ಸದನದಲ್ಲಿ ಶಾಸಕ ಯತ್ನಾಳರಿಂದ ವೈದ್ಯರ ವಿರುದ್ಧ ಆಧಾರ ರಹಿತ‌ ಆರೋಪ : ಡಾ.ಬಿದರಿ


Team Udayavani, Sep 29, 2020, 3:46 PM IST

ಸದನದಲ್ಲಿ ಶಾಸಕ ಯತ್ನಾಳ್ ವೈದ್ಯರ ವಿರುದ್ಧ ಆಧಾರ ರಹಿತ‌ ಆರೋಪ : ಡಾ.ಬಿದರಿ

ವಿಜಯಪುರ: ಖಾಸಗಿ ಆಸ್ಪತ್ರೆಗಳು ರೋಗಿಗಳ ಪಾಲಿಗೆ ಸುಲಿಗೆ ಕೇಂದ್ರಗಳಾಗುತ್ತಿವೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಡಿಸಿಎಂ ಲಕ್ಷ್ಮಣ ಸವದಿ ಇವರು ಸದನದಲ್ಲಿ ಆಧಾರ ರಹಿತ ಆರೋಪಿಸಿ ಮಾತನಾಡಿದ್ದಾರೆ ಎಂದು ಖಾಸಗಿ ಆಸ್ಪತ್ರೆಗಳ ಸಂಘದ ಪ್ರಮುಖ, ನಗರದ ‌ಮಕ್ಕಳ ತಜ್ಞ ವೈದ್ಯ ಡಾ.ಎಲ್.ಎಚ್.ಬಿದರಿ ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ನಿತಿನ್ ಅಗರವಾಲ್ ಹರಿಹಾಯ್ದರು.

ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಪ್ರತಿನಿಧಿಗಳಾಗಿ ಸದನದಲ್ಲಿ ಆಧಾರ ಇಲ್ಲದೇ ಮಾತನಾಡಿದ್ದು ಸರಿಯಲ್ಲ. ಕೂಡಲೇ ಅವರನ್ನು ಭೇಟಿ ಮಾಡಿ ಖಾಸಗಿ ಅಸ್ಪತ್ರೆಗಳು ಸರ್ಕಾರಿ ನಿಯಮದಂತೆ ಬಿಲ್ ಪಡೆಯುತ್ತಿರುವ ಮನವರಿಕೆ ಮಾಡಿಕೊಡಲಾಗುತ್ತದೆ ಎಂದರು.

ಕೋವಿಡ್ ಸಂದರ್ಭದಲ್ಲಿ ಇಡೀ ರಾಜ್ಯದಲ್ಲೇ ಮೊಟ್ಟ ಮೊದಲು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಮುಂದೆ ಬಂದುದೇ ವಿಜಯಪುರ ಖಾಸಗಿ ಅಸ್ಪತ್ರೆ ಹಾಗೂ ವೈದ್ಯರು. ನಮ್ಮಲ್ಲಿ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎಂಬ ಕಾರಣಕ್ಕೆ ನೆರೆಯ ಕಲಬುರ್ಗಿ, ಬಾಗಲಕೋಟೆ, ಬೆಳಗಸವಿ ಮಾತ್ರವಲ್ಲ ಮಹಾರಾಷ್ಡ್ರ ರಾಜ್ಯದ ರೋಗಿಗಳು ಜಿಲ್ಲೆ ಬರುತ್ತಿದ್ದಾರೆ. ಹಾಗಂತ ಜಿಲ್ಲೆಯ ಯಾವುದೇ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿ ಮಾಡಿದ ದರಕ್ಕಿಂತ ರೋಗಿಗಳಿಂದ ಹೆಚ್ಚಿಗೆ ಹಣ ವಸೂಲಿ ಮಾಡಿದ ದಾಖಲೆ ಇಲ್ಲ ಎಂದರು.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಕೋವಿಡ್ ಭೀಕರ ಸಾಂಕ್ರಾಮಿಕ ರೋಗದ ಭೀತಿಯ ಮಧ್ಯೆ ವೈದ್ಯರು, ಸಿಬ್ಬಂದಿ ಜೀವದ ಹಂಗು ತೊರೆದು ರೋಗದ ವಿರುದ್ಧ ಹೋರಾಟದಲ್ಲಿ ತೊಡಗಿದ್ದಾರೆ. ಹೀಗಿದ್ದರೂ ಆದಾರ ರಹಿತವಾಗಿ ಖಾಸಗಿ ಅಸ್ಪತ್ರೆ ವಿರುದ್ಧ ಮಾತನಾಡಿದ್ದು ಸರಿಯಲ್ಲ ಎಂದರು.

ನಗರದಲ್ಲಿ ಈಚೆಗೆ ಕೋಟಿ ಆಸ್ಪತ್ರೆಯಲ್ಲಿ ರೋಗಿಯೊಬ್ಬ ಚಿಕಿತ್ಸೆ ಫಲಿಸದೇ ಮೃತಪಟ್ಟ. ಸರ್ಕಾರದ ನಿಯಮದಂತೆ 17 ದಿನ ಖಾಸಗಿ ಆಸ್ಪತ್ರೆ 4.13 ಬಿಲ್ ಮಾಡಿದ್ದು, ರೋಗಿ ಕಡೆಯವರು 1.82 ಲಕ್ಷ ರೂ ಮಾತ್ರ ಪಾವತಿಸಿದ್ದಾರೆ. ಆಸ್ಪತ್ರೆಯ ಬಾಕಿ ಹಣ 2.31 ಹಾಗೂ ಔಷಧೀಯ ಖರ್ಚು 25 ಸಾವಿರ ರೂ. ಕೂಡ ಕೊಟ್ಟಿಲ್ಲ. ನಿಯಮದಂತೆ ಕುಡುಂಬ ಸದಸ್ಯರಿಗೆ ತಿಳಿಸಿ, ಪಾಲಿಕೆ ಸಿಬ್ಬಂದಿ ಮೂಲಕ ಸಂಸ್ಕಾರಕ್ಕೆ ಶವ ಸಾಗಿಸಲು ಆಂಬ್ಯುಲೆನ್ಸ್ ಕರೆಸಲಾಗಿತ್ತು. ಆದರೆ ಮೃತನ ಕುಟುಂಬವರು ಶವವನ್ನು ಸಾಗಿಸಲು ಹೊರಗಿನಿಂದ ಕರೆಸಿದ್ದ ಆಂಬ್ಯುಲೆನ್ಸ್ ಗೆ ಹಣ ಕೊಡಲು ನಿರಾಕರಿಸಿ, ಶವವನ್ನು ಮರಳಿ ಆಸ್ಪತ್ರೆಗೆ ಸಾಗಿಸಿ ಹಾಸಿಗೆ ಮೇಲೆ ಹಾಕಿಸಿದ್ದಾರೆ. ಈ ಕುರಿತು ನಮ್ಮ‌ ಖಾಸಗಿ ಆಸ್ಪತ್ರೆಯಲ್ಲಿ ಸಿಸಿ ಕೆಮೆರಾ ಫುಟೇಸಸ್ ಇವೆ. ಇಷ್ಟಿದ್ದರೂ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆ ಎದುರು ಭಿಕ್ಷಾಟನೆ ನಡೆಸಿ, ಕಾನೂನು ಬಾಹೀರವಾಗಿ ದಾಳಿ ಮಾಡಿ, ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಅರ್ಮೇನಿಯಾ, ಅಝರ್ ಬೈಜಾನ್ ಯುದ್ಧ ತೀವ್ರ: 58 ಸೈನಿಕರು, 9 ನಾಗರಿಕರು ಸಾವು

ಇದಲ್ಲದೇ ಸಮಾಜ ಘಾತುಕ ಕೆಲ ಶಕ್ತಿಗಳು, ರಾಜಕೀಯ ದಾಳ ಮಾಡಿಕೊಳ್ಳುವ ದುರಾಸೆಯಿಂದ ಆಸ್ಪತ್ರೆಗಳ ಮೇಲೆ ದಾಳಿ ನಡೆಸುವ ವ್ಯವಸ್ಥಿತ ಜಾಲವೂ ಜಿಲ್ಲೆಯಲ್ಲಿ ಬೇರೂರಿದೆ. ಒಂದೊಮ್ಮೆ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರ ನಿರ್ಲಕ್ಷ, ನಿಗದಿಗಿಂತ ಹೆಚ್ಚಿಗೆ ಹಣ ಸುಲಿಗೆ ಮಾಡಿದ್ದರೆ ಜಿಲ್ಲಾಧಿಕಾರಿ ಕೆಪಿಎಂಪಿ ಕಾಯ್ದೆಯಂತೆ ದೂರು ನೀಡಲಿ, ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಲಿ, ಇಲ್ಲವೇ ಗ್ರಾಹಕರ ನ್ಯಾಯಾಲಯಕ್ಕು ದೂರು ಕೊಂಡೊಯ್ಯಲಿ. ಅದನ್ನು ಬಿಟ್ಡು ಖಾಸಗಿ ಆಸ್ಪತ್ರೆಗಳು, ವೈದ್ಯರ ಮೇಲೆ ದಾಳಿ ನಡೆಸಿದರೆ ಖಾಸಗಿ ಆಸ್ಪತ್ರೆಗಳಿಂದ ಜೀವ ಭಯದ ಸ್ಥಿತಿಯಲ್ಲಿ ಸೇವೆ ನೀಡುವುದು ಕಷ್ಡವಾಗುತ್ತದೆ. ಹೀಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿರುವುದಾಗಿ ತಿಳಿಸಿದರು.

ಖಾಸಗಿ ಆಸ್ಪತ್ರೆಗಳ ಸಂಘದ ಡಾ.ರವೀಂದ್ರ ಮದರಕಿ, ಡಾ.ಪರೀಕ್ಷಿತ ಕೋಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.