ಬಳ್ಳಾರಿ: 16 ಕಾಲೇಜುಗಳಲ್ಲಿ ಪ್ರಥಮ ಪಿಯು ಐಚ್ಛಿಕ ಕನ್ನಡ ಪರೀಕ್ಷೆ ರದ್ದು
Team Udayavani, Apr 1, 2022, 5:44 PM IST
ಬಳ್ಳಾರಿ: ಪ್ರಶ್ನೆ ಪತ್ರಿಕೆಯಲ್ಲಿ ದೋಷ ಕಂಡುಬಂದಿರುವ ಹಿನ್ನೆಲೆಯಲ್ಲಿ ಏ.1 ರಂದು ಶುಕ್ರವಾರ ನಡೆಯಬೇಕಿದ್ದ ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯ ವಿಷಯ ಸಂಖ್ಯೆ 16 ಐಚ್ಛಿಕ ಕನ್ನಡ ಪರೀಕ್ಷೆಯನ್ನು ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ರದ್ದುಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜು ಅವರು ಆದೇಶ ಹೊರಡಿಸಿದ್ದಾರೆ.
ಪ್ರಥಮ ಪಿಯು ಪರೀಕ್ಷೆಗಳು ಏ.1 ರಂದು ಶುಕ್ರವಾರದಿಂದ ರಾಜ್ಯಾದ್ಯಂತ ಆರಂಭವಾಗಿದ್ದು, ಮೊದಲ ದಿನ ಶುಕ್ರವಾರ ಮಧ್ಯಾಹ್ನ ೨ ಗಂಟೆಯಿಂದ ಸಂಜೆ ೫.೧೫ರವರೆಗೆ ಲಾಜಿಕ್ ಮತ್ತು ಐಚ್ಛಿಕ ವಿಷಯ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ, ಐಚ್ಛಿಕ ವಿಷಯ ಪ್ರಶ್ನೆ ಪತ್ರಿಕೆಯ ತಲೆಬರಹ ಪ್ರಥಮ ಪಿಯು ಬದಲಿಗೆ ದ್ವಿತೀಯ ಪಿಯು ಎಂದು ಮುದ್ರಣವಾಗಿರುವುದು ಪರೀಕ್ಷೆಗೆ ರದ್ದುಗೊಳಿಸಲು ಕಾರಣವಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ವಿತರಣೆಗೆ ಮುನ್ನವೇ ಪ್ರಶ್ನೆಪತ್ರಿಕೆಯಲ್ಲಿ ಆಗಿರುವ ಈ ಮುದ್ರಣ ಲೋಪವನ್ನು ಉಪನ್ಯಾಸಕರು, ಮೇಲ್ವಿಚಾರಕರು ಪತ್ತೆ ಹಚ್ಚಿರುವ ಹಿನ್ನೆಲೆಯಲ್ಲಿ ಕೂಡಲೇ ಐಚ್ಛಿಕ ಕನ್ನಡ ಪರೀಕ್ಷೆಯನ್ನು ರದ್ದುಗೊಳಿಸಿ, ಏಪ್ರಿಲ್ 16 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.45 ರವರೆಗೆ ನಡೆಸಲಾಗುವುದು ಎಂದು ಡಿಡಿಪಿಯು ರಾಜು ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯಾದ್ಯಂತ ಎಲ್ಲೆಡೆ ಪ್ರಥಮ ಪಿಯು ಪರೀಕ್ಷೆಗಳು ಸುಸೂತ್ರವಾಗಿ ನಡೆದಿವೆ. ಬಳ್ಳಾರಿ/ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಮಾತ್ರ ಪ್ರಶ್ನೆ ಪತ್ರಿಕೆಯಲ್ಲಿ ಈ ದೋಷ ಕಂಡುಬಂದಿದೆ. ಅವಳಿ ಜಿಲ್ಲೆಗಳ ೧೬೧ ಪಿಯು ಕಾಲೇಜುಗಳ ಪೈಕಿ ಕೇವಲ 16 ಕಾಲೇಜುಗಳಲ್ಲಿ ಮಾತ್ರ ಐಚ್ಚಿಕ ಕನ್ನಡ ವಿಷಯ ಅಧ್ಯಯನಕ್ಕೆ ಅವಕಾಶವಿದೆ.
ಈ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯಲು ಈ ಕಾಲೇಜುಗಳಿಂದ ಒಟ್ಟು 1700 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ತಲೆಬರಹ ಮುದ್ರಣ ಲೋಪವಾಗಿರುವ ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳು ಸಹ ದ್ವಿತೀಯ ಪಿಯುಗೆ ಸಂಬಂಧಿಸಿದ್ದೇ ಇಲ್ಲವೇ ಎಂಬುದನ್ನು ಪರಿಶೀಲಿಸಿಲ್ಲ. ತಲೆಬರಹದಲ್ಲಿ ಲೋಪವಾಗಿದ್ದನ್ನು ನೋಡಿದಾಕ್ಷಣ ಪರೀಕ್ಷೆಯನ್ನೇ ರದ್ದುಗೊಳಿಸಿ, ಮುಂದೂಡಲಾಗಿದ್ದು, ಏ.16 ರಂದು ಬೆಳಗ್ಗೆ9.30 ರಿಂದ ಮಧ್ಯಾಹ್ನ 12.45 ರವರೆಗೆ ನಡೆಸಲಾಗುವುದು ಎಂದು ಡಿಡಿಪಿಯು ರಾಜು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ