ಬೆಳ್ತಂಗಡಿ: ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
Team Udayavani, Dec 8, 2020, 5:33 PM IST
ಬೆಳ್ತಂಗಡಿ : ಸೋಮಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿ ನಿಗೂಢವಾಗಿ ನಾಪತ್ತೆಯಾಗಿದ್ದ ಉಜಿರೆ ಶಿವಾಜಿ ನಗರದ ರೆಂಜಳ ನಿವಾಸಿ ರಮೇಶ್ (48) ಎಂಬವರ ಮೃತದೇಹವು ಮಂಗಳವಾರ ಪತ್ತೆಯಾಗಿದೆ.
ಸೋಮವಾರ ಸಂಜೆ 5 ಗಂಟೆ ಬಳಿಕ ರಮೇಶ್ ನಾಪತ್ತೆಯಾಗಿದ್ದು ಮನೆಮಂದಿ ಅವರ ಮೊಬೈಲ್ ಗೆ ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ ಮಂಗಳವಾರ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಕರೆ ಮಾಡಿದ ಸಂದರ್ಭ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಎಂದು ಸಹೋದರ ಹೇಳಿದ್ದಾರೆ, ಇದರ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಬೆಳ್ತಂಗಡಿ ಸೋಮಾವತಿ ನದಿಯ ಜಾಕ್ ವೆಲ್ ಸಮೀಪ ದಡದಲ್ಲಿ ಇಂದು ಸಂಜೆ ಅವರ ಉಡುಗೆ ಮತ್ತು ಮೀನು ಹಿಡಿಯುವ ಬಲೆ, ಮೊಬೈಲ್ ಪತ್ತೆಯಾಗಿದೆ.
ಕೂಡಲೇ ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಭೇಟಿ ನೀಡಿ ನದಿಯಲ್ಲಿ ಶೋಧಕಾರ್ಯ ಮುಂದುವರೆಸಿದ್ದಾರೆ. ಈ ವೇಳೆ ಸೋಮಾವತಿ ನದಿಯಲ್ಲಿ ರಮೇಶ್ ಅವರ ಮೃತದೇಹ ಪತ್ತೆಯಾಗಿದೆ.
ಇದನ್ನೂ ಓದಿ:ಪಂಜಾಬ್ ನಲ್ಲಿ ಮತ್ತೆ ಉಗ್ರ ಚಟುವಟಿಕೆಗೆ ಸಂಚು: ಐಎಸ್ ಐಗೆ ಭಿಂದ್ರನ್ ವಾಲೆ ಸೋದರಳಿಯನ ಸಾಥ್!
ಮೀನು ಹಿಡಿಯಲು ಇಬ್ಬರು ಹೋಗಿರುವ ಶಂಕೆ :
ರಮೇಶ್ ನಾಪತ್ತೆಯಾದ ಕುರಿತು ಹುಡುಕಾಟ ಕುಟುಂಬಸ್ಥರು, ಸ್ಥಳೀಯರು, ಪೊಲೀಸ್ ಅಧಿಕಾರಿಗಳಿಗೆ ರಮೇಶ್ ಜೊತೆ ಇನ್ನೊಬ್ಬ ವ್ಯಕ್ತಿ ಇರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಆದರೆ ಆ ವ್ಯಕ್ತಿ ಯಾರು, ಘಟನೆ ಹೇಗಾಯಿತು ಎಂಬುದು ಪೋಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ