ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ
Team Udayavani, Mar 1, 2021, 11:20 PM IST
ಬೆಂಗಳೂರು: ಪುತ್ರಿಯರ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ ಪತಿಯನ್ನು ಸುಪಾರಿ ನೀಡಿ ಹತ್ಯೆಗೈದ ಆರೋಪದಲ್ಲಿ ಮಹಿಳೆ, ಆಕೆಯ ಪುತ್ರ ಸೇರಿದಂತೆ ಐವರು ಆರೋಪಿಗಳನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೆಗ್ಗನಹಳ್ಳಿ ನಿವಾಸಿ ಸರ್ವರಿ ಬೇಗಂ (42), ಆಕೆಯ ಪುತ್ರ ಶಫಿ ಉರ್ ರೆಹಮಾನ್ (20), ಸುಪಾರಿ ಪಡೆದುಕೊಂಡಿದ್ದ ಥಣಿಸಂದ್ರದ ನಿವಾಸಿ ಅಫ್ತಾಬ್ (21), ಆತನ ಸಹಚರರಾದ ಪೀಣ್ಯದ ಸೈಯದ್ ಅವೆಜ್ ಪಾಷಾ (23) ಹಾಗೂ ಮಹಮ್ಮದ್ ಸೈಫ್ (20) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಗಳು ಮಹಮ್ಮದ್ ಹಂಜಲ (52) ಕೊಲೆಗೈದಿದ್ದರು. ಆರೋಪಿಗಳಿಂದ 98 ಸಾವಿರ ಹಣ ಜಪ್ತಿ ಮಾಡಲಾಗಿದೆ. ಘಟನೆ ನಡೆದ 18 ದಿನಗಳ ಬಳಿಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಕೊಲೆಯಾದ ಮಹಮ್ಮದ್ ಹಂಜಲ್ ಚಪ್ಪಲಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಮೃತನಿಗೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮೂವರು ಹೆಣ್ಣು ಮಕ್ಕಳು ಹಾಗೂ ಒಬ್ಬ ಪುತ್ರನಿದ್ದಾನೆ. ಮಹಮ್ಮದ್ ಹೆಣ್ಣು ಮಕ್ಕಳು ಬಟ್ಟೆ ಬದಲಾಯಿಸುವಾಗ, ಸ್ನಾನಕ್ಕೆ ಹೋದಾಗ ಕದ್ದು ನೋಡುತ್ತಿದ್ದ. ಅದನ್ನು ಗಮನಿಸಿದ್ದ ಸರ್ವರಿ ಬೇಗಂ, ಪತಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದಳು. ಆದರೂ ಮೃತ ವ್ಯಕ್ತಿ ತನ್ನ ಚಾಳಿಯನ್ನು ಬಿಟ್ಟಿರಲಿಲ್ಲ. ಅಲ್ಲದೆ, ಪತ್ನಿಯ ಶೀಲ ಶಂಕಿಸಿ ಆಗ್ಗಾಗ್ಗೆ ಜಗಳವಾಡುತ್ತಿದ್ದ. ಪತಿ ವರ್ತನೆಯಿಂದ ಬೇಸತ್ತ ಸರ್ವರಿ ಬೇಗಂ, ಪುತ್ರ ಶಫಿ ಉರ್ ರೆಹಮಾನ್ ಜತೆ ಸೇರಿ ಕೊಲೆಗೆ ಸಂಚು ರೂಪಿಸಿದ್ದಳು ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ:ಜಿ-23ಯಲ್ಲಿ ಗುರುತಿಸಿಕೊಳ್ಳಲ್ಲ: ಮಾಜಿ ಮುಖ್ಯಮಂತ್ರಿ ಮೊಯ್ಲಿ ಸ್ಪಷ್ಟನೆ
4.5 ಲಕ್ಷ ರೂ.ಗೆ ಸುಪಾರಿ
ಆರೋಪಿಗಳ ಪೈಕಿ ಅಫ್ತಾಬ್ ವಿರುದ್ಧ 2019ರಲ್ಲಿ ರಾಜಗೋಪಾಲನಗರ ಠಾಣೆಯಲ್ಲಿ ದಾಖಲಾಗಿದ್ದ ಕೊಲೆಯತ್ನ ಪ್ರಕರಣ ಮತ್ತು ತುಮಕೂರು ಠಾಣೆಯಲ್ಲಿ ಮೊಬೈಲ್ ಕಳವು ಪ್ರಕರಣಗಳು ದಾಖಲಾಗಿವೆ. ಈತನನ್ನು ಸಂಪರ್ಕಿಸಿದ ಶಫಿ ಉರ್ ರೆಹಮಾನ್ ಮತ್ತು ತಾಯಿ ಬೇಗಂ, 4.5 ಲಕ್ಷ ರೂ.ಗೆ ಪತಿಯ ಹತ್ಯೆಗೆ ಸುಪಾರಿ ಕೊಟ್ಟಿದ್ದರು. ಈ ಸಂಬಂಧ ಅಫ್ತಾಬ್, ತನ್ನ ಸಹಚರರಾದ ಮಹಮ್ಮದ್ ಸೈಫ್ ಹಾಗೂ ಸೈಯದ್ ಅವೆಜ್ ಜತೆ ಸೇರಿಕೊಂಡು ಮಹಮ್ಮದ್ ಹಂಜಲ್ ಹತ್ಯೆಗೆ ಸಂಚು ರೂಪಿಸಿದ್ದ.
ಫೆ.10ರಂದು ರಾತ್ರಿ ಸರ್ವರಿ ಬೇಗಂ ಪತಿಯ ಊಟದಲ್ಲಿ ಆರು ನಿದ್ರೆ ಮಾತ್ರೆ ಬೆರೆಸಿ ಕೊಟ್ಟಿದ್ದಳು. ಊಟ ಮಾಡಿ ಮಹಮ್ಮದ್ ನಿದ್ರೆಗೆ ಜಾರಿದ್ದ. ಬೆಳಗಿನ ಜಾವ 3.30ರ ಸುಮಾರಿಗೆ ಅಫ್ತಾಬ್ ತನ್ನ ಸಹಚರರ ಜತೆ ಮನೆಗೆ ಬಂದು ಮಹಮ್ಮದನನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿ ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.
ಹೃದಯಾಘಾತದ ಕಥೆ ಕಟ್ಟಿದ ಪತ್ನಿ, ಪುತ್ರ
ಮರು ದಿನ ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪತ್ನಿ, ಪುತ್ರ ಸುಳ್ಳು ಸುದ್ದಿ ಹಬ್ಬಿಸಿದ್ದರು. ಅಲ್ಲದೆ, ಮೃತ ದೇಹವನ್ನು ತಿಗಳರಪಾಳ್ಯದ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಿದ್ದರು. ಅನಂತರ ಕೆಲ ದಿನಗಳ ಬಳಿಕ ಸ್ಥಳೀಯರೊಬ್ಬರು ಆರೋಪಿಗಳ ವರ್ತನೆ ಗಮನಿಸಿ ಅನುಮಾನಗೊಂಡು ಠಾಣೆಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಐಯಣ್ಣ ಬಿ.ರೆಡ್ಡಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಬಳಿಕ ಸರ್ವರಿ ಬೇಗಂನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಬಳಿಕ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ. ಮೃತ ದೇಹವನ್ನು ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ನಡೆಸಬೇಕಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ
49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ
JDS MP ಪ್ರಜ್ವಲ್ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ
ಪರಿಷತ್ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ
Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ
MUST WATCH
ಹೊಸ ಸೇರ್ಪಡೆ
ಬರಲಿದೆ ಮತ್ತೊಂದು ಸ್ಕ್ಯಾಮ್ ಸಿರೀಸ್: ʼಸ್ಕ್ಯಾಮ್ 2010: ಸುಬ್ರತಾ ರಾಯ್ʼ ಅನೌನ್ಸ್
ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ
27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್
Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್ಶಿಪ್ ಕಾರ್ಯಕ್ರಮ
Sandalwood: ‘ಇದು ನಮ್ ಶಾಲೆ’ಯ ಹಾಡುಗಳು ಬಂತು