ಇಂಗ್ಲೆಂಡ್‌ಗೆ ವೈಟ್‌ವಾಶ್‌ ಮಾಡಿದ ಬಾಂಗ್ಲಾದೇಶ


Team Udayavani, Mar 15, 2023, 5:25 AM IST

eng

ಢಾಕಾ: ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಬಾಂಗ್ಲಾದೇಶ ಪ್ರವಾಸಿ ಇಂಗ್ಲೆಂಡ್‌ಗೆ ವೈಟ್‌ವಾಶ್‌ ಮಾಡಿ ತವರಲ್ಲಿ ತಾನು ಟೈಗರ್‌ ಎಂಬುದನ್ನು ಸಾಬೀತುಪಡಿಸಿದೆ. ಮಂಗಳವಾರ ನಡೆದ 3ನೇ ಟಿ20 ಪಂದ್ಯವನ್ನು ಬಾಂಗ್ಲಾದೇಶ ನಾಟಕೀಯ ರೀತಿಯಲ್ಲಿ 16 ರನ್ನುಗಳಿಂದ ಗೆದ್ದಿತು. ಮೊದಲು ಬ್ಯಾಟಿಂಗ್‌ ನಡೆಸಿದ ಆತಿಥೇಯ ತಂಡ 2 ವಿಕೆಟಿಗೆ 158 ರನ್‌ ಪೇರಿಸಿದರೆ, ಸುಸ್ಥಿತಿಯಲ್ಲಿದ್ದ ಇಂಗ್ಲೆಂಡ್‌ 6 ವಿಕೆಟ್‌ ನಷ್ಟಕ್ಕೆ 142 ರನ್‌ ಗಳಿಸಿ ಶರಣಾಯಿತು.

ಮೊದಲೆರಡು ಪಂದ್ಯಗಳನ್ನು ಬಾಂಗ್ಲಾದೇಶ 6 ವಿಕೆಟ್‌ ಹಾಗೂ 4 ವಿಕೆಟ್‌ ಅಂತರದಿಂದ ಜಯಿಸಿತ್ತು. ಇದಕ್ಕೂ ಹಿಂದಿನ ಏಕದಿನ ಸರಣಿ 2-1 ಅಂತರದಿಂದ ಇಂಗ್ಲೆಂಡ್‌ ಪಾಲಾಗಿತ್ತು. ಇಂಗ್ಲೆಂಡ್‌ 13 ಓವರ್‌ಗಳ ಅಂತ್ಯಕ್ಕೆ ಒಂದೇ ವಿಕೆಟಿಗೆ 100 ರನ್‌ ಮಾಡಿ ಗೆಲುವಿನ ಸಾಧ್ಯತೆಯನ್ನು ತೆರೆದಿರಿಸಿತ್ತು. ಡೇವಿಡ್‌ ಮಲಾನ್‌ (53) ಮತ್ತು ಜಾಸ್‌ ಬಟ್ಲರ್‌ (40) ಕ್ರೀಸ್‌ ಆಕ್ರಮಿಸಿಕೊಂಡಿದ್ದರು. ಆದರೆ ಉಳಿದ 7 ಓವರ್‌ಗಳಲ್ಲಿ 59 ರನ್‌ ಗಳಿಸಲು ಇಂಗ್ಲೆಂಡ್‌ನಿಂದ ಸಾಧ್ಯವಾಗಲಿಲ್ಲ. ಮಲಾನ್‌ ಮತ್ತು ಬಟ್ಲರ್‌ ಸತತ ಎಸೆತಗಳಲ್ಲಿ ಔಟಾದರು. ಮೊಯಿನ್‌ ಅಲಿ (9), ಬೆನ್‌ ಡಕೆಟ್‌ (11), ಸ್ಯಾಮ್‌ ಕರನ್‌ (4) ಬೇಗನೇ ವಾಪಸಾದರು.

ಕ್ರಿಸ್‌ ವೋಕ್ಸ್‌ ಮತ್ತು ಕ್ರಿಸ್‌ ಜೋರ್ಡನ್‌ ಜೋಡಿಯಿಂದ ತಂಡವನ್ನು ದಡ ಸೇರಿಸಲಾಗಲಿಲ್ಲ. ಡೆತ್‌ ಓವರ್‌ಗಳಲ್ಲಿ ಟಸ್ಕಿನ್‌ ಅಹ್ಮದ್‌, ಮುಸ್ತಫಿಜುರ್‌ ರೆಹಮಾನ್‌ ಮತ್ತು ಶಕಿಬ್‌ ಅಲ್‌ ಹಸನ್‌ ಅತ್ಯಂತ ಬಿಗಿಯಾದ ದಾಳಿ ನಡೆಸಿ ಇಂಗ್ಲೆಂಡ್‌ಗೆ ಕಡಿವಾಣ ಹಾಕಿದರು. ಸಂಕ್ಷಿಪ್ತ ಸ್ಕೋರ್‌: ಬಾಂಗ್ಲಾದೇಶ-2 ವಿಕೆಟಿಗೆ 158 (ಲಿಟನ್‌ ದಾಸ್‌ 73, ನಜ್ಮುಲ್‌ ಹುಸೇನ್‌ ಔಟಾಗದೆ 47, ರೋನಿ ತಾಲೂಕಾªರ್‌ 24, ಜೋರ್ಡನ್‌ 21ಕ್ಕೆ 1, ರಶೀದ್‌ 23ಕ್ಕೆ 1). ಇಂಗ್ಲೆಂಡ್‌-6 ವಿಕೆಟಿಗೆ 142 (ಮಲಾನ್‌ 53, ಬಟ್ಲರ್‌ 40, ಟಸ್ಕಿನ್‌ ಅಹ್ಮದ್‌ 26ಕ್ಕೆ 2, ಮುಸ್ತಫಿಜುರ್‌ 14ಕ್ಕೆ 1, ತನ್ವೀರ್‌ ಇಸ್ಲಾಮ್‌ 17ಕ್ಕೆ 1). ಪಂದ್ಯಶ್ರೇಷ್ಠ: ಲಿಟನ್‌ ದಾಸ್‌. ಸರಣಿಶ್ರೇಷ್ಠ: ನಜ್ಮುಲ್‌ ಹುಸೇನ್‌.

ಟಾಪ್ ನ್ಯೂಸ್

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

5-vitla

Vitla: ಬೈಕ್ ಸೇತುವೆಗೆ ಢಿಕ್ಕಿ; 40 ಅಡಿ ಆಳದ ನದಿಗೆ ಬಿದ್ದ ಸವಾರ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

ಯತ್ನಾಳ

Vijayapura; ಡಿಸಿಎಂ ಸ್ಥಾನಕ್ಕೆ ಶಾಮನೂರು ಬೇಡಿಕೆ ಸೂಕ್ತ: ಶಾಸಕ ಯತ್ನಾಳ

ramesh jigajinagi

Vijayapura; ಜೆಡಿಎಸ್ ಹೊಂದಾಣಿಕೆಯಿಂದ ಬಲ ಬಂದಿದೆ: ಸಂಸದ ಜಿಗಜಿಣಗಿ

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು…

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

Big Bash Winning Coach Luke Williams Joins RCB Women’s Team as Head Coach

WPL; Royal Challengers Bangalore ಮಹಿಳಾ ತಂಡಕ್ಕೆ ಹೊಸ ಕೋಚ್ ನೇಮಕ

CWC23; ಭಾರತ, ಆಸ್ಟ್ರೇಲಿಯಾ ಅಲ್ಲ…: ಕಪ್ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಗವಾಸ್ಕರ್

CWC23; ಭಾರತ, ಆಸ್ಟ್ರೇಲಿಯಾ ಅಲ್ಲ…: ಕಪ್ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಗವಾಸ್ಕರ್

1ewww

World Cup Cricket;1983ರ ಬಳಿಕ ಭಾರತದ ಮಹತ್ಸಾಧನೆ

1–sadasd

Boxing: ಪದಕದೊಂದಿಗೆ ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ನಿಖತ್‌ ಜರೀನ್‌

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

6-mundagodu

Mundgod: ಗಾಂಜಾ ಮಾರಾಟ; ಆರೋಪಿ ಬಂಧನ

Yadagiri; ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

Yadagiri; ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

5-vitla

Vitla: ಬೈಕ್ ಸೇತುವೆಗೆ ಢಿಕ್ಕಿ; 40 ಅಡಿ ಆಳದ ನದಿಗೆ ಬಿದ್ದ ಸವಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.