ಪಿಯುಸಿ ಫಲಿತಾಂಶ; 18ನೇ ಸ್ಥಾನಕ್ಕೆ ಜಿಗಿದ ಬೀದರ್ ! ಕಳಚಿದ ಕೊನೆ ಸ್ಥಾನದ ಅಪಖ್ಯಾತಿ


Team Udayavani, Jul 14, 2020, 6:44 PM IST

ಪಿಯುಸಿ ಫಲಿತಾಂಶ; 18ನೇ ಸ್ಥಾನಕ್ಕೆ ಜಿಗಿದ ಬೀದರ್ ! ಕಳಚಿದ ಕೊನೆ ಸ್ಥಾನದ ಅಪಖ್ಯಾತಿ

ಬೀದರ್ : ಫಲಿತಾಂಶದಲ್ಲಿ ಕಳಪೆ ಸಾಧನೆಯೊಂದಿಗೆ ಕೊನೆ ಸ್ಥಾನದ ಅಪಖ್ಯಾತಿಗೆ ಹೊತ್ತುತ್ತಿದ್ದ ಗಡಿ ನಾಡು ಬೀದರ್ ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅಮೋಘ ಸಾಧನೆ ಮಾಡಿದೆ. ಶೇ. 64.61 ರಷ್ಟು ಫಲಿತಾಂಶ ಪಡೆದಿರುವ ಬೀದರ್ ರಾಜ್ಯದಲ್ಲಿ 30ರಿಂದ 18ನೇ ಸ್ಥಾನಕ್ಕೆ ಜಿಗಿಯುವ ಮೂಲಕ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಹೊಸ ಆಶಾಭಾವ ಮೂಡಿಸಿದೆ.

ಪ್ರತಿ ವರ್ಷ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕೊನೆಯ ಎರಡು ಸ್ಥಾನಕ್ಕೆ ಅಂಟಿಕೊಳ್ಳುತ್ತಿದ್ದ ಬೀದರ್ ನಿರಾಶೆ ಮೂಡಿಸುತ್ತಿತ್ತು. ಆದರೆ, ಈ ಬಾರಿ ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಯ ಪಿಯು ಫಲಿತಾಂಶದ ಸಾಧನೆ ಅಚ್ಚರಿ ಮೂಡಿಸಿದೆ. ಕಳೆದ ವರ್ಷ ಶೇ. 55.75 ರಷ್ಟು ಅಂಕಗಳೊಂದಿಗೆ 30ನೇ ಸ್ಥಾನದಲ್ಲಿದ್ದ ಬೀದರ್ ಶೇ. 8.86ರಷ್ಟು ಹೆಚ್ಚುವರಿ ಅಂಕಗಳೊಂದಿಗೆ ಶೇ. 64.61 ರಷ್ಟು ಫಲಿತಾಂಶ ಬಂದಿದ್ದು, ಜಿಲ್ಲಾವಾರು ಫಲಿತಾಂಶದಲ್ಲಿ 18ನೇ ಸ್ಥಾನಕ್ಕೆ ಏರಿಕೆ ಕಂಡಿದೆ.

ಗ್ರಾಮೀಣ ಮಕ್ಕಳು ಮೇಲುಗೈ:
ಈ ಬಾರಿ ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದ 14285 ವಿದ್ಯಾರ್ಥಿಗಳಲ್ಲಿ 9229 ಮಕ್ಕಳು ಉತ್ತೀರ್ಣರಾಗಿದ್ದಾರೆ. ಪ್ರತಿ ಸಲದಂತೆ ಗ್ರಾಮೀಣ ಪ್ರದೇಶದ ಪರೀಕ್ಷಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ನಗರ ಪ್ರದೇಶದ ಒಟ್ಟು 11,373 ಮಕ್ಕಳು ಹಾಜರಾಗಿದ್ದು, ಅದರಲ್ಲಿ 7101 (ಶೇ. 62.44) ಮಕ್ಕಳು ಪಾಸಾಗಿದ್ದರೆ, ಗ್ರಾಮೀಣ ಪ್ರದೇಶದ 2912 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2128 (ಶೇ. 73.08) ಮಕ್ಕಳು ತೇರ್ಗಡೆಯಾಗಿದ್ದಾರೆ.

ಇನ್ನೂ ವಿಭಾಗವಾರುದಲ್ಲಿ ವಿಜ್ಞಾನ ವಿಭಾಗಕ್ಕೆ ಶೇ. 75.65 ರಷ್ಟು ಫಲಿತಾಂಶ ಬಂದಿದ್ದರೆ, ಕಲಾ ವಿಭಾಗ ಶೇ. 48.24 ಮತ್ತು ವಾಣಿಜ್ಯ ವಿಭಾಗಕ್ಕೆ ಶೇ. 54.81 ರಷ್ಟು ಫಲಿತಾಂಶ ಇದೆ. ಪರೀಕ್ಷೆ ಬರೆ ವಿಜ್ಞಾನ ವಿಭಾಗದ 7951 ಮಕ್ಕಳಲ್ಲಿ 6015 ಜನ ಉತ್ತೀರ್ಣರಾಗಿದ್ದರೆ ಕಲಾ ವಿಭಾಗ 3922ರಲ್ಲಿ 1892 ಪರೀಕ್ಷಾರ್ಥಿ ಹಾಗೂ ವಾಣಿಜ್ಯ ವಿಭಾಗದಲ್ಲಿ 2412 ರಲ್ಲಿ 1322 ಮಕ್ಕಳು ತೇರ್ಗಡೆಯಾಗಿದ್ದಾರೆ.

ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಯೋಜನಾ ಬದ್ಧ ಕಾರ್ಯಕ್ರಮ, ಪರಿಶ್ರಮದ ಫಲವಾಗಿ ಫಲಿತಾಂಶ ಸುಧಾರಣೆ ಕಂಡಿದೆ. ಉಪನ್ಯಾಸಕರಿಗೆ ತಜ್ಞರಿಂದ ವಿಷಯವಾರು ತರಬೇತಿ ಮತ್ತು ವಿದ್ಯಾರ್ಥಿಗಳಿಗೆ ನಿರಂತರ ಕಾರ್ಯಾಗಾರ ನಡೆಸಲಾಗಿತ್ತು. ಜತೆಗೆ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಸಂಘದಿಂದ ಪ್ರಕಟಿಸಿ ಪರೀಕ್ಷಾರ್ಥಿಗಳಿಗೆ ವಿತರಿಸಿದ್ದ ‘ಮಾರ್ಗದರ್ಶಿ’ ಕಿರು ಹೊತ್ತಿಗೆಯಿಂದಲೂ ಸಾಕಷ್ಟು ಪ್ರಯೋಜನವಾಗಿದೆ.

ಜಿಲ್ಲೆಯಲ್ಲಿ ಫಲಿತಾಂಶದ ಏರಿಳಿತ…
ಜಿಲ್ಲೆಯಲ್ಲಿ ಕಳೆದ 10 ವರ್ಷಗಳಲ್ಲಿ ಪಿಯು ಫಲಿತಾಂಶದಲ್ಲಿ ಏರಿಳಿತ ಕಂಡಿದೆ. 2010-11ರಲ್ಲಿ ಶೇ. 45ರಷ್ಟು, 2011-12ರಲ್ಲಿ ಶೇ. 40.32ರಷ್ಟು, 2012- 13ರಲ್ಲಿ ಶೇ. 44.24ರಷ್ಟು, 2013-14ರಲ್ಲಿ ಶೇ. 44.95ರಷ್ಟು, 2015ರಲ್ಲಿ ಶೇ. 54.4, 2016ರಲ್ಲಿ ಶೇ. 52.07, 2017ರಲ್ಲಿ ಶೇ. 42.05, 2018ರಲ್ಲಿ ಶೇ. 52.63 ಮತ್ತು 2019ರಲ್ಲಿ ಶೇ. 55.78ರಷ್ಟು ಅಂಕ ಪಡೆದಿತ್ತು. ಈ ಬಾರಿ ಶೇ. 8.86ರಷ್ಟು ಅಂಕ ಹೆಚ್ಚಿಸಿಕೊಂಡು ಸಾಧನೆ ಮಾಡಿದೆ.

ಪಿಯುಸಿಯಲ್ಲಿ ಬೀದರ್ ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿದ್ದು, ಇದಕ್ಕೆ ಯೋಜನಾ ಬದ್ಧ ಕಾರ್ಯಕ್ರಮ, ತಂಡದ ಪರಿಶ್ರಮದ ಫಲವೇ ಕಾರಣ. ಫಲಿತಾಂಶದಲ್ಲಿ ಸುಧಾರಣೆ ನಿರೀಕ್ಷೆ ಇತ್ತು. ಆದರೆ, ಜಿಲ್ಲಾವಾರು ಪಟ್ಟಿಯಲ್ಲಿ ೧೮ನೇ ಸ್ಥಾನಕ್ಕೆ ಜಿಗಿಯುತ್ತದೆ ಅಂದುಕೊಂಡಿರಲಿಲ್ಲ. ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ಅಭಿನಂದನೆಗಳು.

– ರಮೇಶ ಬೇಜಗಂ, ಡಿಡಿಪಿಯು, ಬೀದರ್

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.