ತುಮಕೂರಿನಲ್ಲಿ ಸೆರೆ ಸಿಕ್ಕ ಕರಡಿ ಬನ್ನೇರುಘಟ್ಟದಲ್ಲಿ ಪರಾರಿ!
ಬೋನನ್ನು ಕೆಳಗಿಳಿಸುತ್ತಿದ್ದಂತೆ ಸಿಬಂದಿ ಮೇಲೆ ದಾಳಿ ನಡೆಸಿ ಪರಾರಿ
Team Udayavani, Mar 28, 2021, 11:20 PM IST
ಸಾಂದರ್ಭಿಕ ಚಿತ್ರ
ತುಮಕೂರು/ಆನೇಕಲ್: ತುಮಕೂರಿನಲ್ಲಿ ಬೋನಿಗೆ ಬಿದ್ದ ಕರಡಿಯೊಂದು ಬನ್ನೇರು ಘಟ್ಟ ರಾಷ್ಟ್ರೀಯ ಉದ್ಯಾನದ ಬಳಿ ಪರಾರಿಯಾಯಿತು!
ತುಮಕೂರು ಸಿದ್ಧಗಂಗಾ ಮಠದ ಬಳಿ ಕರಡಿ ಸಂಚಾರದ ಕುರಿತು ಅರಣ್ಯಾಧಿಕಾರಿಗಳಿಗೆ ಎರಡು ತಿಂಗಳ ಹಿಂದೆಯೇ ಮಾಹಿತಿ ದೊರಕಿತು ಹಾಗೂ ವೀಡಿಯೋಗಳು ವೈರಲ್ ಆಗಿ ಆತಂಕ ಮೂಡಿಸಿತ್ತು. ಹೀಗಾಗಿ ಕರಡಿ ಸೆರೆ ಹಿಡಿಯಲು ಬೋನು ಇಡಲಾಗಿತ್ತು. ಶನಿವಾರ ರಾತ್ರಿ ಬೋನಿಗೆ ಬಿದ್ದ ಕರಡಿಯನ್ನು ರವಿವಾರ ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ಬನ್ನೇರುಘಟ್ಟ ಉದ್ಯಾನಕ್ಕೆ ಕರೆದೊಯ್ದಿದ್ದರು.
ಕರಡಿಯು ಬೋನಿನ ತಳ ಭಾಗದ ಕಬ್ಬಿಣದ ಶೀಟ್ ಅನ್ನು ಮುರಿದಿದ್ದು, ಅದರ ಮೂಲಕ ಹೊರ ಬಂದಿದ್ದು, ಎದುರಿಗಿದ್ದ ಬನ್ನೇರುಘಟ್ಟ ಜೈವಿಕ ಉದ್ಯಾನದ ವೈದ್ಯರ ವಾಹನದ ಚಾಲಕ ಜಯಶಂಕರ್(54) ಮೇಲೆ ದಾಳಿ ನಡೆಸಿ ಪರಾರಿಯಾಗಿದೆ.
ಕರಡಿಗಾಗಿ ಹುಡುಕಾಟ
ಕರಡಿ ಉದ್ಯಾನ ಸಮೀಪದ ಹುಚ್ಚನ ಕೆರೆ ಸಮೀಪ ಅಡಗಿರುವ ಸಾಧ್ಯತೆ ಇದ್ದು, ಎರಡು ತಂಡಗಳ ಮೂಲಕ ಕೂಂಬಿಂಗ್ ಮಾಡಲಾಗುತ್ತಿದೆ. ಜನ ಓಡಾಡುವ ಜಾಗದಲ್ಲಿ ಭದ್ರತೆ ಸಲುವಾಗಿ ಹೆಚ್ಚಿನ ಸಿಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ :ಕಂಬಳದಲ್ಲಿ ಮತ್ತೊಂದು ದಾಖಲೆ : 8.78 ಸೆಕೆಂಡ್ ನಲ್ಲಿ ಓಡಿ ದಾಖಲೆ ಬರೆದ ಶ್ರೀನಿವಾಸ ಗೌಡ
ಬೋನಿನ ಕೆಳಭಾಗದ ಶೀಟ್ ಕಿತ್ತಿತ್ತು
ತುಮಕೂರಿನಿಂದ ಬನ್ನೇರುಘಟ್ಟಕ್ಕೆ ತರುವ ಮಾರ್ಗ ಮಧ್ಯದಲ್ಲೇ ಬೋನಿನ ಕೆಳಭಾಗದಲ್ಲಿ ಇದ್ದ ಕಬ್ಬಿಣದ ಶೀಟನ್ನು ಕೀಳಲು ಪ್ರಯತ್ನಿಸಿ ಸಡಿಲ ಮಾಡಿತ್ತು. ವಾಹನದಿಂದ ಬೋನನ್ನು ಕೆಳಗಿಳಿಸುವ ಸಂದರ್ಭದಲ್ಲಿ ಕರಡಿ ಜಿಗಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…