ಗುದನಾಳದಲ್ಲಿಟ್ಟು ಕಳ್ಳಸಾಗಾಣಿಕೆ : ಅರ್ಧ ಕೆಜಿ ಚಿನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ
ದುಬೈನಿಂದ ಬಂದಿಳಿದ ಪ್ರಯಾಣಿಕನ ಬಳಿಯೂ ಅಕ್ರಮ ಚಿನ್ನ ಪತ್ತೆ
Team Udayavani, Dec 31, 2022, 3:22 PM IST
ಬೆಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಲ್ಡೀವ್ಸ್ ನಿಂದ ಬಂದಿದ್ದ ಪ್ರಯಾಣಿಕನೊಬ್ಬ ಶನಿವಾರ (ಡಿ 30) ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದು, ಆತ ಗುದ ನಾಳದಲ್ಲಿ ಚಿನ್ನವನ್ನು ಅಕ್ರಮವಾಗಿ ಕಳ್ಳ ಸಾಗಾಣಿಕೆ ಮಾಡುತ್ತಿದ್ದುದು ಪತ್ತೆಯಾಗಿದೆ.
ಮಾಲ್ಡೀವ್ಸ್ ನಿಂದ ವಿಮಾನ ದಲ್ಲಿ ಬಂದಿಳಿದ ಪ್ರಯಾಣಿಕನನ್ನ ತೀವ್ರವಾಗಿ ತಪಾಸಣೆ ನಡೆಸಿದ ಅಧಿಕಾರಿಗಳು, ಗುದನಾಳದಲ್ಲಿ 3 ಅಂಡಾಕಾರದ ಪ್ಯಾಕೆಟ್ಗಳಲ್ಲಿ ಘನ ಗಮ್ನೊಂದಿಗೆ ಬೆರೆಸಿದ ಪೇಸ್ಟ್ ರೂಪದಲ್ಲಿ ಪ್ಯಾಕ್ ಮಾಡಿಟ್ಟಿದ್ದ ಸುಮಾರು 532.21 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮಾರುಕಟ್ಟೆ ಮೌಲ್ಯ ಸುಮಾರು 28 ಲಕ್ಷದ 73 ಸಾವಿರದ 934 ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ (ಡಿ.29) ದುಬೈನಿಂದ ಬಂದಿದ್ದ ಪ್ರಯಾಣಿಕನೊಬ್ಬನಿಂದ ಒಳಉಡುಪಿನಲ್ಲಿ ಅಡಗಿಸಿಟ್ಟು ಕಳ್ಳ ಸಾಗಾಟ ಮಾಡುತ್ತಿದ್ದ 210.35 ಗ್ರಾಂ ಚಿನ್ನವನ್ನು ವಶ ಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನದ ಮಾರುಕಟ್ಟೆ ಮೌಲ್ಯ ಸುಮಾರು 11 ಲಕ್ಷದ 18 ಸಾವಿರದ 103 ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ