ದಾಖಲೆಯ ಎಂಟನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ ಬಸವರಾಜ ಹೊರಟ್ಟಿ
ಪ್ರಥಮ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು, ವಿಜಯೋತ್ಸವ
Team Udayavani, Jun 15, 2022, 12:45 PM IST
ಬೆಳಗಾವಿ: ವಾಯುವ್ಯ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ದಾಖಲೆಯ ಎಂಟನೇ ಬಾರಿಗೆ ಜಯ ದಾಖಲಿಸಿದ್ದಾರೆ.
ಗೆಲುವಿನ ಗುರಿಗೆ ಬೇಕಾಗಿದ್ದ ಮತಗಳನ್ನು ಸುಲಭವಾಗಿ ಪಡೆದ ಹೊರಟ್ಟಿ ಇನ್ನೂ ನಾಲ್ಕು ಸಾವಿರ ಮತಗಳ ಎಣಿಕೆ ಬಾಕಿ ಇರುವಾಗಲೇ ಜಯದ ನಗೆ ಬೀರಿದ್ದಾರೆ.
ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ 76 ರ ಹರೆಯದ ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ ಅವರ ವಿರುದ್ಧ ಜೆಡಿಎಸ್ ನ ಶ್ರೀಶೈಲ ಗಡದಿನ್ನಿ, ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಕಣದಲ್ಲಿದ್ದರು.
ಹೊರಟ್ಟಿ ಅವರು ಪ್ರಥಮ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಸಾಧಿಸಿದ್ದಾರೆ. ಒಟ್ಟು 14,360 ಮತಗಳು ಚಲಾವಣೆ ಆಗಿದ್ದು, 1,223 ಮತಗಳು ತಿರಸ್ಕೃತ ಗೊಂಡಿವೆ. ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ 9,266 ಮತ ಪಡೆದರೆ, ಕಾಂಗ್ರೆಸ್ ನ ಬಸವರಾಜ ಗುರಿಕಾರ 4,597 ಮತಗಳನ್ನು ಪಡೆದಿದ್ದಾರೆ. ಉಳಿದಂತೆ ಜೆಡಿಎಸ್ ನ ಶ್ರೀಶೈಲ ಗಡದಿನ್ನಿ 273, ಪಕ್ಷೇತರರಾದ ಕರಿಬಸಪ್ಪ-60, ಕೃಷ್ಣವಾಣಿ-58, ಪ್ರೊ.ಎಫ್.ವಿ ಕಲ್ಲನಗೌಡರ-27, ಆಮ್ಆದ್ಮಿ ಪಕ್ಷ ಬೆಂಬಲಿತ ಗೋವಿಂದಗೌಡ ವೆಂಕನಗೌಡ 79 ಮತಗಳನ್ನು ಪಡೆದಿದ್ದಾರೆ.
ಅಭಿಮಾನಿಗಳ ವಿಜಯೋತ್ಸವ
ಹೊರಟ್ಟಿ ಗೆಲುವಿನ ನಗೆ ಬೀರಿದ್ದು, ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಕೇಸರಿ ಬಣ್ಣ ಎರಚಿ ಸಂಭ್ರಮಿಸಿದರು.ನಗರದ ದಕ್ಷಿಣ ಮಹಾರಾಷ್ಟ್ರ ಶಿಕ್ಷಣ ಮಂಡಳದ ಜ್ಯೋತಿ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಕ್ಲಬ್ ರಸ್ತೆಯಲ್ಲಿ ಬಸವರಾಜ ಹೊರಟ್ಟಿ ಪುತ್ರ ವಸಂತ ಹೊರಟ್ಟಿ ನೇತೃತ್ವದಲ್ಲಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು.
ಹುಬ್ಬಳ್ಳಿ, ಧಾರವಾಡ, ಗದಗ, ಹಾವೇರಿ ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿಯ ಶಿಕ್ಷಕರು ಬಂದಿದ್ದು, ಹೊರಟ್ಟಿ ಅವರು ಮುನ್ನಡೆ ಸಾಧಿಸುತ್ತಿದ್ದಂತೆ ಬೆಂಬಲಿಗರು ಅವರ ಪೋಟೊ ಹಿಡಿದುಕೊಂಡು ಕುಣಿದಾಡಿದರು. ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಎಲ್ಲೆಡೆಯೂ ಕೇಸರಿ ಬಣ್ಣವೇ ರಾರಾಜಿಸುತ್ತಿದೆ.
ಇದನ್ನೂ ಓದಿ: ಮುಕ್ತವಾಗಿ ದೂರು ದುಮ್ಮಾನ ಹೇಳಿಕೊಳ್ಳಿ: ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಸಂದರ್ಶನ
1980 ರಿಂದ ಹೊರಟ್ಟಿ ಅವರು ನಿರಂತರವಾಗಿ ವಿಧಾನ ಪರಿಷತ್ ಗೆ ಆಯ್ಕೆಯಾಗುವ ಮೂಲಕ ದಾಖಲೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…