ಬಾಗಲಕೋಟೆಯಲ್ಲಿ ಕೋವಿಡ್ ಸೋಂಕಿಗೆ ಓರ್ವ ಬಲಿ! ನಾಲ್ಕು ಪೊಲೀಸ್ ಠಾಣೆ ಸೀಲ್ ಡೌನ್
ಎಸ್ಪಿ ಕಚೇರಿ ಸಿಬ್ಬಂದಿಗೆ ಕೋವಿಡ್
Team Udayavani, Jul 16, 2020, 7:12 PM IST
ಬಾಗಲಕೋಟೆ : ಕೋವಿಡ್ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆ ಹಚ್ಚುತ್ತಲೇ ಇದ್ದು, ಗುರುವಾರ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾನೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಬಾದಾಮಿಯ 55 ವರ್ಷದ ಪುರುಷ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಈತನಿಗೆ ಜುಲೈ 12ರಂದು ಸೋಂಕು ಖಚಿತಪಟ್ಟಿದ್ದು, ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಫಲಿಸದೇ ಸಾವನ್ನಪ್ಪಿದ್ದಾನೆ. ಕೋವಿಡ್ ನಿಯಮಾವಳಿ ಪ್ರಕಾರ, ಅಂತ್ಯಕ್ರಿಯೆ ಮಾಡಲಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ|ಪ್ರಕಾಶ ಬಿರಾದಾರ ತಿಳಿಸಿದ್ದಾರೆ.
ನಾಲ್ಕು ಪೊಲೀಸ್ ಠಾಣೆ ಸೀಲ್ಡೌನ್ :
ಬಾಗಲಕೋಟೆ ಶಹರ ಪೊಲೀಸ್ ಠಾಣೆಯ ಹವಾಲ್ದಾರ ಮತ್ತು ಓರ್ವ ಪೇದೆ, ಇಳಕಲ್ಲ ಗ್ರಾಮೀಣ ಠಾಣೆ, ತೇರದಾಳ ಠಾಣೆಯ ಪೇದೆ ಹಾಗೂ ರಬಕವಿ -ಬನಹಟ್ಟಿ ಪೊಲೀಸ್ ಠಾಣೆಯ ಎಎಸ್ಐಗೆ ಗುರುವಾರ ಸೋಂಕು ದೃಢಪಟ್ಟಿದೆ. ಹೀಗಾಗಿ ಈ ನಾಲ್ಕು ಪೊಲೀಸ್ ಠಾಣೆಗಳನ್ನು ಗುರುವಾರ ಸೀಲ್ಡೌನ್ ಮಾಡಿದ್ದು , ಇಡೀ ಠಾಣೆಗೆ ಸ್ಯಾನಿಟೈಜನರ್ ಮಾಡಲಾಗಿದೆ.
ನಾಲ್ಕು ಠಾಣೆಯ ಐವರು ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಸಂಪರ್ಕಕ್ಕೆ ಬಂದವರ ಗಂಟಲು ದ್ರವ ತಪಾಸಣೆಗೆ ಸೂಚಿಸಲಾಗಿದೆ. ಎರಡು ದಿನಗಳ ಕಾಲ ನಾಲ್ಕೂ ಪೊಲೀಸ್ ಠಾಣೆಗಳಲ್ಲಿ ಸ್ಯಾನಿಟೈಜರ್ ಮಾಡಿ , ಆ ಠಾಣೆಗಳ ಕಾರ್ಯ ನಿರ್ವಹಣೆಯನ್ನು ಪಕ್ಕದ ಬೇರೆ ಕಟ್ಟಡ ಇಲ್ಲವೇ ಸಮೀಪದ ಬೇರೆ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ತಿಳಿಸಿದ್ದಾರೆ.
ಎಸ್ಪಿ ಕಚೇರಿ ಸಿಬ್ಬಂದಿಗೆ ಕೋವಿಡ್ :
ಎಸ್ಪಿ ಕಚೇರಿಯ ಕಂಪ್ಯೂಟರ್ ವಿಭಾಗದ 35 ವರ್ಷದ ಓರ್ವ ಪುರುಷ ಸಿಬ್ಬಂದಿಗೂ ಗುರುವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಇಡೀ ಎಸ್ಪಿ ಕಚೇರಿಯನ್ನು ಸ್ಯಾನಿಟೈಜರ್ ಮಾಡಲಾಗಿದೆ. ಆದರೆ, ಆ ಸಿಬ್ಬಂದಿ 8 ದಿನಗಳ ಹಿಂದೆ ವೈಯಕ್ತಿಕ ಕೆಲಸಕ್ಕಾಗಿ ರಜೆ ಹಾಕಿದ್ದು, ರಜೆಯ ಮೇಲಿದ್ದಾಗಲೇ ಸೋಂಕಿನ ಲಕ್ಷಣ ಕಂಡಾಗ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಕೋವಿಡ್ ದೃಢಪಟ್ಟಿದೆ. ಇದರಿಂದ ಕಚೇರಿಯ ಇತರೆ ಸಿಬ್ಬಂದಿಗಳು ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿಲ್ಲ. ಆದರೂ, ಕಚೇರಿಯನ್ನು ಸ್ಯಾನಿಟೈಜರ್ ಮಾಡಲಾಗಿದೆ ಎಂದು ಎಸ್ಪಿ ಲೋಕೇಶ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ