10 ತಂಡಗಳ ಐಪಿಎಲ್‌ಗೆ ಬಿಸಿಸಿಐ ಒಪ್ಪಿಗೆ; 2022ರ ಋತುವಿನಿಂದ ಜಾರಿ


Team Udayavani, Dec 25, 2020, 6:30 AM IST

10 ತಂಡಗಳ ಐಪಿಎಲ್‌ಗೆ ಬಿಸಿಸಿಐ ಒಪ್ಪಿಗೆ; 2022ರ ಋತುವಿನಿಂದ ಜಾರಿ

ಅಹ್ಮದಾಬಾದ್: ಅತ್ಯಂತ ಮಹತ್ವದ ಬಿಸಿಸಿಐ ಸರ್ವಸದಸ್ಯರ ಸಭೆ ಗುರುವಾರ ಮುಗಿದಿದೆ. ಹಲವು ಮಹತ್ವದ ನಿರ್ಣಯಗಳನ್ನು ತೆಗೆದು ಕೊಳ್ಳಲಾಗಿದೆ.

2022ರ ಐಪಿಎಲ್‌ನಲ್ಲಿ ತಂಡಗಳ ಸಂಖ್ಯೆಯನ್ನು 8ರಿಂದ 10ಕ್ಕೆ ಏರಿಸಲು ಒಪ್ಪಿಗೆ ಸಿಕ್ಕಿದೆ. 2028ರ ಲಾಸ್‌ ಏಂಜಲೀಸ್‌ ಒಲಿಂಪಿಕ್ಸ್‌ಗೆ ಟಿ20 ಕ್ರಿಕೆಟನ್ನು ಸೇರಿಸಲೂ ಅನುಮತಿ ಸಿಕ್ಕಿದೆ. ವಿಶೇಷವೆಂದರೆ, ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಸ್ವಹಿತಾಸಕ್ತಿ ಸಂಘರ್ಷ ವಿವಾದದ ಬಗ್ಗೆ ಸಭೆಯಲ್ಲಿ ಕಿಂಚಿತ್ತೂ ಚರ್ಚೆಯಾಗಲಿಲ್ಲ. ಇದು ಅಚ್ಚರಿ ಹುಟ್ಟಿಸಿದೆ.

ಚೇತನ್‌ ಶರ್ಮ ಅಧ್ಯಕ್ಷ
ತಡರಾತ್ರಿಯ ಬೆಳವಣಿಗೆಯಲ್ಲಿ ಭಾರತದ ಮಾಜಿ ವೇಗಿ ಚೇತನ್‌ ಶರ್ಮ ರಾಷ್ಟ್ರೀಯ ಆಯ್ಕೆ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡರು. ಅವರ ಅಧಿಕ ಟೆಸ್ಟ್‌ ಅನುಭವ ಇಲ್ಲಿ ಗಣನೆಗೆ ಬಂತು. ಇದರೊಂದಿಗೆ ಕರ್ನಾಟಕದ ಸುನೀಲ್‌ ಜೋಶಿ ಕೇವಲ ಸದಸ್ಯರಾಗಿ ಮುಂದುವರಿಯಲ್ಲಿದ್ದಾರೆ. ನೂತನವಾಗಿ ಸೇರ್ಪಡೆಗೊಂಡ ಇಬ್ಬರು ಸದಸ್ಯರೆಂದರೆ ಅಬೆ ಕುರುವಿಲ್ಲ ಮತ್ತು ದೇಬಶಿಷ್‌ ಮೊಹಂತಿ. ಹರ್ವಿಂದರ್‌ ಸಿಂಗ್‌ ಮತ್ತೋರ್ವ ಸದಸ್ಯ.

ನಿರೀಕ್ಷೆಯಂತೆ ರಾಜೀವ್‌ ಶುಕ್ಲಾ ಬಿಸಿಸಿಐ ಉಪಾಧ್ಯಕ್ಷರಾಗಿ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. ಬೃಜೇಶ್‌ ಪಟೇಲ್‌ ಐಪಿಎಲ್‌ ಮುಖ್ಯಸ್ಥರಾಗಿ ಮುಂದುವರಿದಿದ್ದಾರೆ.

10 ಐಪಿಎಲ್‌ ತಂಡಗಳು
ಐಪಿಎಲ್‌ ತಂಡಗಳ ಸಂಖ್ಯೆಯನ್ನು 8 ರಿಂದ 10ಕ್ಕೆ ಏರಿಸುವುದಂತೂ ಮೊದಲೇ  ಖಚಿತವಾಗಿತ್ತು. ಅದಕ್ಕೆ ಅಧಿಕೃತ ಒಪ್ಪಿಗೆ
ಗುರುವಾರ ದೊರೆಯಿತು. ಮುಂದಿನ ವರ್ಷದ ಐಪಿಎಲ್‌ನಲ್ಲಿ ಇದನ್ನು ಸಾಧಿಸುವುದು ಬಹಳ ಕಷ್ಟ ಎನಿಸಿದ ಹಿನ್ನೆಲೆ ಯಲ್ಲಿ 2022ರಿಂದ 10 ತಂಡಗಳನ್ನು ಆಡಿಸಲು ತೀರ್ಮಾನಿಸಲಾಗಿದೆ.

ಗಂಗೂಲಿ-ಶಾ ಮುಂದುವರಿಕೆ
ಐಸಿಸಿ ಮಂಡಳಿ ನಿರ್ದೇಶಕ ರಾಗಿ ಸೌರವ್‌ ಗಂಗೂಲಿ ಮುಂದುವರಿ ಯಲಿದ್ದಾರೆ. ಜಯ್‌ ಶಾ ಪರ್ಯಾಯ ನಿರ್ದೇಶಕರಾಗಲಿದ್ದಾರೆ.

ತೆರಿಗೆ ವಿನಾಯಿತಿ ಸಿಗದಿದ್ದರೆ 900 ಕೋ.ರೂ. ನಷ್ಟ
2021ರ ಟಿ20 ವಿಶ್ವಕಪ್‌, 2023ರ ಏಕದಿನ ವಿಶ್ವಕಪ್‌ಗೆ ಸರಕಾರದಿಂದ ಪೂರ್ಣ ತೆರಿಗೆ ವಿನಾಯಿತಿಯನ್ನು ಪಡೆಯಬೇಕೆನ್ನುವುದು ಐಸಿಸಿ ಸೂಚನೆ. ಒಂದುವೇಳೆ ಪಡೆಯದಿದ್ದರೆ ಬಿಸಿಸಿಐಗೆ ಐಸಿಸಿ ಕೊಡುವ ವಾರ್ಷಿಕವಾಗಿ ಹಣದಲ್ಲಿ 904 ಕೋಟಿ ರೂ. ಖೋತಾ ಆಗಲಿದೆ.

ಇದು ಬರೀ ಮುಂದಿನ ವರ್ಷ ವೊಂದರಲ್ಲೇ ಬಿಸಿಸಿಐಗೆ ಆಗುವ ನಷ್ಟ. ಈ ಹಿನ್ನೆಲೆಯಲ್ಲಿ ಬಿಸಿಸಿಐ, ತೆರಿಗೆ ವಿನಾಯಿತಿ ನೀಡಲು ಸರಕಾರಕ್ಕೆ ಮನವಿ ಮಾಡಲು ನಿರ್ಧರಿಸಿದೆ.

ಒಲಿಂಪಿಕ್ಸ್‌ನಲ್ಲಿ ಟಿ20
2028ರ ಲಾಸ್‌ ಏಂಜಲೀಸ್‌ ಒಲಿಂಪಿಕ್ಸ್‌ನಲ್ಲಿ ಟಿ20 ಕ್ರಿಕೆಟ್‌ ಸೇರಿಸುವ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ ಯೋಚನೆಗೆ ಬಿಸಿಸಿಐ ಬೆಂಬಲ ಸೂಚಿಸಿದೆ. ಇದಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಒಲಿಂಪಿಕ್‌ ಸಂಸ್ಥೆಯಿಂದ ಅಗತ್ಯ ಸ್ಪಷ್ಟೀಕರಣಗಳನ್ನು ಪಡೆದುಕೊಂಡಿದೆ. ಬಿಸಿಸಿಐ ಸ್ವಾಯುತ್ತ ಸಂಸ್ಥೆಯಾಗಿದೆ, ಅದನ್ನು ಕಳೆದುಕೊಳ್ಳಲು ಇಚ್ಛಿಸುವುದಿಲ್ಲ. ಇದಕ್ಕೆಲ್ಲ ಸ್ಪಷ್ಟೀಕರಣ ಪಡೆಯಲಾಯಿತು. ನಾವು ಸರಿಯಾದ ದಾರಿಯಲ್ಲಿದ್ದೇವೆ ಎಂಬ ನಂಬಿಕೆಯಿದೆ ಎಂದು ಬಿಸಿಸಿಐ ಹೇಳಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.