ಪ್ರಯಾಣಿಸುತ್ತಿದ್ದಾಗಲೇ ಏಕಾಏಕಿ ಹೊತ್ತಿ ಉರಿದ ಬೈಕ್…ಸವಾರ ಪ್ರಾಣಾಪಾಯದಿಂದ ಪಾರು!
ಬೆಂಕಿಯನ್ನು ಆರಿಸುವ ಮುನ್ನವೇ ಬೈಕ್ ಸಂಪೂರ್ಣವಾಗಿ ಸುಟ್ಟು ಹೋಗಿರುವುದಾಗಿ ವರದಿ ತಿಳಿಸಿದೆ.
Team Udayavani, Jun 2, 2022, 11:21 AM IST
ಚೆನ್ನೈ: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಏಕಾಏಕಿ ಬೆಂಕಿ ಹೊತ್ತಿಕೊಂಡಿರುವ ಘಟನೆ ತಮಿಳುನಾಡಿನ ಮಂದವೇಲಿ ಸಮೀಪ ಬುಧವಾರ (ಜೂನ್ 01) ರಾತ್ರಿ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಇದನ್ನೂ ಓದಿ:ಕೆಜಿಎಫ್ ಚಾಪ್ಟರ್ 2: 49 ದಿನಗಳ ಬಳಿಕ ಯಶ್ ಸಿನಿಮಾ ಗಳಿಸಿದ್ದೆಷ್ಟು?
ಚೆನ್ನೈ ನಿವಾಸಿ ಅರುಣ ರಾಮಲಿಂಗಂ ಅವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ರಸ್ತೆ ಮಧ್ಯೆದಲ್ಲಿಯೇ ರಾಮಲಿಂಗಂ ಅವರು ಕೆಳಕ್ಕೆ ಹಾರಿದ್ದು, ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವರದಿ ವಿವರಿಸಿದೆ.
ರಾಮಲಿಂಗಂ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಏತನ್ಮಧ್ಯೆ ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳ ಬಂದು ಬೆಂಕಿಯನ್ನು ಆರಿಸುವ ಮುನ್ನವೇ ಬೈಕ್ ಸಂಪೂರ್ಣವಾಗಿ ಸುಟ್ಟು ಹೋಗಿರುವುದಾಗಿ ವರದಿ ತಿಳಿಸಿದೆ.
ರಸ್ತೆ ಮಧ್ಯೆದಲ್ಲಿಯೇ ಬೈಕ್ ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಪ್ರಯಾಣಿಕರು ಆತಂಕಕ್ಕೊಳಗಾಗಿ, ಟ್ರಾಫಿಕ್ ಜಾಮ್ ಸಂಭವಿಸದಂತೆ ವಾಹನ ಸವಾರರು ನಿಧಾನವಾಗಿ ಸಾಗುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ತಮಿಳುನಾಡಿನಲ್ಲಿ ಕಳೆದ ಕೆಲವು ತಿಂಗಳಿನಲ್ಲಿ ಹಲವಾರು ಎಲೆಕ್ಟ್ರಿಕ್ ಸ್ಕೂಟರ್ ಗಳು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿತ್ತು. ಜೂನ್ 01ರಂದು ನಡೆದ ಘಟನೆಯಲ್ಲಿ ಯಾವ ಕಂಪನಿಯ ಬೈಕ್ ಎಂದು ಬಹಿರಂಗಗೊಳಿಸಿಲ್ಲ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್