ಬೈರೂತ್ ಮಹಾಸ್ಫೋಟ- ಲೆಬನಾನ್ ಜನರಿಗೆ ಆಹಾರ ಕೊರತೆಗೆ ಕಾರಣವಾಗಲಿದೆಯೇ?

ಸ್ಫೋಟ ಸಂಭವಿಸಿದ ಸ್ಥಳದಲ್ಲಿದ್ದ ಗೋಪುರಾಕಾರದ ಕಟ್ಟಡಗಳು ನೆಲಸಮವಾಗಿವೆ. ಇವು ಕೇವಲ ಕಟ್ಟಡಗಳಾಗಿರಲಿಲ್ಲ,

Team Udayavani, Aug 6, 2020, 5:12 PM IST

ಬೈರೂತ್ ಮಹಾಸ್ಫೋಟದಿಂದ ಲೆಬನಾನ್ ಜನರಿಗೆ ಆಹಾರ ಕೊರತೆಗೆ ಕಾರಣವಾಗಲಿದೆಯೇ?

ಬೈರೂತ್‌: ಲೆಬನಾನ್‌ನಲ್ಲಿ  ನಡೆದ ಸ್ಫೋಟಕ್ಕೆ ಇಡೀ ರಾಜಧಾನಿಯೇ ತತ್ತರಿಸಿದೆ. ಇದರ ಭೀಕರತೆ ಎಷ್ಟು ತೀವ್ರವಾಗಿತ್ತು ಎಂದರೆ, 240 ಕಿ.ಮೀ. ದೂರದ ದ್ವೀಪದಲ್ಲೂ ಸ್ಫೋಟದ ಸದ್ದು ಕೇಳಿಸಿದೆ.

ಇಡೀ ಬೈರೂತ್‌ ಪಟ್ಟಣ ಸ್ಫೋಟದಿಂದಾಗಿ ನಲುಗಿ ಹೋಗಿದೆ. ಬಂದರಿನ ಬಳಿಯಿದ್ದ ಕಟ್ಟಡಗಳೆಲ್ಲ ಧ್ವಂಸವಾಗಿವೆ. ಗಾಜಿನ ಚೂರುಗಳ ಬಿರುಗಾಳಿಯೇ ಬೀಸಿದಂತಾಗಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಸ್ಫೋಟಕ್ಕೆ ಸದ್ಯ 100ಕ್ಕೂ ಅಧಿಕ ಜನರು ಬಲಿಯಾಗಿದ್ದರೆ, 4,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳಡಿಯಿಂದ ಶವಗಳನ್ನು ಹೊರತೆಗೆಯುತ್ತಲೇ ಇದ್ದಾರೆ.

ಸ್ಫೋಟ ಸಂಭವಿಸಿದ ಸ್ಥಳದಲ್ಲಿದ್ದ ಗೋಪುರಾಕಾರದ ಕಟ್ಟಡಗಳು ನೆಲಸಮವಾಗಿವೆ. ಇವು ಕೇವಲ ಕಟ್ಟಡಗಳಾಗಿರಲಿಲ್ಲ, ಬದಲಿಗೆ ಗೋಧಿ ಸೇರಿ ವಿವಿಧ ಧಾನ್ಯಗಳ ದಾಸ್ತಾನು ಗೋದಾಮುಗಳಾಗಿದ್ದವು. 1.20 ಲಕ್ಷ ಟನ್‌ ದಾಸ್ತಾನು ಸಾಮರ್ಥ್ಯ ಹೊಂದಿದ್ದವು.

ಆದರೆ, ಸ್ಫೋಟದ ಸಮಯದಲ್ಲಿ ಅಲ್ಲಿ ಹೆಚ್ಚು ದಾಸ್ತಾನಿರಲಿಲ್ಲ ಎಂದು ಹೇಳಲಾಗಿದೆ.

ಸಾಮಾನ್ಯವಾಗಿ 3 ತಿಂಗಳಿಗೆ ಬೇಕಾಗುವಷ್ಟು ಆಹಾರ ಧಾನ್ಯ ಶೇಖರಿಸಿಡಲಾಗುತ್ತಿತ್ತು. ಆದರೆ, ಸದ್ಯ ಲೆಬನಾನ್‌ನಲ್ಲಿ  ಒಂದು ತಿಂಗಳಿಗಿಂತಲೂ ಕಡಿಮೆ ಅವಧಿಗಾಗುವಷ್ಟು ಗೋಧಿ ಹಾಗೂ ಇತರ ಧಾನ್ಯವಿದೆ ಎಂದು ಹಣಕಾಸು ಸಚಿವ ರೆವೋಲ್‌ ನೆಹ್ಮೆ ಹೇಳಿದ್ದಾರೆ. ಇದಲ್ಲದೇ, ಬೈರುತ್‌ ಬಂದರು ಇನ್ನಾರು ತಿಂಗಳು ಯಾವುದೇ ಹಡಗಿನಿಂದ ಆಮದನ್ನು ಸ್ವೀಕರಿಸುವ ಸ್ಥಿತಿಯಲ್ಲಿಲ್ಲ.

ಟ್ರಿಪೋಲಿ ಬಂದರಿನಲ್ಲಿ ಹಡಗು ನಿಲ್ಲಬಹುದಾದರೂ ಅಲ್ಲಿ ಆಹಾರ ಧಾನ್ಯ ಸಂಗ್ರಹಕ್ಕೆ ಗೋದಾಮುಗಳಿಲ್ಲ ಎಂದು ಹೇಳಲಾಗಿದೆ. ಹೀಗಾಗಿ 25 ಸಾವಿರ ಗೋದಿ ಹಿಟ್ಟನ್ನು ತುರ್ತಾಗಿ ಇಲ್ಲಿಂದ ಎರಡು ಕಿ.ಮೀ. ದೂರದಲ್ಲಿರುವ ಗೋದಾಮುಗಳಿಗೆ ಸಾಗಿಸಲಾಗುತ್ತದೆ. ಇದಲ್ಲದೇ, 28 ಸಾವಿರ ಟನ್‌ ಗೋದಿ ಹೊತ್ತ ನಾಲ್ಕು ಹಡಗುಗಳು ಇನ್ನಷ್ಟೇ ಬಂದರು ತಲುಪಬೇಕಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.