Karnataka: ಗ್ಯಾರಂಟಿಗೆ ಅರ್ಜಿ ಸಲ್ಲಿಸುವ ವೇಳೆ ಸೈಬರ್ ಕಳ್ಳರ ಬಗ್ಗೆ ಇರಲಿ ಎಚ್ಚರ !
Team Udayavani, Jul 3, 2023, 7:13 AM IST
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನೇ ಟಾರ್ಗೆಟ್ ಮಾಡಲು ಹೊರಟಿರುವ ಸೈಬರ್ ವಂಚಕರು ವಿವಿಧ ನಕಲಿ ಆ್ಯಪ್ ಮೂಲಕ ಸಾರ್ವಜನಿಕರಿಂದ ಹಣ ಪೀಕಲು ಸಂಚು ರೂಪಿಸಿರುವ ಸಂಗತಿ ಬಯಲಾಗಿದೆ.
ಸರ್ಕಾರದ ಯೋಜನೆಗಳಿಗೆ ಸಾರ್ವಜನಿಕರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುತ್ತಿರುವುದನ್ನು ಮನಗಂಡಿರುವ ಕೆಲ ಸೈಬರ್ ಕಳ್ಳರು ನಕಲಿ ಆ್ಯಪ್ಗ್ಳನ್ನು ಸೃಷ್ಟಿಸಿ ಸಾರ್ವಜನಿಕರ ಮಾಹಿತಿ ಕಲೆ ಹಾಕಿ ವಂಚಿಸಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಆದರೆ, ಇದುವರೆಗೆ ಯಾವುದೇ ದೂರುಗಳು ದಾಖಲಾಗಿಲ್ಲ. ಇಂತಹ ವಂಚನೆ ಎಸಗುವವರ ಬಗ್ಗೆ ನಿಗಾ ಇಡಲಾಗಿದೆ. ಕರ್ನಾಟಕದಲ್ಲೇ ಕುಳಿತುಕೊಂಡು ನಕಲಿ ಆ್ಯಪ್ ಸೃಷ್ಟಿಸಿ ವಂಚಿಸಲು ಯತ್ನಿಸಿದ್ದಾರೋ ಅಥವಾ ಉತ್ತರ ಭಾರತದಲ್ಲಿದ್ದುಕೊಂಡು ಕೃತ್ಯ ಎಸಗಲು ಸಂಚು ರೂಪಿಸಿದ್ದಾರೋ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯಕ್ತ ಎಸ್.ಡಿ. ಶರಣಪ್ಪ ತಿಳಿಸಿದ್ದಾರೆ.
ಸೈಬರ್ ಕಳ್ಳರ ಗಾಳಕ್ಕೆ ಬೀಳದಿರಿ ಜೋಕೆ: ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗಲು ನೋಂದಣಿ ಮಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಕೆಲವು ಸಾಮಾಜಿಕ ಜಾಲಾತಾಣಗಳಲ್ಲಿ ಸೇವಾಸಿಂಧು ಪೋರ್ಟಲ್ ಹೋಲುವಂತೆ ನಕಲಿ ಲಿಂಕ್ ಸೃಷ್ಟಿಸಲಾಗಿದೆ. ಇದನ್ನು ಕ್ಲಿಕ್ ಮಾಡಿ ನೋಂದಣಿ ಮಾಡುವಂತೆ ಸೂಚಿಸಿ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತಿಳಿದು ಬಂದಿದೆ.
ಗೃಹಜ್ಯೋತಿಗೆ ನೋಂದಣಿ ಪ್ರಕ್ರಿಯೆಗಳು ರಾಜ್ಯದಲ್ಲಿ ಭರದಿಂದ ಸಾಗಿವೆ. ಸಾಮಾಜಿಕ ಜಾಲತಾಣವಾದ ಫೇಸ್ಬುಕ್, ಟ್ವಿಟರ್, ಇನ್ಸ್ಟಾಗ್ರಾಂ, ಯೂಟ್ಯೂಬ್ನಲ್ಲಿ ನಕಲಿ ಲಿಂಕ್ಗಳನ್ನು ಹರಿಯಬಿಡಲಾಗುತ್ತಿದೆ. ಸದ್ಯದಲ್ಲೇ ಗೃಹಲಕ್ಷಿ ಯೋಜನೆಗೂ ನೋಂದಣಿ ಪ್ರಕ್ರಿಯೆ ನಡೆಯಲಿವೆ. ಸಾರ್ವಜನಿಕರು ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ತಿಳಿಸಿದ್ದಾರೆ. ನಕಲಿ ಲಿಂಕ್ಗಳನ್ನು ಕ್ಲಿಕ್ ಮಾಡಿದ ಕೂಡಲೇ ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಭಾವಚಿತ್ರವಿರುವ ಸರ್ಕಾರದ ಚಿಹ್ನೆಗಳಿರುವ ಪೇಜ್ಗಳನ್ನೂ ವಂಚಕರು ಸೃಷ್ಟಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ