ಬಿಹಾರದಲ್ಲಿ ಜೆಡಿಯು, ಬಿಜೆಪಿ ಮೈತ್ರಿ ಸರ್ಕಾರ ಪತನ; 4 ಗಂಟೆಗೆ ರಾಜ್ಯಪಾಲರ ಭೇಟಿ: ನಿತೀಶ್
ಭಾರತೀಯ ಜನತಾ ಪಕ್ಷ ಕೂಡಾ ಸಂಜೆ 5ಗಂಟೆಗೆ ಸಭೆ ಕರೆದಿರುವುದಾಗಿ ಮೂಲಗಳು ಹೇಳಿವೆ.
Team Udayavani, Aug 9, 2022, 2:29 PM IST
ಪಾಟ್ನಾ: ಬಿಹಾರದಲ್ಲಿ ಬಿಜೆಪಿ ಜತೆಗಿನ ಮೈತ್ರಿಯನ್ನು ಕಡಿದುಕೊಳ್ಳಲು ಆಡಳಿತಾರೂಢ ನಿತೀಶ್ ಕುಮಾರ್ ನೇತೃತ್ವದ ಜೆಡಿಯುನ ಎಲ್ಲಾ ಶಾಸಕರು ಒಮ್ಮತದಿಂದ ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ: ಕಾಂಗ್ರೆಸ್ ಟೀಕೆ
ಎನ್ ಡಿಎ ಜತೆಗಿನ ಮೈತ್ರಿಯನ್ನು ಕಡಿದುಕೊಳ್ಳಲು ಮಂಗಳವಾರ (ಆಗಸ್ಟ್ 09) ಕರೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿದ್ದು, ಸಂಜೆ 4ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲು ನಿತೀಶ್ ಕುಮಾರ್ ಸಮಯಾವಕಾಶ ಕೇಳಿರುವುದಾಗಿ ವರದಿ ವಿವರಿಸಿದೆ.
ಎನ್ ಡಿಎ ಜತೆಗಿನ ಮೈತ್ರಿ ಕಡಿದುಕೊಂಡ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಾಗಿದೆ. ಗವರ್ನರ್ ಭೇಟಿಯ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ಬೆಳವಣಿಗೆ ಕುರಿತು ಮಾಹಿತಿ ನೀಡುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಬಿಹಾರದಲ್ಲಿ 2017ರಲ್ಲಿಯೂ ಕೂಡಾ ಆರ್ ಜೆಡಿ ಸಖ್ಯ ತೊರೆದು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ರಾತ್ರೋರಾತ್ರಿ ಜೆಡಿಯು ಹೊಸ ಸರ್ಕಾರ ರಚಿಸಿತ್ತು. ಇದೀಗ ಮತ್ತೆ ಬಿಜೆಪಿ ಜತೆಗಿನ ಮೈತ್ರಿ ಕಡಿದುಕೊಂಡು ವಿಪಕ್ಷಗಳ ಜತೆ ಕೈಜೋಡಿಸಲು ಜೆಡಿಯು ಮುಂದಾಗಿದೆ ಎಂದು ವರದಿ ತಿಳಿಸಿದೆ.
ಬಿಹಾರದಲ್ಲಿನ ದಿಢೀರ್ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಕೂಡಾ ಸಂಜೆ 5ಗಂಟೆಗೆ ಸಭೆ ಕರೆದಿರುವುದಾಗಿ ಮೂಲಗಳು ಹೇಳಿವೆ. ಇಂದು ಬೆಳಗ್ಗೆ ಪಾಟ್ನಾದಲ್ಲಿ ಲಾಲೂ ಪ್ರಸಾದ್ ಯಾದವ್ ನಿವಾಸದಲ್ಲಿ ರಾಷ್ಟ್ರೀಯ ಜನತಾ ದಳದ ಶಾಸಕರು, ಪಕ್ಷದ ಮುಖಂಡರು ಭೇಟಿ ನೀಡಿ, ಮಾತುಕತೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್