ಬೆಳಗಾವಿ: ಬಿರುಗಾಳಿ ಮಳೆಗೆ ಧರೆಗುರುಳಿದ ಮರ, ಇಬ್ಬರು ಗಂಭೀರ, 5೦ಕ್ಕೂ ಹೆಚ್ಚು ವಾಹನಗಳು ಜಖಂ
Team Udayavani, Apr 19, 2022, 6:38 PM IST
ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದ್ದು ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದು, ರಸ್ತೆ ಬದಿ ನಿಲ್ಲಿಸಿದ್ದ ಸುಮಾರು ಐವತ್ತಕ್ಕೂ ಹೆಚ್ಚಿನ ದ್ವಿಚಕ್ರ ವಾಹನಗಳು ಜಖಂಗೊಂಡಿದೆ.
ಮಂಗಳವಾರ ಆರಂಭವಾದ ಬಿರುಗಾಳಿಗೆ ಜಿಲ್ಲಾಸ್ಪತ್ರೆ ಮುಂಭಾಗದ ರಸ್ತೆ ಬದಿಯಲ್ಲಿದ್ದ ಬೃಹತ್ ಮರವೊಂದು ಬಿದ್ದಿದೆ ಪರಿಣಾಮ ರಸ್ತೆ ಬದಿ ನಿಲ್ಲಿಸಿದ್ದ ಸುಮಾರು ಐವತ್ತಕ್ಕೂ ಹೆಚ್ಚಿನ ದ್ವಿಚಕ್ರ ವಾಹನಗಳು ಮರದ ಅಡಿಯಲ್ಲಿ ಸಿಲುಕಿಕೊಂಡಿವೆ, ಅಲ್ಲದೆ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಇಬ್ಬರು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌದಾಯಿಸಿದ್ದು, ಮರ ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.
ಇದನ್ನೂ ಓದಿ : ಭಾವೈಕ್ಯತೆ ವಿರೋಧಿ ಸ್ವಾಮೀಜಿ ಹೆಸರಲ್ಲಿ ಭಾವೈಕ್ಯತೆ ದಿನ: ದಿಂಗಾಲೇಶ್ವರಶ್ರೀ ಆಕ್ಷೇಪ
ಕುಲಗೇರಿಯಲ್ಲೂ ಆಲಿಕಲ್ಲು ಸಹಿತ ಗಾಳಿ ಮಳೆ, ತಪ್ಪಿದ ದುರಂತ :
ಬಾಗಲಕೋಟೆ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕುಳಗೇರಿ ಕ್ರಾಸ್ ನಲ್ಲಿ ಎರಡು ಗಂಟೆಗೂ ಹೆಚ್ಚು ಸುರಿದ ಮಳೆ-ಗಾಳಿಯ ರಭಸಕ್ಕೆ ಕಡಿತಗೊಂಡ ವಿದ್ಯುತ್ ಸಂಪರ್ಕ, ಸಿಡಿಲಿನ ಬಡಿತಕ್ಕೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಬಿರುಗಾಳಿ ಮಳೆಗೆ ಮನೆಯ ಮೇಲಿದ್ದ ತಗಡೊಂದು ಹಾರಿ ಬಂದು ರಸ್ತೆಗೆ ಬಿದ್ದಿದ್ದು ಈ ಹೊತ್ತಿನಲ್ಲೇ ಕಾರು ಹಾದು ಹೋಗಿದೆ ಅದೃಷ್ಟವಶಾತ್ ದುರಂತವೊಂದು ತಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?