ಭಾರತದಲ್ಲಿ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಡಲಾಗಿದೆ? ನ್ಯೂಯಾರ್ಕ್ ಟೈಮ್ಸ್ ವರದಿ ಆಧಾರರಹಿತ
ಭಾರತದಲ್ಲಿ ಕೋವಿಡ್ ನಿಂದ 3ಲಕ್ಷ ಮಂದಿ ಮಾತ್ರ ಅಲ್ಲ ಅದರ ಮೂರು ಪಟ್ಟು ಸಾವನ್ನಪ್ಪಿದ್ದಾರೆ
Team Udayavani, May 27, 2021, 7:24 PM IST
ನವದೆಹಲಿ: ಭಾರತದಲ್ಲಿ ಕೋವಿಡ್ ಎರಡನೇ ಅಲೆಯಲ್ಲಿ ಸಂಭವಿಸಿದ ಸಾವುಗಳ ಸಂಖ್ಯೆ ಅಪಾರ ಪ್ರಮಾಣದ್ದಾಗಿದೆ. ಆದರೆ ಅದನ್ನು ಭಾರತ ಮುಚ್ಚಿಟ್ಟಿದೆ ಎಂಬ ನ್ಯೂಯಾರ್ಕ್ ಟೈಮ್ಸ್ ವರದಿಯನ್ನು ಸಾರಸಗಟಾಗಿ ತಳ್ಳಿಹಾಕಿರುವ ಕೇಂದ್ರ ಸರ್ಕಾರ ಇದೊಂದು ಆಧಾರ ರಹಿತ ಮತ್ತು ಸುಳ್ಳು ಮಾಹಿತಿಯ ವರದಿ ಎಂದು ಹೇಳಿದೆ.
ಇದನ್ನೂ ಓದಿ:ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಬಳಸುವ ಔಷಧಿ ಆಂಫೊಟೆರಿಸಿನ್ ಬಿ ಪ್ರತಿ ಬಾಟಲಿಗೆ 1200 ರೂ..!
ಕೋವಿಡ್ 19 ಸಾವಿನ ವಿಷಯದಲ್ಲಿ ಭಾರತ ಸರ್ಕಾರ ನೀಡಿರುವ ಅಂಕಿಅಂಶಕ್ಕಿಂತ ಹೆಚ್ಚಾಗಿರುವುದಾಗಿ ವರದಿ ಮಾಡಿರುವ ನ್ಯೂಯಾರ್ಕ್ ಟೈಮ್ಸ್ ವರದಿ ಸತ್ಯಕ್ಕೆ ದೂರವಾದದ್ದು ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲುವ್ ಅಗರ್ವಾಲ್ ತಿಳಿಸಿದ್ದಾರೆ.
ಕೋವಿಡ್ ಗೆ ಸಂಬಂಧಿಸಿದಂತೆ ನ್ಯೂಯಾರ್ಕ್ ಟೈಮ್ಸ್ ನ ಸಂಪೂರ್ಣ ವರದಿ ಆಧಾರ ರಹಿತವಾದದ್ದು, ಅವರು ಯಾವ ಆಧಾರದ ಮೇಲೆ ಸಾವಿನ ಲೆಕ್ಕಾಚಾರ ಹಾಕಿದ್ದಾರೆ ಎಂಬುದು ನಮಗೆ ತಿಳಿಯುತ್ತಿಲ್ಲ. ಕೋವಿಡ್ ಪ್ರಕರಣ ಮತ್ತು ಸಾವಿನ ಲೆಕ್ಕದ ಬಗ್ಗೆ ನಮ್ಮಲ್ಲಿಯೂ ಒಂದು ವ್ಯವಸ್ಥೆ ಇದೆ ಎಂಬುದಾಗಿ ಅಗರ್ವಾಲ್ ತಿರುಗೇಟು ನೀಡಿದ್ದಾರೆ.
ನ್ಯೂಯಾರ್ಕ್ ಟೈಮ್ಸ್ ನ ವರದಿಗೆ ಯಾವುದೇ ಪುರಾವೆ ಇಲ್ಲ. ಇದೊಂದು ಅಂದಾಜಿನ ಲೆಕ್ಕಾಚಾರದ ವರದಿಯಾಗಿದೆ ಎಂದು ಭಾರತದ ಕೋವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥ, ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳವಾರ ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿದ್ದ ವರದಿಯಲ್ಲಿ, ಭಾರತದಲ್ಲಿ ಕೋವಿಡ್ ನಿಂದ 3ಲಕ್ಷ ಮಂದಿ ಮಾತ್ರ ಅಲ್ಲ ಅದರ ಮೂರು ಪಟ್ಟು ಸಾವನ್ನಪ್ಪಿದ್ದಾರೆ ಎಂದು ತಿಳಿಸಿತ್ತು. ಈ ವರದಿಯನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮೂಲಕ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದರು. ಅದಕ್ಕೆ ಕೇಂದ್ರ ಸಚಿವ ಹರ್ಷವರ್ಧನ್ ಕಟುವಾದ ಪ್ರತಿಕ್ರಿಯೆ ನೀಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ