರಲ್ಲೂ ಬೇಬಿ ಕಾರ್ನ್ ಮಂಚೂರಿಯನ್ ಎಲ್ಲರ ಬಾಯಿಯಲ್ಲಿ ನೀರೂರಿಸುತ್ತದೆ. ಹಾಗಾದರೆ ಇನ್ನೇಕೆ ತಡ ಸ್ವಾದಿಷ್ಟಕರವಾದ “ಬೇಬಿ ಕಾರ್ನ್ ಮಂಚೂರಿಯನ್” ಮನೆಯಲ್ಲೇ ಮಾಡಿ ಸ್ವಾದಿಷ್ಟವಾಗಿ ಸವಿಯಿರಿ..
ಬೇಕಾಗುವ ಸಾಮಗ್ರಿಗಳು
ಬೇಬಿ ಕಾರ್ನ್- 250ಗ್ರಾಂ, ಕಾನ್ಫ್ಲೋರ್- 4 ಚಮಚ, ಮೈದಾ- 3 ಚಮಚ, ಪೆಪ್ಪರ್ ಪುಡಿ- 1 ಚಮಚ, ಈರುಳ್ಳಿ- 3 ಸಣ್ಣಗೆ ಹೆಚ್ಚಿದ್ದು, ಅಚ್ಚ ಖಾರದ ಪುಡಿ-1 ಚಮಚ, ಬೆಳ್ಳುಳ್ಳಿ-1 ಚಮಚ ಸಣ್ಣಗೆ ಹೆಚ್ಚಿದ್ದು, ಶುಂಠಿ-1 ಚಮಚ ಸಣ್ಣಗೆ ಹೆಚ್ಚಿದ್ದು, ಹಸಿಮೆಣಸು-2, ಕ್ಯಾಪ್ಸಿಕಂ-1, ಕೊತ್ತಂಬರಿ ಸೊಪ್ಪು ಸ್ವಲ್ಪ, ಟೊಮೆಟೋ ಸಾಸ್-3 ಚಮಚ,ಚಿಲ್ಲಿ ಸಾಸ್-2 ಚಮಚ, ಸೋಯಾ ಸಾಸ್-2 ಚಮಚ, ವಿನೆಗರ್-1 ಚಮಚ, ಎಣ್ಣೆ-ಕರಿಯಲು, ರುಚಿಗೆ ತಕ್ಕಷ್ಟು ಉಪ್ಪು.
ತಯಾರಿಸುವ ವಿಧಾನ
ಮೊದಲು ಬೇಬಿ ಕಾರ್ನ್ ನ್ನು ಚೆನ್ನಾಗಿ ನೀರಿನಲ್ಲಿ ತೊಳೆಯಿರಿ. ನಂತರ ಅದನ್ನು ನಿಮಗೆ ಬೇಕಾಗುವ ರೀತಿಯಲ್ಲಿ ಕಟ್ ಮಾಡಿಕೊಳ್ಳಿರಿ. ತದನಂತರ ಒಂದು ಪಾತ್ರೆಗೆ ಕಾನ್ಫ್ಲೋರ್, ಮೈದಾ, ಅಚ್ಚ ಖಾರದ ಪುಡಿ ಮತ್ತು ಉಪ್ಪನ್ನು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಸ್ವಲ್ಪ ನೀರನ್ನು ಸೇರಿಸಿ ಹಿಟ್ಟಿನ ಹದಕ್ಕೆ ಮಿಶ್ರಣ ಮಾಡಿ ಇಟ್ಟುಕೊಳ್ಳಿ (ಈ ಹಿಟ್ಟು ಅತಿ ದಪ್ಪವೂ ಇರಬಾರದು ತೆಳ್ಳಗೂ ಇರಬಾರದು). ಇದಕ್ಕೆ ಕಟ್ ಮಾಡಿಟ್ಟ ಬೇಬಿ ಕಾರ್ನ್ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಇಟ್ಟುಕೊಳ್ಳಿ. ತದನಂತರ ಒಂದು ಬಾಣಲೆಗೆ ಎಣ್ಣೆಯನ್ನು ಹಾಕಿ, ಕಾದ ಮೇಲೆ ಮಿಶ್ರಣ ಮಾಡಿಟ್ಟ ಬೇಬಿ ಕಾರ್ನ್ ಹಾಕಿ ಹೊಂಬಣ್ಣ(ಕಂದು ಬಣ್ಣ) ಬರುವವರೆಗೂ ಕಾಯಿಸಿರಿ. ನಂತರ ಇನ್ನೊಂದು ಬಾಣಲೆಗೆ 3 ಚಮಚ ಎಣ್ಣೆ ಬಿಸಿ ಮಾಡಿ ಅದಕ್ಕೆ ಶುಂಠಿ, ಬೆಳ್ಳುಳ್ಳಿ ಹಾಕಿ ಹುರಿಯಿರಿ, ಆಮೇಲೆ ಈರುಳ್ಳಿ, ಹಸಿಮೆಣಸು, ಕ್ಯಾಪ್ಸಿಕಂ ಸೇರಿಸಿ ದೊಡ್ಡ ಉರಿಯಲ್ಲಿ ಅರ್ಧ ನಿಮಿಷಗಳವರೆಗೆ ಹುರಿಯಿರಿ. ನಂತರ ಟೊಮೆಟೋ ಸಾಸ್, ಚಿಲ್ಲಿ ಸಾಸ್, ಸೋಯಾ ಸಾಸ್, ವಿನೆಗರ್, ಪೆಪ್ಪರ್ ಪುಡಿ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಸರಿಯಾಗಿ ಮಿಶ್ರಣ ಮಾಡಿ ಅದಕ್ಕೆ ಕಾಯಿಸಿಟ್ಟ ಬೇಬಿ ಕಾನ್ ನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿರಿ. ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಬಿಸಿ-ಬಿಸಿಯಾದ ಸ್ವಾದಿಷ್ಟಕರವಾದ ಬೇಬಿ ಕಾರ್ನ್ ಮಂಚೂರಿಯನ್ ಸವಿಯಿರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಹಾ! ಈ ಕಾಶಿ ಹಲ್ವಾ ಏನ್ ರುಚಿ ಅಂತೀರಾ,ಒಮ್ಮೆ ಹೀಗೆ ಮಾಡಿ ನೋಡಿ….
ಗಲ್ಫ್ ಮರುಭೂಮಿಯಲ್ಲಿ 2 ವರ್ಷ ನರಕಯಾತನೆ: ʼಆಡುಜೀವಿತಂʼ ಸಿನಿಮಾದ ನಿಜವಾದ ಹೀರೋ ಇವರೇ…
ಜರ್ಮನಿ ಕನ್ನಡತಿಯ ಸ್ಫೂರ್ತಿಯ ಪಯಣ; ಏನಿದು ಮಿಸಸ್ ಇಂಡಿಯಾ ವರ್ಲ್ಡ್ವೈಡ್ ?
MS Dhoni: ಕ್ಯಾಪ್ಟನ್ಸಿ ಕಿರೀಟ ಕಳಚಿಟ್ಟ ಥಲಾ..; ಟ್ರೋಫಿಯೊಂದಿಗೆ ಯಶೋಗಾಥೆಯೊಂದು ಅಂತ್ಯ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?