BPL ಚೀಟಿ ಹೊಂದಿದವರಿಗೆ ಮಾಸಿಕ 3 ಸಾವಿರ ರೂ. ಆರ್ಥಿಕ ನೆರವು ನೀಡಿ : ಸಂಸದ ಬಚ್ಚೇಗೌಡ ಆಗ್ರಹ


Team Udayavani, May 13, 2021, 7:29 PM IST

BPL ಚೀಟಿ ಹೊಂದಿದವರಿಗೆ ಮಾಸಿಕ 3 ಸಾವಿರ ರೂ. ಆರ್ಥಿಕ ನೆರವು ನೀಡಿ : ಸಂಸದ ಬಚ್ಚೇಗೌಡ ಆಗ್ರಹ

ಚಿಕ್ಕಬಳ್ಳಾಪುರ  : ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಬಿ.ಪಿ.ಎಲ್ ಕಾರ್ಡ್ ಹೊಂದಿರುವ ರಾಜ್ಯದ 1.5 ಕೋಟಿ ಜನರಿಗೆ ಜನತಾ ಕಫ್ರ್ಯೂ ಇರುವ ಈ ಅವಧಿಯನ್ನು ಒಳಗೊಂಡಂತೆ ಮುಂದಿನ 3 ತಿಂಗಳಿಗೆ ಪ್ರತಿ ತಿಂಗಳು ಕನಿಷ್ಠ 3000 ಸಾವಿರ ಹಣವನ್ನ ಜೀವನೋಪಾಯಕ್ಕೆ ನೀಡಲು ಕ್ರಮವಹಿಬೇಕೆಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣದ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕೋವಿಡ್ ಪಿಡುಗಿನ ಮೂರನೇ ಅಲೆ ಬಂದೆ ಬರುತ್ತೆ ಎಂದು ಈಗಾಗಲೆ ಆರೋಗ್ಯ ಕ್ಷೇತ್ರದ ತಜ್ಞರು ಹೇಳಿದ್ದಾರೆ ಆದ್ದರಿಂದ ಮೂರನೇ ಅಲೆಯನ್ನು ಸಮರ್ಪಕವಾಗಿ ಎದುರಿಸಲೂ ಸರ್ಕಾರ ಈಗಿನಿಂದಲೇ ಸಕಲ ಸಿದ್ದತೆಯನ್ನ ಮಾಡಿಕೋಳ್ಳಬೇಕು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ತಂಡದ ಪ್ರತಿಯೊಬ್ಬ ಮಂತ್ರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಕೋವಿಡ್ ನಿಯಂತ್ರಣ ಸಂಬಂಧ ರಚಿಸಿರುವ ರಾಜ್ಯಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯಲ್ಲಿರುವ ಎಲ್ಲರೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಕೋವಿಡ್ ಪಿಡುಗನ್ನು ತೊಲಗಿಸಬೇಕು ಎಂದರು.

ಲಸಿಕೆ ಸವಾಲಾಗಿ ಸ್ವೀಕರಿಸಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ ಹಾಗಾಗಿ ಮುಂದಿನ ದಿನಗಳಲ್ಲಿ 3ನೇ ಅಲೆ ಹರಡುವ ಅಪಾಯ ಇರುವ ಕಾರಣ ಪ್ರತಿಯೊಬ್ಬರು ಲಸಿಕೆಯನ್ನು ಪಡೆದುಕೊಳ್ಳಲು ಆಸಕ್ತಿವಹಿಸಿದ್ದಾರೆ ಇದರಿಂದ ಸದ್ಯದ ಪರಿಸ್ಥಿತಿಯಲ್ಲಿ ದಾಸ್ತಾನು ಇರುವ ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆಯನ್ನು ನೀಡಿ ಬಳಿಕ 18 ವರ್ಷ ನಂತರದ ಜನರಿಗೆ ನೀಡಲು ಕ್ರಮ ಕೈಗೊಳ್ಳಲಾಗಿದೆ ರಾಜ್ಯ ಸರ್ಕಾರ ಕೋವಿಡ್ ಲಸಿಕೆಯನ್ನು ಪೂರೈಕೆ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಅದನ್ನು ಬಂದ ತಕ್ಷಣ ಪೂರೈಕೆ ಮಾಡುವ ಕೆಲಸವನ್ನು ಮಾಡುತ್ತಾರೆ ನಾಗರಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದ ಸಂಸದರು ಈ ನಿಟ್ಟಿನಲ್ಲಿ ಸರ್ಕಾರವೂ ಸಹ ನಾಗರಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮನ್ವಯದಿಂದ ಕೆಲಸವನ್ನು ಮಾಡಬೇಕು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೊರೊನಾ ಸೋಂಕನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡಬೇಕೆಂದರು.

ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ: ಕೊರೊನಾ ಸೋಂಕಿನ ಪ್ರಭಾವದಿಂದ ದೇಶದ ಆರ್ಥಿಕ ಪರಿಸ್ಥಿತಿ ಸಹ ಉತ್ತಮವಾಗಿಲ್ಲ ಬಡವರ ಜೀವನ ಕಷ್ಟವಿದೆ ಉದ್ಯೋಗವಿಲ್ಲ ಕೈಗಾರಿಕೆಗಳು ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಸಾಧ್ಯವಾಗುತ್ತಿಲ್ಲ ಎಂದ ಸಂಸದರು ಕೊರೊನಾ ಸೋಂಕು ಹೆಚ್ಚಳದಲ್ಲಿ ಕರ್ನಾಟಕ ದೇಶದಲ್ಲಿ ಪ್ರಥಮ ಸ್ಥಾನದಲ್ಲಿದೆ 20 ಲಕ್ಷ ಸೋಂಕಿತರಿದ್ದಾರೆ ಈಗಾಗಲೇ 20 ಸಾವಿರ ಜನ ಮೃತಪಟ್ಟಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿ ದಿನೇ ದಿನೇ ಸೋಂಕು ಹೆಚ್ಚಳವಾಗುತ್ತಿದೆ ದೇಶದ ಬಹುತೇಕ ರಾಜ್ಯಗಳು ಕಷ್ಟದಲ್ಲಿ ಸಿಲುಕಿವೆ ಎಂದರು.

ಇದನ್ನೂ ಓದಿ:ಚಾಮರಾಜನಗರ ಆಸ್ಪತ್ರೆಯಲ್ಲಿ ಸಾವು ಪ್ರಕರಣ : ಸಚಿವ ಸುಧಾಕರ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ

ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಮಾದರಿ ಜಿಲ್ಲೆ: ನಗರ ಪ್ರದೇಶಗಳಲ್ಲಿ ಪ್ರತಿ ವಾರ್ಡಿಗೊಂದು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿ ಗ್ರಾಮಕ್ಕೆ ಒಂದು ಟಾಸ್ಕ್ ಫೋರ್ಸ್ ಸಮಿತಿ ಮಾಡಲಾಗಿದೆ ಅಲ್ಲದೆ ಪ್ರತಿ ವಾರ್ಡ್ ಹಾಗೂ ಪ್ರತಿ ಗ್ರಾಮಕ್ಕೆ ಒಬ್ಬರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಟಾಸ್ಕ್ ಫೋರ್ಸ್ ಸಮಿತಿಯು ಯೋಜನೆ ರೂಪಿಸಿಕೊಂಡು ತಲಾವಾರು ತಮ್ಮ ವ್ಯಾಪ್ತಿಯ ಮನೆಗಳನ್ನು ಹಂಚಿಕೊಂಡು ಪ್ರತಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಸೇವೆ ಹಾಗೂ ಮಾಹಿತಿ ಒದಗಿಸುತ್ತಿದ್ದಾರೆ ದಾಖಲಾಗಿರುವ ಕೋವಿಡ್ ಪ್ರಕರಣಗಳು ಎಷ್ಟು, ಸಕ್ರಿಯ ಪ್ರಕರಣಗಳು ಎಷ್ಟು ಎಂಬ ಎಲ್ಲ ಮಾಹಿತಿಯನ್ನು ಪಡೆಯುತ್ತಿದ್ದಾರೆ ಕೋವಿಡ್ ಸೋಂಕು ತಗುಲಿದವರ ಸಂಪರ್ಕಕ್ಕೆ ಬಂದ ಸಂಪರ್ಕಿತರನ್ನು ಪತ್ತೆಹಚ್ಚಿ ಹೋಮ್ ಕ್ವಾರಂಟೈನ್‍ನಲ್ಲಿ ಇರುವಂತೆ ನೋಡಿಕೊಳ್ಳುತ್ತಿದ್ದಾರೆ ಸಮಿತಿಯಲ್ಲಿ ಶಾಲಾ ಶಿಕ್ಷಕರು, ಆಶಾ ಕರ್ತೆಯರು, ಅಂಗನವಾಡಿ ಶಿಕ್ಷಕರು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸಹಾಯಕರು/ ಸಿಬ್ಬಂದಿಗಳನ್ನು ಸಮಿತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜಾಗೃತಿ ಮೂಡಿಸುತ್ತಿದ್ದಾರೆ ಈ ಎಲ್ಲಾ ಕ್ರಮಗಳ ಹಿನ್ನಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿ ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ 5ನೇ ಸ್ಥಾನದಲ್ಲಿದೆ ಎಂದರು.

ಜನತಾ ಕಫ್ರ್ಯೂ ಇರುವುದರಿಂದ ಎಷ್ಟೋ ಕಾರ್ಮಿಕರಿಗೆ ಕೆಲಸವಿಲ್ಲ ನಿರುದ್ಯೋಗ ಮತ್ತು ಬಡತನ ಜಾಸ್ತಿಯಾಗಿದೆ ಆದ್ದರಿಂದ ಇಂದಿರಾ ಕ್ಯಾಂಟೀನ್ ಮುಂದುವರಿಸಿ ಜನರಿಗೆ ಆಹಾರದ ಪೊಟ್ಟಣ ನೀಡಬೇಕು ಜಿಲ್ಲೆಯಲ್ಲಿ ಕೋವಿಡ್ ಸೊಂಕು ಹರಡದಂತೆ ತಡೆಯುವ ಕ್ರಮಗಳ ಉಪಯೋಗಕ್ಕಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಡಿ 25 ಲಕ್ಷಗಳನ್ನು ಬಳಸಿಕೊಳ್ಳುವಂತೆ ಲಿಖಿತ ಮನವಿಯನ್ನು ಅಪರ ಜಿಲ್ಲಾಧಿಕಾರಿಗಳಿಗೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಎಚ್.ಅಮರೇಶ್ ಅವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.