ಹಣಕಾಸಿನ ವಿಚಾರ : ನಡುರಸ್ತೆಯಲ್ಲೇ ಮಹಿಳೆಯ ಕತ್ತು ಕೊಯ್ದು ಭೀಕರ ಹತ್ಯೆ
Team Udayavani, Feb 28, 2021, 9:15 PM IST
ಬೆಂಗಳೂರು: ಹಾಡುಹಗಲೇ ವ್ಯಕ್ತಿಯೊಬ್ಬ ಹಣಕಾಸಿನ ವಿಚಾರಕ್ಕೆ ಮಹಿಳೆಯನ್ನು ನಡು ರಸ್ತೆಯಲ್ಲೇ ಭೀಕರವಾಗಿ ಕತ್ತು ಕೊಯ್ದು ಹತ್ಯೆಗೈದಿರುವ ಘಟನೆ ಎಚ್ಎಎಲ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಕುಂದಲಹಳ್ಳಿ ನಿವಾಸಿ ಆಲಿಂ ಬೇಬಿ (32) ಕೊಲೆಯಾದ ಮಹಿಳೆ. ಕೃತ್ಯ ಎಸಗಿದ ರಫೀಕ್ ಶೇಖ್ ಎಂಬಾತನಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಪಶ್ಚಿಮ ಬಂಗಾಳ ಮೂಲದ ಆಲೀಂ ಬೇಬಿ ಮತ್ತು ರಫೀಕ್ ಶೇಖ್ ಹಲವು ತಿಂಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದು, ಕುಂದಲಹಳ್ಳಿಯ ಶೆಡ್ನಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಇಬ್ಬರು ಅಕ್ಕ-ಪಕ್ಕದ ನಿವಾಸಿಗಳಾಗಿದ್ದಾರೆ. ಆಲೀಂ ಬೇಬಿ ಮನೆ ಕೆಲಸ ಮತ್ತು ಅಡುಗೆ ಕೆಲಸಕ್ಕೆ ಹೋಗುತ್ತಿದ್ದರು. ಆರೋಪಿ ರಫೀಕ್ ಶೇಖ್, ಸೀರೆ ವ್ಯಾಪಾರ ಮಾಡಿಕೊಂಡಿದ್ದ. ಕೆಲ ತಿಂಗಳ ಹಿಂದೆ ಆಲೀಂ ಬೇಬಿ, ರಫೀಕ್ ಶೇಖ್ನಿಂದ ಹತ್ತು ಸಾವಿರ ರೂ. ಪಡೆದುಕೊಂಡಿದ್ದಳು.
ಆದರೆ, ಸರಿಯಾದ ಸಮಯಕ್ಕೆ ಹಿಂದಿರುಗಿಸಿರಲಿಲ್ಲ. ಅದೇ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿತ್ತು. 15 ದಿನಗಳ ಹಿಂದೆ ಆಕೆಯ ಶೆಡ್ ಬಳಿ ಬಂದಿದ್ದ ರಫೀಕ್, ಹಣ ವಾಪಸ್ ಕೊಡುವಂತೆ ಜಗಳ ತೆಗೆದಿದ್ದ. ಇಬ್ಬರ ನಡುವೆ ದೊಡ್ಡದಾಗಿ ವಾಗ್ವಾದ ನಡೆದಿತ್ತು. ಆಗ ಆಲೀಂ ಬೇಬಿ, ರಫೀಕ್ಗೆ ಚಪ್ಪಲಿಯಿಂದ ಹೊಡೆದಿದ್ದಳು. ಅದರಿಂದ ಆಕ್ರೋಶಗೊಂಡಿದ್ದ ಆರೋಪಿ, ಕೊಲ್ಲುವುದಾಗಿ ಬೆದರಿಕೆ ಹಾಕಿ ಹೋಗಿದ್ದ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ:ಅಂಬಾನಿ ನಿವಾಸದ ಬಳಿ ಜಿಲೆಟಿನ್ ತುಂಬಿದ ಕಾರು ನಿಲ್ಲಿಸಿದ್ದು ನಾವೇ ಎಂದ ಜೈಶ್-ಉಲ್-ಹಿಂದ್
ನಡು ರಸ್ತೆಯಲ್ಲಿ ಭೀಕರ ಕೊಲೆ
ಭಾನುವಾರ ಬೆಳಗ್ಗೆ ಆಲೀಂ ಬೇಬಿ ಎಂದಿನಂತೆ ಕೆಲಸಕ್ಕೆ ಹೋಗಲು ಬ್ರೂಕ್ ಫೀಲ್ಡ್ 2ನೇ ಹಂತ, ಐಟಿಪಿಎಲ್ ಮುಖ್ಯ ರಸ್ತೆ ಟೆಕ್ ಪಾರ್ಕ್ ಬಳಿ ಮನೆ ಕೆಲಸಕ್ಕೆ ನಡೆದುಕೊಂಡು ಹೋಗುತ್ತಿದ್ದಳು. ಅದೇ ವೇಳೆ ಎದುರಿಗೆ ಬಂದ ಆರೋಪಿ, ಅಡ್ಡಹಾಕಿ ಚಾಕುವಿನಿಂದ ಏಕಾಏಕಿ ಆಕೆಯ ಕುತ್ತಿಗೆ ಇರಿದು ಕೊಲೆಗೈದು ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಲೀಂ ಬೇಬಿಯನ್ನು ಕಂಡ ಸ್ಥಳೀಯರು ಕೂಡಲೇ ಎಚ್ಎಎಲ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಆರೋಪಿಯ ಪತ್ತೆಗಾಗಿ ಡಿಸಿಪಿ ಡಿ.ದೇವರಾಜ್ ಎಚ್ಎಎಲ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಹಣಕಾಸಿನ ವಿಚಾರವಾಗಿಯೇ ಹತ್ಯೆಯಾಗಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಪಡಿಸಿದ್ದಾರೆ. ಪ್ರಕರಣ ಎಚ್ಎಎಲ್ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್