ದೆಹಲಿಯಲ್ಲಿ ಬೈಕ್‌ ಟ್ಯಾಕ್ಸಿಗೆ ಬಿತ್ತು ಬ್ರೇಕ್‌: ರ್‍ಯಾಪಿಡೋ, ಓಲಾ, ಊಬರ್‌ಗೆ ಪೆಟ್ಟು


Team Udayavani, Feb 21, 2023, 6:20 PM IST

ola

ನವದೆಹಲಿ: ದೆಹಲಿ ಸರ್ಕಾರ ಬೈಕ್‌ ಟ್ಯಾಕ್ಸಿಯನ್ನು ಬ್ಯಾನ್‌ ಮಾಡಿ ತಕ್ಷಣವೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಈ ಮೂಲಕ ರ್ಯಾಫಿಡೋ, ಓಲಾ, ಊಬರ್‌ಗೆ ಮರ್ಮಾಘಾತವಾದಂತಿದೆ.

ದೆಹಲಿಯ ಸಾರಿಗೆ ಇಲಾಖೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಬಿಳಿ ಬಣ್ಣದ ನಂಬರ್‌ ಪ್ಲೇಟ್‌ ಹೊಂದಿರುವ (ಖಾಸಗಿ) ವಾಹನಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ. ಖಾಸಗಿ ವಾಹನವನ್ನು ಸಾರ್ವಜನಿಕ ಉದ್ದೇಶಕ್ಕಾಗಿ ಬಳಸುವುದು 1988ರ ಮೋಟಾರು ವಾಹನ ಕಾಯ್ದೆಯನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಹೇಳಿದೆ. ಈ ಕಾರಣದಿಂದಲೇ ಬೈಕ್‌ ಟ್ಯಾಕ್ಸಿಯನ್ನು ಬ್ಯಾನ್‌ ಮಾಡಿರುವುದು ಕೇವಲ ಟ್ಯಾಕ್ಸಿ ಕಂಪನಿಗಳಿಗಷ್ಟೇ ಅಲ್ಲದೇ ಪ್ರಯಾಣಿಕರಿಗೂ ಬಿಸಿತುಪ್ಪವಾಗಿ ಪರಿಣಮಿಸಲಿದೆ.

ಸುಪ್ರೀಂ ಕೋರ್ಟ್‌ ಮಹಾರಾಷ್ಟ್ರದಲ್ಲಿ ಬೈಕ್‌ ಟ್ಯಾಕ್ಸಿಯನ್ನು ಬ್ಯಾನ್‌ ಮಾಡಿದ ಬೆನ್ನಲ್ಲೇ ಇದೀಗ ದೆಹಲಿ ಸರ್ಕಾರವೂ ಈ ಮಹತ್ವದ ಆದೇಶ ಹೊರಹಾಕಿದೆ. ಈ ಬೈಕ್‌ ಟ್ಯಾಕ್ಸಿಗಳು ನಿಯಮ ಉಲ್ಲಂಘಿಸುವುದಲ್ಲದೆ, ಇದರಲ್ಲಿ ತುರ್ತು ಕ್ರಮದ ಬಟನ್‌ ಇಲ್ಲದಿರುವುದರಿಂದ ಮಹಿಳೆಯರ ಸುರಕ್ಷತೆಗೆ ಇದು ಸೂಕ್ತವಲ್ಲ ಎಂಬುದಾಗಿಯೂ ಅಭಿಪ್ರಾಯ ಪಟ್ಟಿದೆ..

ಅಲ್ಲದೇ ಸರ್ಕಾರದ ಆದೇಶ ಮೀರಿ ಬೈಕ್‌ ಟ್ಯಾಕ್ಸಿ ಚಲಾಯಿಸಿದ್ರೆ 5,000 ರೂ ದಂಡವನ್ನೂ ವಿಧಿಸಲಾಗುತ್ತದೆ. ಎರಡನೇ ಬಾರಿಯೂ ಸಿಕ್ಕಿಬಿದ್ರೆ 10,000 ರೂ.ವರೆಗೆ ದಂಡ ವಿಧಿಸಲಾಗುವುದು ಎಂದು ದೆಹಲಿ ಸಾರಿಗೆ ಇಲಾಖೆ ಖಡಕ್‌ ಸೂಚನೆ ನೀಡಿದೆ.

ಒಲಾ, ಊಬರ್‌, ರ್‍ಯಾಪಿಡೋ ಇತ್ಯಾದಿ ಬೈಕ್‌ ಟ್ಯಾಕ್ಸಿಗಳೊಂದಿಗೆ ನೊಂದಾಯಿಸಲ್ಪಟ್ಟಿರುವ ಬೈಕ್‌ಗಳ ಮಾಹಿತಿಯನ್ನು ಸಾರಿಗೆ ಇಲಾಖೆ ಈಗಾಗಲೇ ತರಿಸಿಕೊಂಡಿದೆ. ತಪ್ಪು ಪುನರಾವರ್ತನೆಯಾದರೆ ಕನಿಷ್ಟ 3 ವರ್ಷಗಳವರೆಗೆ ಲೈಸೆನ್ಸ್‌ ನಿಷೇಧಗೊಳಿಸಲಾಗುವುದು ಎಂದು ಹೇಳಿದೆ.

ಬಾಡಿಗೆ ವಾಹನಗಳನ್ನು ಓಡಿಸಬೇಕಿದ್ರೆ ರಿಜಿಸ್ಟ್ರೇಷನ್‌ ಮಾರ್ಕ್‌ ಜೊತೆಗೆ ಹಳದಿ ಬಣ್ಣದ ನಂಬರ್‌ ಪ್ಲೇಟ್‌ ಹೊಂದಿರಬೇಕು. ಪೋಲಿಸ್‌ ತಪಾಸಣೆ ಬಳಿಕ PSV ಬ್ಯಾಜ್‌ ನೀಡಲಾಗುತ್ತದೆ. ಅಲ್ಲದೇ ಡ್ರೈವರ್‌ಗಳು ವಿಶೇಷ ವ್ಯಕ್ತಿತ್ವ ತಪಾಸಣೆಗೂ ಒಳಗಾಗಬೇಕಾಗುತ್ತದೆ.

ಈ ಬಗ್ಗೆ ಹೊರಡಿಸಿರುವ ಆದೇಶದ ಪ್ರತಿಯನ್ನುದೆಹಲಿಯ ಸಾರಿಗೆ ಸಚಿವ ಕೈಲಾಷ್‌ ಗೆಹ್ಲೋಟ್‌ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.