ಅಭಿವೃದ್ಧಿ ವಿಚಾರದಲ್ಲಿ ನಾನು ಹೆದರೋ ಮಗ ಅಲ್ಲ : ಸರಕಾರದ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್
Team Udayavani, Jan 6, 2021, 2:24 PM IST
ಬೆಂಗಳೂರು : ಅಭಿವೃದ್ಧಿ ವಿಚಾರವಾಗಿ ಮಾತನಾಡಲು ಹೆದರುವ ಮಗ ನಾನಲ್ಲ ಎಂದು ಸರಕಾರದ ವಿರುದ್ಧ ರೆಬೆಲ್ ಶಾಸಕ ಯತ್ನಾಳ್ ಗುಡುಗಿದ್ದಾರೆ.
ವಿಧಾನ ಸೌಧದಲ್ಲಿ ಮಾತನಾಡಿದ ಅವರು ನಾನು ಮೊನ್ನೆ ಸಭೆಯಲ್ಲಿ ಮಾತಾಡಿದ್ದು ನಿಜ ಅಭಿವೃದ್ಧಿ ಬಗ್ಗೆ ನಾನು ಮಾತಾಡಿದ್ದೆ ಹಾಗಾಗಿ ನನಗೆ ಹಿಂಜರಿಕೆ ಇಲ್ಲ, ನಾನು ಹೆದರೋ ಮಗ ಅಲ್ಲ, ಯಾವಾಗ ಬಾಣ ಬಿಡಬೇಕು, ಯಾವಾಗ ಮೌನವಾಗಿರಬೇಕು ಎಂಬುದು ನನಗೆ ಗೊತ್ತಿದೆ ಮೊನ್ನೆ ಕೂಡ ಒಬ್ಬನೇ ಗಲಾಟೆ ಮಾಡಿದ್ದು ಉಳಿದ ಶಾಸಕರು ಎಲ್ಲರೂ ಸುಮ್ಮನಿದ್ದರು ಎಂದರು ಅಲ್ಲದೆ ಹಾದಿ ಬೀದಿಲಿ ಕೆಲವರು ಹೇಳಿಕೆ ಕೊಡುತಿದ್ದಾರಲ್ಲಾ ಯಡಿಯೂರಪ್ಪ ಸಭೆಯಲ್ಲಿ ಒಬ್ಬರೇ ಶಾಸಕರು ಗಲಾಟೆ ಮಾಡಿದ್ದು ಅಂತ ಹಾಗಾಗಿ ಕಾರಜೋಳ ಹೇಳಿದ್ದು ಸತ್ಯ ಇದೆ ಅದರಲ್ಲಿ ಯಾವುದೇ ಸಂದೇಹ ಬೇಡ ಎಂದರು.
ಯಡಿಯೂರಪ್ಪನವರ ಮನೆಗೆ ನಾನು ಮಂತ್ರಿ ಸಲುವಾಗಿ ಎಂದೂ ಹೋಗಿಲ್ಲ ಬದಲಾಗಿ ಜನರ ಭಾವನೆಗಳನ್ನು ಹೇಳುವ ಕೆಲಸ ಮಾಡಿದ್ದೇನೆ ನಾನು ಯಾವುದಕ್ಕೂ ಅಂಜುವ ಮಗ ಅಲ್ಲ ನಾನು ಉತ್ತರ ಕರ್ನಾಟಕದವನು, ನಾನು ಕ್ಷಮೆ ಯಾಚಿಸ್ತೇನೆ ಅಂತ ಹೇಳೋನೇ ಅಲ್ಲ, ನನ್ನ ಮಾತನ್ನು ಮಾಧ್ಯಮದವರು ತಿರುಚಿದ್ದಾರೆ ಅಂತ ಹೇಳೋನೂ ನಾನಲ್ಲ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ನಾನು ಮಾತನಾಡುತ್ತೇನೆ ಜನಪರ ವಿಚಾರಗಳನ್ನೇ ನಾನು ಮಾತನಾಡಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ:ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ
ಸರ್ಕಾರ ತಪ್ಪು ಮಾಡಿದಾಗ ನಾನು ಎಚ್ಚರಿಸಿದ್ದೇನೆ, ಅದು ಪಕ್ಷ ವಿರೋಧಿ ಕೆಲಸ ಅಲ್ಲ, ಅಭಿವೃದ್ಧಿ ಪರ ನನ್ನ ಧ್ವನಿ ಅದನ್ನು ಯಾರೂ ನಿಲ್ಲಿಸಲು ಸಾಧ್ಯವಿಲ್ಲ, ನಾನು ಮಾತನಾಡುವಾಗ ಯಾರೂ ಖಂಡಿಸಿಲ್ಲ ಒಬ್ಬರೇ ಒಬ್ಬರು ಗಲಾಟೆ ಮಾಡಿದ್ರು ಬಿಟ್ಟರೆ ಬೇರೆ ಯಾರೂ ನನಗೆ ವಿರೋಧ ಮಾಡಲಿಲ್ಲ ಅಂದರೆ ಉಳಿದ ಶಾಸಕರಿಗೂ ನಾನು ಹೇಳಿದ್ದು ಸಹಮತ ಇದೆ ಅಂತ ಅರ್ಥ ಅಲ್ಲವೇ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ