ಬೆಂಗಳೂರಿನಲ್ಲಿ ನಟೋರಿಯಸ್ ರೌಡಿಯಿಂದ ಪೋಲೀಸರ ಮೇಲೆ ದಾಳಿ:ಕಾಲಿಗೆ ಗುಂಡು
Team Udayavani, Nov 17, 2021, 10:59 AM IST
Bengaluru,Notorious rowdy, attack,cop,
ಬೆಂಗಳೂರು : ನಟೋರಿಯಸ್ ರೌಡಿಯೊಬ್ಬ ಪೋಲೀಸರ ಮೇಲೆಯೇ ಮಚ್ಚಿನಿಂದ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ ಘಟನೆ ಮಂಗಳವಾರ ತಡ ರಾತ್ರಿ ನಡೆದಿದೆ.
20ಕ್ಕೂ ಹೆಚ್ಚು ಪ್ರಕರಣಗಳನ್ನು ಹೊತ್ತಿರುವ ಕರ್ಚೀಫ್ ಪಳನಿ ಎಂಬ ರೌಡಿ ವಿರುದ್ಧ ರಾತ್ರಿ 11 ಗಂಟೆಯ ವೇಳೆಗೆ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸ್ಮಶಾನದ ಬಳಿ ಪೊಲೀಸರು ಕಾರ್ಯಾಚರಣೆಗೆ ಇಳಿದಾಗ ಆತನನ್ನು ಶರಣಾಗಲು ಸೂಚಿಸಿ ಸಿಸಿಬಿ ಎಸಿಪಿ ಪರಮೇಶ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ಪೊಲೀಸರ ಮೇಲೆ ತಿರುಗಿ ಬಿದ್ದ ಪಳನಿ ಇನ್ಸ್ಪೆಕ್ಟರ್ ಹರೀಶ್ ಕುಮಾರ್ ಅವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದು, ಅವರ ಎಡ ಮೊಣಕೈಗೆ ಗಾಯಗಳಾಗಿವೆ. ತಕ್ಷಣ ಎಸಿಪಿ ಪಳನಿಯ ಮೇಲೆ ಗುಂಡು ಹಾರಿಸಿದ್ದು, ಆತನ ಎಡಗಾಲಿಗೆ ಗುಂಡು ತಗುಲಿ ಕೆಳಗೆ ಬಿದ್ದಿದ್ದಾನೆ.
ಪಳನಿಯನ್ನು ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಲಾದ ನಂತರ ಈತ ತಲೆಮರೆಸಿಕೊಂಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ