ಬೆಳ್ತಂಗಡಿಯಲ್ಲಿ ಐದು ಗ್ರೆನೇಡ್ಗಳು ಪತ್ತೆ: ನಿವೃತ್ತ ಸೇನಾಧಿಕಾರಿಯಿಂದ ದೂರು
Team Udayavani, Nov 7, 2021, 12:03 PM IST
ಬೆಳ್ತಂಗಡಿ: ತಾಲೂಕಿನ ಇಳಂತಿಲದಲ್ಲಿ ಬೇಲಿಯ ಬಳಿ ಶನಿವಾರ ಸಂಜೆ ಐದು ಗ್ರೆನೇಡ್ಗಳು ಪತ್ತೆಯಾಗಿದ್ದು,ಭೂಸೇನಾ ರೆಜಿಮೆಂಟಿನಲ್ಲಿ ಎಸ್ ಸಿಒ ಜಯಕುಮಾರ್ ಪೂಜಾರಿ ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಸಂಜೆ ಸುಮಾರು 6 ಗಂಟೆಯ ವೇಳೆಗೆ ಜಯಕುಮಾರ್ ಅವರು ಉಪ್ಪಿನಂಗಡಿಯಿಂದ ಮನೆಯ ಕಡೆಗೆ ನಡೆದುಕೊಂಡು ಬರುವಾಗ ಮನೆಯ ದಾರಿಯ ಇಳಿಜಾರಿನ ತಂತಿ ಬೇಲಿಯ ಎಡ ಭಾಗದಲ್ಲಿ ಹರಡಿದ ಹಾಗೆ ಗ್ರೆನೇಡ್ ರೀತಿಯ ಐದು ವಸ್ತುಗಳು ಕಂಡು ಬಂದಿದ್ದು ಅದರಲ್ಲಿ ಒಂದು ಗ್ರೈನೇಡ್ ಹಳದಿ ಬಣ್ಣದ ಪ್ಲಾಸ್ಟಿಕ್ ಕವರಿನ ಒಳಗಡೆ ಇದ್ದಿತ್ತು. ಉಳಿದ ನಾಲ್ಕು ಗ್ರೇನೇಡ್ ಗಳು ಅಲ್ಲಿಯೇ ಹರಡಿಕೊಂಡಿರುವ ಹಾಗೆ ಬಿದ್ದುಕೊಂಡಿದ್ದವು,
ಭೂಸೇನಾ ರೆಜಿಮೆಂಟಿನಲ್ಲಿ ಎಸ್ ಸಿ ಒ ಆಗಿ ನಿವೃತ್ತಿ ಹೊಂದಿರುವುದರಿಂದ ಈ ವಸ್ತುಗಳು ಗ್ರೈನೇಡ್ ಎಂಬುದಾಗಿ ಜಯಕುಮಾರ್ ಪೂಜಾರಿ ಅವರಿಗೆ ತಿಳಿದುಬಂದು, ಗ್ರೇನೈಡ್ ಗಳನ್ನು ಕಾಡು ಪ್ರಾಣಿಗಳು ಅಥವಾ ಇತರ ಪ್ರಾಣಿಗಳು ಬೇರೆಡೆಗೆ ಕಚ್ಚಿಕೊಂಡು ಹೋಗಿ ಸಾರ್ವಜನಿಕರಿಗೆ ಅಪಾಯವಾಗಬಹುದೆಂಬುದನ್ನು ಅರಿತು ಮನೆಯ ಅಂಗಳದ ಮೂಲೆಯಲ್ಲಿಟ್ಟು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅಪರಿಚಿತ ದುಷ್ಕರ್ಮಿಗಳು ದಾರಿಯಲ್ಲಿ ಹಾಕಿದ್ದು, ಕೃತ್ಯ ಮಾಡಿದವರ ವಿರುದ್ದ ಸೂಕ್ತ ಕಾನುನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
‘ಗ್ರೆನೇಡ್ ಗಳು 40 ವರ್ಷಗಳ ಹಿಂದಿನವು. ಇಲ್ಲಿಗೆ ಹೇಗೆ ಬಂದವು ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ಇವು ಸೈನ್ಯದಲ್ಲಿ ಬಳಕೆ ಯಾಗುವಂತಹುದು’ ಎಂದು ಎಸ್ ಪಿ ಸೋನಾವಣೆ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ