ವಿಧಾನ ಮಂಡಲ ಅಧಿವೇಶನ ಆರಂಭ: ಸರಕಾರದ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಸಿದ್ದತೆ
Team Udayavani, Feb 14, 2022, 10:54 AM IST
ಬೆಂಗಳೂರು :ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಇದು ಮೊದಲ ಅಧಿವೇಶನವಾಗಿದ್ದು, ಬೆಳಗ್ಗೆ ೧೧ ಗಂಟೆಗೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಗೆಹ್ಲೋಟ್ ಅವರು ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿ ಆರು ತಿಂಗಳು ಕಳೆದಿದೆ. ಇದೇ ಮೊದಲ ಬಾರಿಗೆ ಅವರು ರಾಜ್ಯದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಒಟ್ಟು ಹತ್ತು ದಿನಗಳ ಕಾಲಜಂಟಿ ಅಧಿವೇಶನ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರತಿಪಕ್ಷಗಳು ಸರಕಾರದ ವಿರುದ್ಧ ವಾಗ್ದಾಳಿ ನಡೆಸುವುದಕ್ಕೆ ಸಿದ್ಧತೆ ನಡೆಸಿವೆ.
ಹಿಜಾಬ್ ವಿವಾದ, ಕಾನೂನು- ಸುವ್ಯವಸ್ಥೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದವರ ಮೀಸಲು ವಿವಾದ, ನಲವತ್ತು ಪರ್ ಸೆಂಟ್ ಕಮಿಷನ್ ಸೇರಿದಂತೆ ಹಲವಾರು ವಿಚಾರ ಸಂಬಂಧ ಸರಕಾರದ ವಿರುದ್ಧ ಹೋರಾಟ ನಡೆಸುವುದಕ್ಕೆ ಕಾಂಗ್ರೆಸ್ ಸಿದ್ದತೆ ನಡೆಸಿದೆ.
ಈ ಸಂಬಂಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು ಸರಕಾರದ ವಿರುದ್ಧ ನಡೆಸುವ ಹೋರಾಟದ ರೂಪುರೇಷೆ ನಿರ್ಧಾರವಾಗಲಿದೆ.