ಬಾರೀ ಮಳೆಗೆ ಗುಡ್ಡ ಜರಿದು ಬಿಸಿರೋಡು – ಉಳ್ಳಾಲ ರಸ್ತೆ ಸಂಚಾರ ಬಂದ್!
Team Udayavani, Jul 31, 2020, 3:42 PM IST
ಬಂಟ್ವಾಳ: ರಸ್ತೆಗೆ ಗುಡ್ಡ ಜರಿದು ಬಿದ್ದ ಕಾರಣದಿಂದ ಬಿಸಿರೋಡು ಉಳ್ಳಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿ ಬದಲಿ ರಸ್ತೆಯ ಮೂಲಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ ಘಟನೆ ಶುಕ್ರವಾರ ನಡೆದಿದೆ.
ಮಂಗಳೂರು ತಾಲೂಕಿನ ಕುರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಿತ್ತಕೋಡಿ ಎಂಬಲ್ಲಿ ರಸ್ತೆಯ ಬದಿಯಲ್ಲಿದ್ದ ಗುಡ್ಡವೊಂದು ರಾತ್ರಿಯಿಂದ ಸುರಿಯುತ್ತಿರುವ ಬಾರೀ ಮಳೆಗೆ ಜರಿದು ರಸ್ತೆಗೆ ಬಿದ್ದು ಸಂಚಾರ ಬಂದ್ ಆಗಿದೆ.
ಬಿಸಿರೋಡಿನಿಂದ ಸಜೀಪ ಚೇಳೂರು , ಬೋಳ್ಯಾರು ಮುಡಿಪು ಮೂಲಕ ಉಳ್ಳಾಲ ಮಂಗಳೂರು ಸಂಪರ್ಕ ದ ರಸ್ತೆಯ ಬೋಳ್ಯಾರು ಸಮೀಪದ ಮಿತ್ತಕೋಡಿ ಎಂಬಲ್ಲಿ ರಸ್ತೆಗೆ ಗುಡ್ಡ ಜರಿದು ಬಿದ್ದಿದೆ.
ಬದಲಿ ವ್ಯವಸ್ಥೆ
ಬಿಸಿರೋಡಿನಿಂದ ಮೆಲ್ಕಾರ್ ಬೋಳ್ಯಾರು ಮೂಲಕ ಮಂಗಳೂರು ಸಂಚಾರ ಮಾಡುವ ಬಸ್ ಹಾಗೂ ಇತರೆ ವಾಹನಗಳು ಬೋಳ್ಯಾರ್ ನಿಂದ ಕುರ್ನಾಡು ಮೂಲಕ ಮುಡಿಪುವಿಗೆ ಹೋಗಲು ಬದಲಿ ವ್ಯವಸ್ಥೆ ಮಾಡಲಾಗಿದೆ.
ಸ್ಥಳೀಯ ಗ್ರಾಮ.ಪಂಚಾಯತ್ ಎರಡು ತಿಂಗಳ ಹಿಂದೆಯೇ ಇಲ್ಲಿ ಎಚ್ಚರಿಕೆಯ ಬ್ಯಾನರ್ ಅಳವಡಿಸಿದ್ದರು. ವಾಹನ ಸವಾರರು ಜಾಗರೂಕತೆಯಿಂದ ಚಾಲನೆ ಮಾಡಬೇಕು ಅಪಾಯಕಾರಿ ಗುಡ್ಡ ಇದೆ, ಜರಿದು ಬೀಳುವ ಬಗ್ಗೆ ಗ್ರಾಮ ಪಂಚಾಯತ್ ಈ ಹಿಂದೆಯೇ ವಾಹನ ಸವಾರರಿಗೆ ಎಚ್ಚರಿಕೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ