ಭಟ್ಕಳ: ದನ ತಪ್ಪಿಸಲು ಹೋಗಿ ಸರಣಿ ಅಪಘಾತ; ನಾಲ್ವರಿಗೆ ಗಂಭೀರ ಗಾಯ
Team Udayavani, Nov 20, 2021, 7:43 PM IST
ಭಟ್ಕಳ: ಕುಂದಾಪುರದ ಕಡೆಯಿಂದ ಹೊನ್ನಾವರ ಕಡೆಗೆ ಹೋಗುತ್ತಿದ್ದ ರಿಡ್ಜ್ ಕಾರೊಂದು ರಸ್ತೆಯಲ್ಲಿದ್ದ ದನವೊಂದನ್ನು ತಪ್ಪಿಸಲು ಹೋಗಿ ಕಾರು ಮಗುಚಿ ಬಿದ್ದು ಸಂಪೂರ್ಣ ಜಖಂ ಆಗಿ, ಅದರಲ್ಲಿದ್ದ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಅವಘಡ ಶನಿವಾರ ನಡೆದಿದೆ.
ಕಾರು ಎದುರಿಗೆ ನಿಂತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಬೊಲೆರೋ ಪಿಕ್ಅಪ್ ವಾಹನಕ್ಕೆ ಡಿಕ್ಕಿಯಾಗಿ ಜಖಂ ಗೊಂಡಿದೆ.
ವೇಗವಾಗಿ ಬರುತ್ತಿದ್ದ ರಿಡ್ಜ್ ಕಾರು ರಸ್ತೆಯ ಪಕ್ಕದಲ್ಲಿಯೇ ಮುಗುಚಿ ಬಿದ್ದಿದೆ.
ಗಾಯಗೊಂಡವರನ್ನು ಕುಂದಾಪುರದ ಪ್ರಾತೇಶ ಮೊಗವೀರ (18), ರಾಮಚಂದ್ರ ಶೇಟ್ (17), ಭರತ ಜೋಗಿ (19), ನೂತನ ಮಡಿವಾಳ (18) ಎಂದು ಗುರುತಿಸಲಾಗಿದೆ.
ತಕ್ಷಣ ಅವರನ್ನು ಸ್ಥಳೀಯರು ತಾಲೂಕಾ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆಯನ್ನು ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಟೋ ಹಾಗೂ ಪಿಕ್ಅಪ್ ವಾಹದಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಅವಘಡವಾಗಿಲ್ಲ ಅಟೋ ರಿಕ್ಷಾ ಬೆಳಕೆಯ ಅಣ್ಣಪ್ಪ ನಾಯ್ಕ ಎನ್ನುವರಿಗೆ ಸೇರಿದ್ದೆನ್ನಲಾಗಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’