ಪೂರ್ಣಾವಧಿ ಶಾಲಾರಂಭ, ಸುರಕ್ಷತ ಕ್ರಮಗಳ ಪಾಲನೆಯಾಗಲಿ


Team Udayavani, Feb 17, 2021, 7:10 AM IST

ಪೂರ್ಣಾವಧಿ ಶಾಲಾರಂಭ, ಸುರಕ್ಷತ ಕ್ರಮಗಳ ಪಾಲನೆಯಾಗಲಿ

ರಾಜ್ಯದಲ್ಲಿ ಇದೇ ತಿಂಗಳ 22ನೇ ತಾರೀಖೀನಿಂದ 6ನೇ ತರಗತಿ ಯಿಂದಲೇ ಪೂರ್ಣಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸುವುದಾಗಿ ಸರಕಾರ ಘೋಷಿಸಿದೆ. ಜತೆಗೆ ಬೆಂಗಳೂರು ನಗರ ಮತ್ತು ಕೇರಳದ ಗಡಿ ಭಾಗದಲ್ಲಿ 8ನೇ ತರಗತಿಯ ಮೇಲಿನ ತರಗತಿಗಳನ್ನು ಆರಂಭಿಸುವು ದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಕೇರಳವೀಗ ಮಹಾರಾಷ್ಟ್ರದ ಅನಂತರ ಅತೀ ಹೆಚ್ಚು ಕೋವಿಡ್‌ ಸಕ್ರೀಯ ಪ್ರಕರಣಗಳಿರುವ ರಾಜ್ಯವಾಗಿರುವುದರಿಂದ ಸಹಜವಾಗಿಯೇ ಆ ರಾಜ್ಯದಿಂದ ಬರುವ ಪ್ರತಿಯೊಬ್ಬ ವಿದ್ಯಾರ್ಥಿ, ಶಿಕ್ಷಕರರು ಕೋವಿಡ್‌ ಪರೀಕ್ಷೆಗೆ ಒಳಪಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಕೋವಿಡ್‌ ಸಾಂಕ್ರಾಮಿಕ ಆರಂಭವಾದ ಅನಂತರದಿಂದ ಅತೀ ಹೆಚ್ಚು ಬಾಧೆಗೊಳಗಾದ ವಲಯಗಳಲ್ಲಿ ಶಿಕ್ಷಣ ಕ್ಷೇತ್ರವೂ ಒಂದು. ಹಠಾತ್ತನೆ ಶಾಲೆಗಳೆಲ್ಲ ಬಂದ್‌ ಆಗಿದ್ದು, ಅನಂತರದ ದಿನಗಳಲ್ಲಿ ಡಿಜಿಟಲ್‌ ಪಾಠವೆಂಬ ಹೊಸ ಶಿಕ್ಷಣ ಪದ್ಧತಿಗೆ ಹೆಚ್ಚು ಒತ್ತು ಸಿಕ್ಕದ್ದನ್ನೆಲ್ಲ ನೋಡಿದ್ದೇವೆ. ಆದರೂ ಆನ್‌ಲೈನ್‌ನಲ್ಲಿ ಶಿಕ್ಷಣ ಪಡೆಯುವಂಥ ಆರ್ಥಿಕ, ಸಾಮಾಜಿಕ ಸ್ಥಿತಿಯಲ್ಲಿ ಇರದ ಅಗಣಿತ ಕುಟುಂಬಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರ ವಿದ್ಯಾಗಮದಂಥ ವಿನೂತನ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತಂದಿತು. ಅಲ್ಲದೇ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನೂ ಯಶಸ್ವಿಯಾಗಿ ನಡೆಸಿತು. ಪರೀಕ್ಷೆಗಳು ಸುರಕ್ಷಿತವಾಗಿ ನಡೆದವಾದರೂ, ಕೋವಿಡ್‌ ಪ್ರಸರಣದ ವೇಗ ರಾಜ್ಯದಲ್ಲಿ ಆ ಸಮಯದಲ್ಲಿ ಬಹಳ ಇದ್ದದ್ದರಿಂದ ವಿದ್ಯಾಗಮದಲ್ಲಿ ಪಾಲ್ಗೊಂಡ ಅನೇಕ ಶಿಕ್ಷಕರು ಈ ಸೋಂಕಿಗೆ ತುತ್ತಾಗಬೇಕಾಯಿತು.

ಈ ಸಂಗತಿ ನಿಸ್ಸಂಶಯವಾಗಿಯೂ ಕೋವಿಡ್‌ ಕುರಿತ ಸುರಕ್ಷತ ಮಾರ್ಗಗಳ ಬಗ್ಗೆ ಮತ್ತಷ್ಟು ಜಾಗೃತಿಯಂತೂ ಮೂಡಿಸಿದೆ. ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಕಾರಣಕ್ಕೋ ಏನೋ ಕೆಲವು ಸಮಯದಿಂದ ರೋಗಭೀತಿಯೇ ಜನರಲ್ಲಿ ದೂರ ವಾಗಿರುವುದು ಸ್ಪಷ್ಟವಾಗುತ್ತಿದೆ. ಕೊರೊನಾ ಅಪಾಯ ಇನ್ನೂ ದೂರ ವಾಗಿಲ್ಲ ಎನ್ನುವುದಕ್ಕೆ ಬೆಂಗಳೂರಿನ ಅಪಾರ್ಟ್‌ಮೆಂಟ್‌ ಒಂದರಲ್ಲಿ 100ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿರುವುದು ಒಂದು ಉದಾ ಹರಣೆಯಷ್ಟೆ. ಈ ಸೋಂಕಿತರೆಲ್ಲ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು ಎನ್ನುವುದು ಪತ್ತೆ ಯಾಗಿದೆ.

ಸಾಮಾಜಿಕ ಅಂತರ ಪಾಲನೆಯನ್ನು ಮರೆತರೆ ರೋಗ ಎಷ್ಟು ವೇಗವಾಗಿ ಹರಡಬಹುದು ಎನ್ನುವುದಕ್ಕೆ ಈ ಘಟನೆ ಸಾಕ್ಷಿ.
ಈಗ ಪೂರ್ಣಾವಧಿ ಶಾಲೆಗಳು ಆರಂಭವಾಗುತ್ತಿರುವುದರಿಂದ, ಹಿಂದೆಂದಿಗಿಂತಲೂ ಹೆಚ್ಚಿನ ಜಾಗೃತಿ ವಹಿಸಬೇಕಾದ ಅಗತ್ಯ ಸರಕಾರ, ಶಾಲಾಡಳಿತಗಳು ಹಾಗೂ ವಿದ್ಯಾರ್ಥಿಗಳ ಮೇಲೆ ಇದೆ. ಶಾಲಾ ಬಸ್‌ಗಳನ್ನು ನಿರಂತರವಾಗಿ ಸ್ವತ್ಛಗೊಳಿಸುವುದು, ತರಗತಿಯಲ್ಲಿ ವಿದ್ಯಾರ್ಥಿ ಗಳ ನಡುವೆ ಸಾಮಾಜಿಕ ಅಂತರ ಪಾಲನೆಯನ್ನು ಖಾತ್ರಿಗೊಳಿಸುವುದು, ಮಾಸ್ಕ್ ಧರಿಸುವಿಕೆಯ ಕಡ್ಡಾಯ ಪಾಲನೆಯಾಗುವಂತೆ ನೋಡಿ ಕೊಳ್ಳುವುದನ್ನು ಶಾಲೆಗಳು ಮರೆಯಬಾರದು. ಇನ್ನು ವಿದ್ಯಾರ್ಥಿಗಳೂ ಸಹ ಅಸಡ್ಡೆ ಮೆರೆಯದೇ ನಿಯಮಿತವಾಗಿ ಕೈತೊಳೆಯುವುದು, ಮಾಸ್ಕ್ ಧರಿಸುವುದನ್ನು ಪಾಲಿಸಬೇಕು. ಕೋವಿಡ್‌ ಸಾಂಕ್ರಾಮಿಕದ ಹಾವಳಿ ಪೂರ್ಣವಾಗಿ ನಿಲ್ಲುವವರೆಗೂ ಸುರಕ್ಷ ಕ್ರಮಗಳ ಪಾಲನೆಗೆ ಎಲ್ಲರೂ ಆದ್ಯತೆ ನೀಡುವಂತಾಗಬೇಕು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.