ಬಡ್ತಿ: ಬಾಲಾಕೋಟ್ ವೈಮಾನಿಕ ದಾಳಿ ಹೀರೋ ಅಭಿನಂದನ್ ಈಗ ಗ್ರೂಪ್ ಕ್ಯಾಪ್ಟನ್
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಎಫ್-16 ಅನ್ನು ಅಭಿನಂದನ್ ಹೊಡೆದುರುಳಿಸಿದ್ದರು.
Team Udayavani, Nov 3, 2021, 5:13 PM IST
ನವದೆಹಲಿ: ಪಾಕಿಸ್ತಾನದ ಉಗ್ರರ ಶಿಬಿರಗಳ ಮೇಲೆ ವಾಯುದಾಳಿ ನಡೆಸಿದ್ದ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಭಾರತೀಯ ವಾಯುಪಡೆಯ ಹೀರೋ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಗ್ರೂಪ್ ಕ್ಯಾಪ್ಟನ್ ಆಗಿ ಬಡ್ತಿ ನೀಡಲಾಗಿದೆ ಎಂದು ವರದಿ ತಿಳಿಸಿದೆ.
ಅಭಿನಂದನ್ ಅವರು ಎಫ್ 16 ಅನ್ನು ಹೊಡೆದುರುಳಿಸಿದ ಏಕೈಕ ಮಿಗ್ -21 ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2019ರ ಫೆಬ್ರುವರಿಯಲ್ಲಿ ಪಾಕಿಸ್ತಾನದ ಉಗ್ರರ ಶಿಬಿರಗಳ ಮೇಲೆ ವಾಯುದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಅಭಿನಂದನ್ ಅವರನ್ನು ಶೌರ್ಯ ಚಕ್ರ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿತ್ತು.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಎಫ್-16 ಅನ್ನು ಅಭಿನಂದನ್ ಹೊಡೆದುರುಳಿಸಿದ್ದರು. ಆದರೆ ಈ ಸಂದರ್ಭದಲ್ಲಿ ಶತ್ರುಪಡೆ ಅವರ ವಿಮಾನವನ್ನು ಹೊಡೆದುರುಳಿಸಿದ ನಂತರ ಪಾಕಿಸ್ತಾನ ಸೇನೆ ಅಭಿನಂದನ್ ಅವರನ್ನು ಸೆರೆ ಹಿಡಿದಿತ್ತು.
ಬಂಧನದ ನಂತರವೂ ಅಭಿನಂದನ್ ಅವರು ತಮ್ಮ ದೇಶದ ಗುಟ್ಟನ್ನು ಬಿಟ್ಟುಕೊಟ್ಟಿರಲಿಲ್ಲವಾಗಿತ್ತು. ಕೊನೆಗೆ ಭಾರತದ ಒತ್ತಡಕ್ಕೆ ಮಣಿದು ಪಾಕಿಸ್ತಾನ್ ಅಭಿನಂದನ್ ಅವರನ್ನು ಭಾರತಕ್ಕೆ ಕಳುಹಿಸಿಕೊಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ