ವಲಸೆ ಕಾರ್ಮಿಕರ ಬಗ್ಗೆ ವದಂತಿ ಹಬ್ಬಿ ವಿಡಿಯೋ : ಬಿಹಾರದ ವ್ಯಕ್ತಿ ಬಂಧನ
ತಮಿಳುನಾಡು ಪೊಲೀಸರಿಂದ 11 ಪ್ರಕರಣಗಳು ದಾಖಲು
Team Udayavani, Mar 12, 2023, 8:40 PM IST
ತಿರುಪುರ್ : ಫೇಸ್ಬುಕ್ನಲ್ಲಿ ಸುಳ್ಳು ಮಾಹಿತಿಯನ್ನು ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ತಿರುಪುರದ ವಲಸೆ ಕಾರ್ಮಿಕರ ಬಗ್ಗೆ ವದಂತಿಗಳನ್ನು ಹರಡಿದ್ದಕ್ಕಾಗಿ ಜಾರ್ಖಂಡ್ನಲ್ಲಿ ನೆಲೆಸಿರುವ ಬಿಹಾರದ 32 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ತಿರುಪುರ್ ಸೈಬರ್ ಕ್ರೈಮ್ನ ವಿಶೇಷ ತಂಡವು ತಮ್ಮ ಕಣ್ಗಾವಲು ಮುಂದುವರೆಸಿದ್ದು, ಆರೋಪಿ ಪ್ರಶಾಂತ್ಕುಮಾರ್ ಬಿಹಾರ ಮೂಲದವನಾಗಿದ್ದು , ಜಾರ್ಖಂಡ್ನ ಲತೇಹರ್ ಜಿಲ್ಲೆಯ ಹೆನೆಗರೆ ಗ್ರಾಮದಲ್ಲಿ ನೆಲೆಸಿದ್ದು, ಉತ್ತರ ಭಾರತದ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸುತ್ತಿರುವಂತೆ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದಕ್ಕಾಗಿ ಬಂಧಿಸಲಾಗಿದೆ.
ಮೊಕ್ಕಾಂ ಹೂಡಿದ್ದ ತಂಡವು ಮಾರ್ಚ್ 11 ರಂದು ಪ್ರಶಾಂತ್ಕುಮಾರ್ನನ್ನು ಬಂಧಿಸಿ ಲತೇಹಾರ್ನಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿತು. ಟ್ರಾನ್ಸಿಟ್ ವಾರಂಟ್ ಮೇಲೆ ಆರೋಪಿಯನ್ನು ತಿರುಪುರಕ್ಕೆ ಕರೆತಂದು 3ನೇ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿ ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವದಂತಿಗಳನ್ನು ಹಬ್ಬಿಸಿದ್ದಕ್ಕಾಗಿ ತಿರುಪುರ್ ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ತಮಿಳುನಾಡು ಪೊಲೀಸರು 11 ಪ್ರಕರಣಗಳನ್ನು ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ. ಎಲ್ಲಾ ವಲಸೆ ಕಾರ್ಮಿಕರು ರಾಜ್ಯದಲ್ಲಿ ಸುರಕ್ಷಿತವಾಗಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ತಮ್ಮ ಬಿಹಾರದ ಸಿಎಂ ನಿತೀಶ್ ಕುಮಾರ್ ಅವರಿಗೆ ಭರವಸೆ ನೀಡಿದ್ದರು. ಭಯವನ್ನು ಹರಡುವ, ವದಂತಿಗಳನ್ನು ಹರಡುವವರ ವಿರುದ್ಧ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು.