ಬೀದರ್: ನಿವೃತ್ತ ಪಿಎಸ್ಐ ಸೇರಿ ಇಬ್ಬರ ಬಲಿ
ಸಾವಿನ ಸಂಖ್ಯೆ 21ಕ್ಕೇರಿಕೆ; 8 ಹೊಸ ಪಾಸಿಟಿವ್ ಕೇಸ್ ಪತ್ತೆ
Team Udayavani, Jul 1, 2020, 10:41 PM IST
ಬೀದರ್: ಜಿಲ್ಲೆಯಲ್ಲಿ ಕೋವಿಡ್-19 ಮರಣ ಮೃದಂಗ ಮತ್ತೆ ಮುಂದುವರಿದಿದೆ. ಬುಧವಾರ ನಿವೃತ್ತ ಪಿಎಸ್ಐ ಸೇರಿ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ ಈಗ 21ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ದಿನ ಕಳೆದಂತೆ ಆತಂಕ ಹೆಚ್ಚುತ್ತಿದೆ.
ಬೀದರ್ ಓಲ್ಡ್ ಸಿಟಿಯ ನೂರಖಾ ತಾಲೀಮ್ ನಿವಾಸಿಯಾಗಿದ್ದ 63 ವರ್ಷದ ನಿವೃತ್ತ ಪಿಎಸ್ಐ ಸಾವನ್ನಪ್ಪಿದ್ದಾರೆ. ಔರಾದ ತಾಲೂಕಿನ ಠಾಣಾ ಕುಶನೂರ ಪೊಲೀಸ್ ಠಾಣೆಯಿಂದ ಮೂರು ವರ್ಷಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು.
ಜೂ.28ರಂದು ತೀವ್ರ ಉಸಿರಾಟದ ತೊಂದರೆ ಹಿನ್ನೆಲೆ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರ ಪ್ರಾಣ ಬಿಟ್ಟಿದ್ದಾರೆ. ಅವರ ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು.
ತಾಲೂಕಿನ ಯದಲಾಪುರ ಗ್ರಾಮದ 80 ವರ್ಷದ ಮಹಿಳೆ ತೀವ್ರ ಉಸಿರಾಟದ ತೊಂದರೆ, ಶೀತ ಜ್ವರ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಕೋವಿಡ್-19 ಪರೀಕ್ಷೆ ವರದಿಯಲ್ಲೂ ಪಾಸಿಟಿವ್ ಬಂದಿತ್ತು. ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.
ಇನ್ನು ಬುಧವಾರ ಜಿಲ್ಲೆಯಲ್ಲಿ ಒಟ್ಟು 8 ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಬೀದರ ತಾಲೂಕಿನ 3, ಚಿಟಗುಪ್ಪ 2 ಮತ್ತು ಭಾಲ್ಕಿ ತಾಲೂಕಿನ 1 ಕೇಸ್ಗಳು ಸೇರಿವೆ.
ಬೀದರ್ ನಗರದ 32 ವರ್ಷದ ಪುರುಷ, 34 ವರ್ಷದ ಪುರುಷ, ತಾಲೂಕಿನ ಅಮಲಾಪುರದ 31 ವರ್ಷದ ಪುರುಷ, ಚಿಟಗುಪ್ಪ ಪಟ್ಟಣದ 67 ವರ್ಷದ ಪುರುಷ, ತಾಲೂಕಿನ ಮುತ್ತಂಗಿ ಗ್ರಾಮದ 25 ವರ್ಷದ ಮಹಿಳೆ ಹಾಗೂ ಭಾಲ್ಕಿ ತಾಲೂಕಿನ 55 ವರ್ಷದ ಮಹಿಳೆಗೆ ಸೋಂಕು ವಕ್ಕರಿಸಿದೆ.
ಬೀದರ್ ಜಿಲ್ಲೆಯಲ್ಲಿ ಈವರೆಗೆ 615 ಪಾಸಿಟಿವ್ ಪ್ರಕರಣಗಳು ವರದಿ ಆದಂತಾಗಿದೆ. ಇದರಲ್ಲಿ 21 ಜನ ಸಾವನ್ನಪ್ಪಿದ್ದರೆ 500 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇನ್ನೂ 94 ಪ್ರಕರಣಗಳು ಸಕ್ರಿಯವಾಗಿವೆ. ಈವರೆಗೆ 38,345 ಮಂದಿಯ ಗಂಟಲು ದ್ರವ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಈ ಪೈಕಿ 36,025 ಜನರ ವರದಿ ನೆಗೆಟಿ ಬಂದಿದ್ದು, ಇನ್ನೂ 1705 ಜನರ ವರದಿ ಬರಬೇಕಿದೆ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ.
ಎಸ್ಪಿ ಕ್ವಾರಂಟೈನ್
ಸೋಂಕಿತ ಪೊಲೀಸ್ ಅಧಿಕಾರಿಯ ಸಂಪರ್ಕ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ ಅವರು ಕಳೆದೆರಡು ದಿನಗಳಿಂದ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಡಿಎಅರ್ ಇನ್ಸಪೆಕ್ಟರ್ ಅವರಲ್ಲಿ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದ್ದು, ಎರಡು ದಿನ ಹಿಂದೆ ಸದರಿ ಅಧಿಕಾರಿ ಎಸ್ಪಿ ಅವರ ಸಂಪರ್ಕಕ್ಕೆ ಬಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ