ಕೇರಳ ಕೋವಿಡ್ ನಿರ್ವಹಣೆಗೆ ಬಹುಪರಾಕ್…ಶಿಕ್ಷಕಿ, ಆರೋಗ್ಯ ಸಚಿವೆ ಶೈಲಜಾ ಟೀಚರ್ ಜಯಭೇರಿ
ಕೇರಳದಲ್ಲಿ ಕೋವಿಡ್ ಸಂಬಂಧಿ ಸಾವಿನ ಸಂಖ್ಯೆಯೂ ಕಡಿಮೆಯಾಗಿರುವುದಾಗಿ ವರದಿ ತಿಳಿಸಿದೆ.
Team Udayavani, May 2, 2021, 6:59 PM IST
ತಿರುವನಂತಪುರಂ: ಕೋವಿಡ್ 19 ಸೋಂಕು ಕ್ಷಿಪ್ರವಾಗಿ ಹರಡುತ್ತಿದ್ದ ಸಂದರ್ಭದಲ್ಲಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿ ಎಲ್ಲರಿಂದ ಮೆಚ್ಚುಗೆ ಪಡೆದಿದ್ದ ಕೇರಳದ ಆರೋಗ್ಯ ಸಚಿವೆ, ಶಿಕ್ಷಕಿ ಕೆಕೆ ಶೈಲಜಾ ಅವರು ಕಣ್ಣೂರು ಜಿಲ್ಲೆಯ ಮಟ್ಟಾನ್ನೂರ್ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಫರ್ಧಿಯನ್ನು 60ಸಾವಿರಕ್ಕೂ ಹೆಚ್ಚು ಮತಗಳಿಂದ ಪರಾಜಯಗೊಳಿಸಿದ್ದಾರೆ.
ಇದನ್ನೂ ಓದಿ:ಪಶ್ಚಿಮಬಂಗಾಳ; ನಂದಿಗ್ರಾಮ ಫಲಿತಾಂಶದಲ್ಲಿ ಬಿಗ್ ಟ್ವಿಸ್ಟ್, ಮಮತಾಗೆ ಸೋಲು, ಅಧಿಕಾರಿಗೆ ಜಯ
ಸಿಪಿಐಎಂನ ಭದ್ರಕೋಟೆಯಾದ ಮಟ್ಟಾನ್ನೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕೆಕೆ ಶೈಲಜಾ ಟೀಚರ್ ಅವರು ರೆವಲ್ಯೂಶನರಿ ಸೋಶಿಯಲಿಸ್ಟ್ ಪಕ್ಷದ ಇಲಿಕ್ಕಲ್ ಅಗಸ್ಥಿಯನ್ನು 61ಸಾವಿರ ಮತಗಳಿಂದ ಸೋಲಿಸಿರುವುದಾಗಿ ವರದಿ ತಿಳಿಸಿದೆ. ಈ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಭಾರತೀಯ ಜನತಾ ಪಕ್ಷದ ಬಿಜು 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
ಕೆಕೆ ಶೈಲಜಾ ಅವರು ನಿವೃತ್ತ ಶಿಕ್ಷಕಿ, ಅವರು ಕೇರಳದ ಎಲ್ ಡಿಎಫ್ ಸರ್ಕಾರದಲ್ಲಿ ಕೋವಿಡ್ 19 ಸೋಂಕಿನ ಆರಂಭಿಕ ಹಂತದಲ್ಲಿ ಅದ್ಭುತ ಕೆಲಸ ಮಾಡುವ ಮೂಲಕ ಜನರ ಮನಗೆದ್ದಿದ್ದರು. ಕೇರಳದಲ್ಲಿ ಕೋವಿಡ್ ಸಂಬಂಧಿ ಸಾವಿನ ಸಂಖ್ಯೆಯೂ ಕಡಿಮೆಯಾಗಿರುವುದಾಗಿ ವರದಿ ತಿಳಿಸಿದೆ.
ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿಎಫ್ ಮೈತ್ರಿಕೂಟ 75 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಯುಡಿಎಫ್ 41 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಕೇರಳದಲ್ಲಿ ಎರಡನೇ ಬಾರಿ ಎಲ್ ಡಿಎಫ್ ಅಧಿಕಾರಕ್ಕೆ ಏರುತ್ತಿರುವುದು ರಾಜ್ಯದ ರಾಜಕೀಯದ ನಾಲ್ಕು ದಶಕಗಳ ಇತಿಹಾಸದಲ್ಲಿ ಹೊಸ ಮೈಲಿಗಲ್ಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್