Bhopal fire: 25 ಕೋಟಿ ರೂ.ನಷ್ಟ- 12,000ಕ್ಕೂ ಅಧಿಕ ಫೈಲ್ಗಳು ಬೂದಿ
5.5 ಕೋಟಿ ರೂ. ಮೌಲ್ಯದ ಹೈಡ್ರಾಲಿಕ್ ಏಣಿಯೂ ನಷ್ಟ
Team Udayavani, Jun 14, 2023, 7:29 AM IST
ಭೋಪಾಲ: ಮಧ್ಯಪ್ರದೇಶ ರಾಜಧಾನಿ ಭೋಪಾಲದಲ್ಲಿರುವ ಸಾತ್ಪುರ ಭವನದಲ್ಲಿ ಸೋಮವಾರ ಸಂಭವಿಸಿದ್ದ ಬೆಂಕಿಯನ್ನು ಮಂಗಳವಾರ ಶಮನಗೊಳಿಸಲಾಗಿದೆ. ಈ ಘಟನೆಯಲ್ಲಿ ಜೀವಹಾನಿಯಾಗದಿದ್ದರೂ, 12,000ಕ್ಕೂ ಅಧಿಕ ಪ್ರಮುಖ ಫೈಲ್ಗಳು, 25 ಕೋಟಿ ರೂ. ಮೌಲ್ಯದ ಉಪಕರಣಗಳು ನಾಶವಾಗಿವೆ.
ಈ ಪೈಕಿ ಬೆಂಕಿ ಶಮನಗೊಳಿಸಲು 5.5 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗಿದ್ದ ಅತ್ಯಾಧುನಿಕ ಹೈಡ್ರಾಲಿಕ್ ಏಣಿಯೂ ನಾಶವಾಗಿದೆ. ಅಗ್ನಿ ದುರಂತ ಉಂಟಾದ ಕಟ್ಟಡದ ಪಕ್ಕವೇ ಅದನ್ನು ಪಾರ್ಕ್ ಮಾಡಲಾಗಿತ್ತು. ಕಳೆದ ಒಂದು ದಶಕದಲ್ಲಿ ಮೂರನೇ ಬಾರಿಗೆ ಇಂಥ ಘಟನೆ ನಡೆದಿದೆ. 2012, 2018ರಲ್ಲೂ ಇದೇ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಘಟನೆಗೆ ಕಾರಣವೇನು?: ಹಲವಾರು ಸರ್ಕಾರಿ ಇಲಾಖೆಗಳಿಗೆ ಆಶ್ರಯ ನೀಡಿರುವ ಸಾತ್ಪುರ ಭವನದಲ್ಲಿ ಬೆಂಕಿ ಅನಾಹುತವಾಗಿರುವುದಕ್ಕೆ ಖಚಿತ ಕಾರಣ ತಿಳಿದುಬಂದಿಲ್ಲ. ಸಂಜೆ 4 ಗಂಟೆಗೆ 3ನೇ ಮಹಡಿಯಲ್ಲಿ ಮೊದಲು ಬೆಂಕಿ ಪತ್ತೆಯಾಗಿದೆ. ನಂತರ ಅದು 4,5,6,ನೇ ಮಹಡಿಗೆ ವಿಸ್ತರಿಸಿಕೊಂಡಿದೆ. ಬಹುಶಃ ಎಸಿ ಸ್ಫೋಟಿಸಿ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ. ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ ಇರುವ ಹಿನ್ನೆಲೆಯಲ್ಲಿ ಈ ಘಟನೆ ಹಿಂದೆ ಪಿತೂರಿ ಇದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ